Homeಮುಖಪುಟವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

ವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

- Advertisement -
- Advertisement -

ರೈತರು ಒಂದು ವರ್ಷ ನಡೆಸಿದ ಹೋರಾಟದ ಫಲವಾಗಿ ಬಂಡವಾಳಶಾಹಿಗಳ ಪರವಾದ ವಿವಾದಿತ ಕೃಷಿ ಕಾಯ್ದೆಗಳನ್ನು ಚುನಾವಣೆ ಹೊಸ್ತಿಲಲ್ಲಿ ವಾಪಸ್‌ ಪಡೆಯಲೇಬೇಕಾದ ಇಕ್ಕಟ್ಟಿಗೆ ಕೇಂದ್ರ ಸರ್ಕಾರ ಸಿಲುಕಿದ್ದು ಈಗ ಇತಿಹಾಸ. ಇಷ್ಟೆಲ್ಲ ಆದರೂ ಮತ್ತೆ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಸೂಚನೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ.

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

“ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿಗೆ ತಂದೆವು. ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರದಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ ಈ ಕಾನೂನುಗಳನ್ನು ಕೆಲವು ಜನರು ಇಷ್ಟಪಡಲಿಲ್ಲ” ಎಂದು ಕೃಷಿ ಸಚಿವರು ಹೇಳಿದ್ದಾರೆ.

“ಆದರೆ ಸರ್ಕಾರ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು” ಎಂದು ತಿಳಿಸಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸುವ ಎರಡು ದಿನಗಳ ಮೊದಲು, ಸರ್ಕಾರವು ಟಿಪ್ಪಣಿಯನ್ನು ನೀಡಿತ್ತು. ತೋಮರ್ ಅವರು ಸಹಿ ಮಾಡಿದ ಆ ಟಿಪ್ಪಣಿಯಲ್ಲಿ “ರೈತರ ಸ್ಥಿತಿಯನ್ನು ಸುಧಾರಿಸುವ ಪ್ರಯತ್ನಕ್ಕೆ ರೈತರ ಗುಂಪೊಂದು ಅಡ್ಡಿಯಾಗಿದೆ” ಎಂದು ದೂಷಿಸಲಾಗಿತ್ತು.

ಸಾವಿರಾರು ರೈತರು ಒಂದು ವರ್ಷ ಕಾಲ ದೆಹಲಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದರು. ಹೀಗಾಗಿ ಸರ್ಕಾರ ಭಾರೀ ಮುಜುಗರವನ್ನು ಅನುಭವಿಸಬೇಕಾಯಿತು. ಪಂಜಾಬ್‌ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರೈತರ ಮತಗಳು ಅಗತ್ಯವಾಗಿ ಬೇಕಿರುವುದರಿಂದ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕಾಯಿತು.

2024ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷಿ ಕಾನೂನುಗಳನ್ನು ಪುನರುಜ್ಜೀವನಗೊಳಿಸಲು ಮತ್ತೆ ಪ್ರಯತ್ನಿಸಬಹುದು ಎಂದು ರಾಜಕೀಯ ವಿಮರ್ಶಕರು ಹೇಳುತ್ತಾರೆ.

ಪೊಲೀಸರ ಕ್ರಮಗಳಿಂದ ರೈತರು ಸತ್ತಿಲ್ಲ

ಚಳವಳಿಯ ವೇಳೆ ಸಾವನ್ನಪ್ಪಿದ ರೈತರ ಕುರಿತು ಹಿಂದೊಮ್ಮೆ ಹೇಳಿಕೆ ನೀಡಿದ್ದ ತೋಮರ್‌, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಅವರು ಹೇಳಿದ್ದರು. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದರು.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.


ಇದನ್ನೂ ಓದಿರಿ: ರಾಜಕೀಯ ಪಕ್ಷಗಳ ಬೆಂಬಲವಿಲ್ಲದೇ ರೈತರ ಹೋರಾಟ ಯಶಸ್ಸು ಕಂಡದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...