Homeಮುಖಪುಟವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

ವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

- Advertisement -
- Advertisement -

ರೈತರು ಒಂದು ವರ್ಷ ನಡೆಸಿದ ಹೋರಾಟದ ಫಲವಾಗಿ ಬಂಡವಾಳಶಾಹಿಗಳ ಪರವಾದ ವಿವಾದಿತ ಕೃಷಿ ಕಾಯ್ದೆಗಳನ್ನು ಚುನಾವಣೆ ಹೊಸ್ತಿಲಲ್ಲಿ ವಾಪಸ್‌ ಪಡೆಯಲೇಬೇಕಾದ ಇಕ್ಕಟ್ಟಿಗೆ ಕೇಂದ್ರ ಸರ್ಕಾರ ಸಿಲುಕಿದ್ದು ಈಗ ಇತಿಹಾಸ. ಇಷ್ಟೆಲ್ಲ ಆದರೂ ಮತ್ತೆ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಸೂಚನೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ.

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

“ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿಗೆ ತಂದೆವು. ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರದಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ ಈ ಕಾನೂನುಗಳನ್ನು ಕೆಲವು ಜನರು ಇಷ್ಟಪಡಲಿಲ್ಲ” ಎಂದು ಕೃಷಿ ಸಚಿವರು ಹೇಳಿದ್ದಾರೆ.

“ಆದರೆ ಸರ್ಕಾರ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು” ಎಂದು ತಿಳಿಸಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸುವ ಎರಡು ದಿನಗಳ ಮೊದಲು, ಸರ್ಕಾರವು ಟಿಪ್ಪಣಿಯನ್ನು ನೀಡಿತ್ತು. ತೋಮರ್ ಅವರು ಸಹಿ ಮಾಡಿದ ಆ ಟಿಪ್ಪಣಿಯಲ್ಲಿ “ರೈತರ ಸ್ಥಿತಿಯನ್ನು ಸುಧಾರಿಸುವ ಪ್ರಯತ್ನಕ್ಕೆ ರೈತರ ಗುಂಪೊಂದು ಅಡ್ಡಿಯಾಗಿದೆ” ಎಂದು ದೂಷಿಸಲಾಗಿತ್ತು.

ಸಾವಿರಾರು ರೈತರು ಒಂದು ವರ್ಷ ಕಾಲ ದೆಹಲಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದರು. ಹೀಗಾಗಿ ಸರ್ಕಾರ ಭಾರೀ ಮುಜುಗರವನ್ನು ಅನುಭವಿಸಬೇಕಾಯಿತು. ಪಂಜಾಬ್‌ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರೈತರ ಮತಗಳು ಅಗತ್ಯವಾಗಿ ಬೇಕಿರುವುದರಿಂದ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕಾಯಿತು.

2024ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷಿ ಕಾನೂನುಗಳನ್ನು ಪುನರುಜ್ಜೀವನಗೊಳಿಸಲು ಮತ್ತೆ ಪ್ರಯತ್ನಿಸಬಹುದು ಎಂದು ರಾಜಕೀಯ ವಿಮರ್ಶಕರು ಹೇಳುತ್ತಾರೆ.

ಪೊಲೀಸರ ಕ್ರಮಗಳಿಂದ ರೈತರು ಸತ್ತಿಲ್ಲ

ಚಳವಳಿಯ ವೇಳೆ ಸಾವನ್ನಪ್ಪಿದ ರೈತರ ಕುರಿತು ಹಿಂದೊಮ್ಮೆ ಹೇಳಿಕೆ ನೀಡಿದ್ದ ತೋಮರ್‌, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಅವರು ಹೇಳಿದ್ದರು. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದರು.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.


ಇದನ್ನೂ ಓದಿರಿ: ರಾಜಕೀಯ ಪಕ್ಷಗಳ ಬೆಂಬಲವಿಲ್ಲದೇ ರೈತರ ಹೋರಾಟ ಯಶಸ್ಸು ಕಂಡದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...