Homeಮುಖಪುಟನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10 ತಿಂಗಳು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ಹೋರಾಟ ತೀವ್ರಗೊಳಿಸಲು ಸೆ.27ರಂದು ಭಾರತ್‌ ಬಂದ್‌ಗೆ ಕರೆ ಕೊಟ್ಟಿದ್ದು ಕರ್ನಾಟಕದಲ್ಲಿಯೂ ಬಂದ್ ನಡೆಸಲು ರೈತರಿಗೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿವೆ.

1. ಬಂದ್ ಬೆಂಬಲಿಸಿದ ಸಂಘಟನೆಗಳು

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ರಾಜ್ಯದಲ್ಲಿ ಬಂದ್ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ದಸಸಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಕಾರ್ಮಿಕ ಸಂಘಟನೆಗಳ ಯೂನಿಯನ್, ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ದಲಿತ ಹಕ್ಕುಗಳ ಸಮಿತಿ, ಕಾಂಗ್ರೆಸ್, ಎಸ್.ಡಿ.ಪಿ.ಐ, CITU, RYFI, ಭೂಮಿ‌ ಮತ್ತು ವಸತಿ ಹೋರಾಟ ಸಮಿತಿ, ದಲಿತ ಹಿತರಕ್ಷಣಾ ಒಕ್ಕೂಟ, ಬಿಎಸ್ಪಿ, ಸಿಪಿಐಎಂಎಲ್(ರೆಡ್ ಸ್ಟಾರ್), ಆಮ್ ಆದ್ಮಿ ಪಕ್ಷ, ಅಖಿಲ ಭಾರತ ವಕೀಲರ ಒಕ್ಕೂಟ, ಖಾಸಗಿ ಶಾಲೆಗಳ ಆಡಳಿತ ಮಂಡಳಿ  ಮತ್ತು ಎಪಿಎಂಸಿ ವರ್ತಕರ ಸಂಘಗಳು ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ.

2. ನೈತಿಕ ಬೆಂಬಲ ಘೋಷಿಸಿದ ಸಂಘಟನೆಗಳು

ಅಲ್ಲದೆ, ಹೋಟೆಲ್‌ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ವಕೀಲರ ಸಂಘಗಳು ಭಾರತ್‌ ಬಂದ್‌ಗೆ ನೈತಿಕ ಬೆಂಬಲ ನೀಡಿವೆ.

3. ಸಾರಿಗೆ ಸೌಲಭ್ಯಗಳು ಕಾರ್ಯಾಚರಣೆ ಮಾಡಲಿವೆ

ಆದರೆ, ಕೊರೊನಾ, ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವುದಿಲ್ಲ. ಲಾರಿಗಳು, ಆಟೋ, ಟ್ಯಾಕ್ಸಿ, ಓಲಾ, ಉಬರ್‌ಗಳು ರಸ್ತೆಗಿಳಿಯಲಿವೆ. ನೈತಿಕವಾಗಿ ಬಂದ್‌ಗೆ ಬೆಂಬಲವಿದೆ ಎಂದು ಸಂಘಟನೆಗಳು ತಿಳಿಸಿವೆ.

4. ಬಸ್‌ ಸಂಚಾರ

ಇನ್ನು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲುಗಳ ಸಂಚಾರ ಇರಲಿದೆ. ಸರ್ಕಾರಿ ಸಂಸ್ಥೆಗಳು, ಬ್ಯಾಂಕುಗಳು, ಶಾಲಾ-ಕಾಲೇಜುಗಳು ತೆರೆದಿರುತ್ತವೆ.

5. ಹೆದ್ದಾರಿ ತಡೆ

ರಾಜ್ಯಾದ್ಯಂತ ಹೆದ್ದಾರಿ ತಡೆಗೆ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನಲ್ಲಿಯೂ ವಿವಿಧ ಹೆದ್ದಾರಿಗಳು ತಡೆಯಲು ಸಂಘಟನೆಗಳು ಮುಂದಾಗಿವೆ. ಆದರೆ, ಬೆಂಗಳೂರಿನಲ್ಲಿ ರಸ್ತೆ ತಡೆಗೆ ಅವಕಾಶ ಕೊಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

6. ಮೌರ್ಯ ಸರ್ಕಲ್ ಬಳಿ ಧರಣಿ

ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ದಿನವೀಡಿ ಧರಣಿ ನಡೆಯಲಿದೆ.

7. ಟೌನ್‌ ಹಾಲ್‌ನಿಂದ ಮೆರವಣಿಗೆ

ಸೋಮವಾರ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ ವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ದಿಂದ ರೈತರನ್ನು ಬೆಂಬಲಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ.

8. ಬದಲಿ ಮಾರ್ಗ ಸೂಚನೆ

ರೈತರ ಮೆರವಣಿಗೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

9. ಕಪ್ಪು ಪಟ್ಟಿ ಧರಿಸಿ ಬೆಂಬಲ

ಬಹಳಷ್ಟು ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಬಂದ್ ಬೆಂಬಲಿಸಲು ನಿರ್ಧರಿಸಿದ್ದಾರೆ.

10. ಸಾಹಿತಿ, ಹೋರಾಟಗಾರರ ಬೆಂಬಲ

‘ಇದು ಕೇವಲ ರೈತರ ಬೇಡಿಕೆಯಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದಿರುವ ಸಾಹಿತಿಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...