Homeಮುಖಪುಟನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10 ತಿಂಗಳು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ಹೋರಾಟ ತೀವ್ರಗೊಳಿಸಲು ಸೆ.27ರಂದು ಭಾರತ್‌ ಬಂದ್‌ಗೆ ಕರೆ ಕೊಟ್ಟಿದ್ದು ಕರ್ನಾಟಕದಲ್ಲಿಯೂ ಬಂದ್ ನಡೆಸಲು ರೈತರಿಗೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿವೆ.

1. ಬಂದ್ ಬೆಂಬಲಿಸಿದ ಸಂಘಟನೆಗಳು

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ರಾಜ್ಯದಲ್ಲಿ ಬಂದ್ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ದಸಸಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಕಾರ್ಮಿಕ ಸಂಘಟನೆಗಳ ಯೂನಿಯನ್, ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ದಲಿತ ಹಕ್ಕುಗಳ ಸಮಿತಿ, ಕಾಂಗ್ರೆಸ್, ಎಸ್.ಡಿ.ಪಿ.ಐ, CITU, RYFI, ಭೂಮಿ‌ ಮತ್ತು ವಸತಿ ಹೋರಾಟ ಸಮಿತಿ, ದಲಿತ ಹಿತರಕ್ಷಣಾ ಒಕ್ಕೂಟ, ಬಿಎಸ್ಪಿ, ಸಿಪಿಐಎಂಎಲ್(ರೆಡ್ ಸ್ಟಾರ್), ಆಮ್ ಆದ್ಮಿ ಪಕ್ಷ, ಅಖಿಲ ಭಾರತ ವಕೀಲರ ಒಕ್ಕೂಟ, ಖಾಸಗಿ ಶಾಲೆಗಳ ಆಡಳಿತ ಮಂಡಳಿ  ಮತ್ತು ಎಪಿಎಂಸಿ ವರ್ತಕರ ಸಂಘಗಳು ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ.

2. ನೈತಿಕ ಬೆಂಬಲ ಘೋಷಿಸಿದ ಸಂಘಟನೆಗಳು

ಅಲ್ಲದೆ, ಹೋಟೆಲ್‌ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ವಕೀಲರ ಸಂಘಗಳು ಭಾರತ್‌ ಬಂದ್‌ಗೆ ನೈತಿಕ ಬೆಂಬಲ ನೀಡಿವೆ.

3. ಸಾರಿಗೆ ಸೌಲಭ್ಯಗಳು ಕಾರ್ಯಾಚರಣೆ ಮಾಡಲಿವೆ

ಆದರೆ, ಕೊರೊನಾ, ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವುದಿಲ್ಲ. ಲಾರಿಗಳು, ಆಟೋ, ಟ್ಯಾಕ್ಸಿ, ಓಲಾ, ಉಬರ್‌ಗಳು ರಸ್ತೆಗಿಳಿಯಲಿವೆ. ನೈತಿಕವಾಗಿ ಬಂದ್‌ಗೆ ಬೆಂಬಲವಿದೆ ಎಂದು ಸಂಘಟನೆಗಳು ತಿಳಿಸಿವೆ.

4. ಬಸ್‌ ಸಂಚಾರ

ಇನ್ನು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲುಗಳ ಸಂಚಾರ ಇರಲಿದೆ. ಸರ್ಕಾರಿ ಸಂಸ್ಥೆಗಳು, ಬ್ಯಾಂಕುಗಳು, ಶಾಲಾ-ಕಾಲೇಜುಗಳು ತೆರೆದಿರುತ್ತವೆ.

5. ಹೆದ್ದಾರಿ ತಡೆ

ರಾಜ್ಯಾದ್ಯಂತ ಹೆದ್ದಾರಿ ತಡೆಗೆ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನಲ್ಲಿಯೂ ವಿವಿಧ ಹೆದ್ದಾರಿಗಳು ತಡೆಯಲು ಸಂಘಟನೆಗಳು ಮುಂದಾಗಿವೆ. ಆದರೆ, ಬೆಂಗಳೂರಿನಲ್ಲಿ ರಸ್ತೆ ತಡೆಗೆ ಅವಕಾಶ ಕೊಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

6. ಮೌರ್ಯ ಸರ್ಕಲ್ ಬಳಿ ಧರಣಿ

ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ದಿನವೀಡಿ ಧರಣಿ ನಡೆಯಲಿದೆ.

7. ಟೌನ್‌ ಹಾಲ್‌ನಿಂದ ಮೆರವಣಿಗೆ

ಸೋಮವಾರ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ ವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ದಿಂದ ರೈತರನ್ನು ಬೆಂಬಲಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ.

8. ಬದಲಿ ಮಾರ್ಗ ಸೂಚನೆ

ರೈತರ ಮೆರವಣಿಗೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

9. ಕಪ್ಪು ಪಟ್ಟಿ ಧರಿಸಿ ಬೆಂಬಲ

ಬಹಳಷ್ಟು ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಬಂದ್ ಬೆಂಬಲಿಸಲು ನಿರ್ಧರಿಸಿದ್ದಾರೆ.

10. ಸಾಹಿತಿ, ಹೋರಾಟಗಾರರ ಬೆಂಬಲ

‘ಇದು ಕೇವಲ ರೈತರ ಬೇಡಿಕೆಯಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದಿರುವ ಸಾಹಿತಿಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...