Homeಮುಖಪುಟವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

ವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

- Advertisement -
- Advertisement -

ರೈತರು ಒಂದು ವರ್ಷ ನಡೆಸಿದ ಹೋರಾಟದ ಫಲವಾಗಿ ಬಂಡವಾಳಶಾಹಿಗಳ ಪರವಾದ ವಿವಾದಿತ ಕೃಷಿ ಕಾಯ್ದೆಗಳನ್ನು ಚುನಾವಣೆ ಹೊಸ್ತಿಲಲ್ಲಿ ವಾಪಸ್‌ ಪಡೆಯಲೇಬೇಕಾದ ಇಕ್ಕಟ್ಟಿಗೆ ಕೇಂದ್ರ ಸರ್ಕಾರ ಸಿಲುಕಿದ್ದು ಈಗ ಇತಿಹಾಸ. ಇಷ್ಟೆಲ್ಲ ಆದರೂ ಮತ್ತೆ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಸೂಚನೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ.

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

“ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿಗೆ ತಂದೆವು. ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರದಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ ಈ ಕಾನೂನುಗಳನ್ನು ಕೆಲವು ಜನರು ಇಷ್ಟಪಡಲಿಲ್ಲ” ಎಂದು ಕೃಷಿ ಸಚಿವರು ಹೇಳಿದ್ದಾರೆ.

“ಆದರೆ ಸರ್ಕಾರ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು” ಎಂದು ತಿಳಿಸಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸುವ ಎರಡು ದಿನಗಳ ಮೊದಲು, ಸರ್ಕಾರವು ಟಿಪ್ಪಣಿಯನ್ನು ನೀಡಿತ್ತು. ತೋಮರ್ ಅವರು ಸಹಿ ಮಾಡಿದ ಆ ಟಿಪ್ಪಣಿಯಲ್ಲಿ “ರೈತರ ಸ್ಥಿತಿಯನ್ನು ಸುಧಾರಿಸುವ ಪ್ರಯತ್ನಕ್ಕೆ ರೈತರ ಗುಂಪೊಂದು ಅಡ್ಡಿಯಾಗಿದೆ” ಎಂದು ದೂಷಿಸಲಾಗಿತ್ತು.

ಸಾವಿರಾರು ರೈತರು ಒಂದು ವರ್ಷ ಕಾಲ ದೆಹಲಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದರು. ಹೀಗಾಗಿ ಸರ್ಕಾರ ಭಾರೀ ಮುಜುಗರವನ್ನು ಅನುಭವಿಸಬೇಕಾಯಿತು. ಪಂಜಾಬ್‌ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರೈತರ ಮತಗಳು ಅಗತ್ಯವಾಗಿ ಬೇಕಿರುವುದರಿಂದ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕಾಯಿತು.

2024ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷಿ ಕಾನೂನುಗಳನ್ನು ಪುನರುಜ್ಜೀವನಗೊಳಿಸಲು ಮತ್ತೆ ಪ್ರಯತ್ನಿಸಬಹುದು ಎಂದು ರಾಜಕೀಯ ವಿಮರ್ಶಕರು ಹೇಳುತ್ತಾರೆ.

ಪೊಲೀಸರ ಕ್ರಮಗಳಿಂದ ರೈತರು ಸತ್ತಿಲ್ಲ

ಚಳವಳಿಯ ವೇಳೆ ಸಾವನ್ನಪ್ಪಿದ ರೈತರ ಕುರಿತು ಹಿಂದೊಮ್ಮೆ ಹೇಳಿಕೆ ನೀಡಿದ್ದ ತೋಮರ್‌, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಅವರು ಹೇಳಿದ್ದರು. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದರು.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.


ಇದನ್ನೂ ಓದಿರಿ: ರಾಜಕೀಯ ಪಕ್ಷಗಳ ಬೆಂಬಲವಿಲ್ಲದೇ ರೈತರ ಹೋರಾಟ ಯಶಸ್ಸು ಕಂಡದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...