Homeಕರ್ನಾಟಕಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಅತ್ತಿಬೆಲೆ ರಾಷ್ಟ್ರೀಯ ಹೆದ್ದಾರಿಯ ಟೋಲ್ ಶುಲ್ಕವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದ್ದು, ನಿತ್ಯ ಸಂಚರಿಸುವ ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಬೀಳಲಿದೆ.

ನಂದಿ ಎಕನಾಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ಸಂಸ್ಥೆಯು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ಯೋಜನೆಯಡಿ ಬರುವ ತನ್ನ ಪೆರಿಫೆರಲ್ ಮತ್ತು ಲಿಂಕ್ ರಸ್ತೆಗಳ ಟೋಲ್ ದರವನ್ನು ಸರಾಸರಿ ಶೇಕಡಾ 10% ರಷ್ಟು ಹೆಚ್ಚಿಸಿದೆ. 

ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗೆ ಸಾಗುವ 40.8 ಕಿ.ಮೀ ಉದ್ದದ ಪೆರಿಫೆರಲ್ ರಸ್ತೆ ಹಾಗೂ 8.1 ಕಿ.ಮೀ ಉದ್ದದ ಲಿಂಕ್ ರಸ್ತೆಯಲ್ಲಿ ಚಲಿಸುವ ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಇಂದಿನಿಂದ ಕನಿಷ್ಠ ಶೇ. 10% ರಷ್ಟು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಲೆಕ್ಕಾಚಾರದ ಸುಲಭಕ್ಕಾಗಿ ಹೆಚ್ಚುವರಿ ಮೊತ್ತವನ್ನು ಮುಂದಿನ ರೌಂಡ್ ಫಿಗರ್ ಸಂಖ್ಯೆಗೆ ಪೂರ್ಣಗೊಳಿಸಲಾಗಿದೆ. ಇದು ರಾಜ್ಯ ಸರ್ಕಾರದೊಂದಿಗಿನ ಒಪ್ಪಂದದ ಪ್ರಕಾರ ನಡೆಯುವ ವಾರ್ಷಿಕ ದರ ಪರಿಷ್ಕರಣೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

ನೈಸ್ ರಸ್ತೆ ಮೂಲಕ ಬನಶಂಕರಿ, ತಾವರೆಕೆರೆ, ಎಲೆಕ್ಟ್ರಾನಿಕ್ಸ್ ಸಿಟಿ ಭಾಗಗಳಿಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳಿಗೂ ಈ ದರ ಏರಿಕೆ ಅನ್ವಯವಾಗುವುದರಿಂದ, ಸಂಸ್ಥೆಯು ಈ ಹೊರೆಯನ್ನು ಟಿಕೆಟ್ ದರ ಹೆಚ್ಚಳದ ಮೂಲಕ ಸಾರ್ವಜನಿಕ ಪ್ರಯಾಣಿಕರ ಮೇಲೆಯೇ ಹಾಕುವ ಸಾಧ್ಯತೆ ದಟ್ಟವಾಗಿದೆ.

ಮತ್ತೊಂದೆಡೆ, ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗಿನ 9.98 ಕಿಮೀ ಉದ್ದದ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಮತ್ತು ಕರ್ನಾಟಕ-ತಮಿಳುನಾಡು ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ 44 ರ ಟೋಲ್ ದರವನ್ನು ಬೆಂಗಳೂರು ಎಲಿವೇಟೆಡ್ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ (BETPL) ಪರಿಷ್ಕರಿಸಿದೆ. ಸಗಟು ಬೆಲೆ ಸೂಚ್ಯಂಕದ (WPI) ಆಧಾರದ ಮೇಲೆ ಮಾಡಲಾಗಿರುವ ಈ ದರ ಪರಿಷ್ಕರಣೆಯು ಜೂನ್ 30, 2027 ರವರೆಗೆ ಜಾರಿಯಲ್ಲಿರಲಿದೆ.

ಹೊಸ ನಿಯಮದ ಪ್ರಕಾರ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ನಲ್ಲಿ ಕಾರು, ಜೀಪ್ ಮತ್ತು ವ್ಯಾನ್‌ಗಳ ಏಕಮುಖ (ಒನ್-ವೇ) ಸಂಚಾರದ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ದಿನದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಸಂಚರಿಸುವ ‘ಮಲ್ಟಿಪಲ್ ಜರ್ನಿ’ ಶುಲ್ಕವನ್ನು 95 ರೂಪಾಯಿಯಿಂದ 100 ರೂಪಾಯಿಗೆ ಹೆಚ್ಚಿಸಲಾಗಿದೆ. ಹಾಗೆಯೇ ಮಾಸಿಕ ಪಾಸ್ ದರವನ್ನು 1,885 ರೂಪಾಯಿಯಿಂದ 1,960 ರೂಪಾಯಿಗೆ ಏರಿಸಲಾಗಿದ್ದು, ನಿತ್ಯ ಓಡಾಡುವ ಐಟಿ ಉದ್ಯೋಗಿಗಳಿಗೆ ಪ್ರತಿ ತಿಂಗಳು 75 ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ದ್ವಿಚಕ್ರ ವಾಹನ ಸವಾರರ ಒನ್-ವೇ ಹಾಗೂ ಮಲ್ಟಿಪಲ್ ಟೋಲ್ ದರ ಯಥಾಸ್ಥಿತಿ ಮುಂದುವರಿದಿದ್ದರೂ, ಅವರ ಮಾಸಿಕ ಪಾಸ್ ದರವನ್ನು 755 ರೂಪಾಯಿಯಿಂದ 785 ರೂಪಾಯಿಗೆ ಹೆಚ್ಚಿಸಲಾಗಿದೆ.

ಇದೇ ವೇಳೆ, ಹೊಸೂರು ರಸ್ತೆಯ ಅತ್ತಿಬೆಲೆ ಟೋಲ್ ಪ್ಲಾಜಾದಲ್ಲಿಯೂ ದರ ಏರಿಕೆಯಾಗಿದ್ದು, ಕಾರು ಮತ್ತು ಜೀಪ್‌ಗಳ ದಿನದ ಮಲ್ಟಿಪಲ್ ಪ್ರಯಾಣದ ಶುಲ್ಕವನ್ನು 55 ರೂಪಾಯಿಯಿಂದ 60 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಒಟ್ಟಾರೆ ಒಂದೇ ದಿನ ಮೂರು ಪ್ರಮುಖ ಮಾರ್ಗಗಳ ಟೋಲ್ ದರಗಳು ದುಬಾರಿಯಾಗಿರುವುದು ಕಚೇರಿ ಕೆಲಸಗಳಿಗಾಗಿ ನಿತ್ಯ ಸಂಚರಿಸುವ ಮಧ್ಯಮ ವರ್ಗದ ವಾಹನ ಸವಾರರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....