Homeಮುಖಪುಟನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10 ತಿಂಗಳು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ಹೋರಾಟ ತೀವ್ರಗೊಳಿಸಲು ಸೆ.27ರಂದು ಭಾರತ್‌ ಬಂದ್‌ಗೆ ಕರೆ ಕೊಟ್ಟಿದ್ದು ಕರ್ನಾಟಕದಲ್ಲಿಯೂ ಬಂದ್ ನಡೆಸಲು ರೈತರಿಗೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿವೆ.

1. ಬಂದ್ ಬೆಂಬಲಿಸಿದ ಸಂಘಟನೆಗಳು

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ರಾಜ್ಯದಲ್ಲಿ ಬಂದ್ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ದಸಸಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಕಾರ್ಮಿಕ ಸಂಘಟನೆಗಳ ಯೂನಿಯನ್, ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ದಲಿತ ಹಕ್ಕುಗಳ ಸಮಿತಿ, ಕಾಂಗ್ರೆಸ್, ಎಸ್.ಡಿ.ಪಿ.ಐ, CITU, RYFI, ಭೂಮಿ‌ ಮತ್ತು ವಸತಿ ಹೋರಾಟ ಸಮಿತಿ, ದಲಿತ ಹಿತರಕ್ಷಣಾ ಒಕ್ಕೂಟ, ಬಿಎಸ್ಪಿ, ಸಿಪಿಐಎಂಎಲ್(ರೆಡ್ ಸ್ಟಾರ್), ಆಮ್ ಆದ್ಮಿ ಪಕ್ಷ, ಅಖಿಲ ಭಾರತ ವಕೀಲರ ಒಕ್ಕೂಟ, ಖಾಸಗಿ ಶಾಲೆಗಳ ಆಡಳಿತ ಮಂಡಳಿ  ಮತ್ತು ಎಪಿಎಂಸಿ ವರ್ತಕರ ಸಂಘಗಳು ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ.

2. ನೈತಿಕ ಬೆಂಬಲ ಘೋಷಿಸಿದ ಸಂಘಟನೆಗಳು

ಅಲ್ಲದೆ, ಹೋಟೆಲ್‌ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ವಕೀಲರ ಸಂಘಗಳು ಭಾರತ್‌ ಬಂದ್‌ಗೆ ನೈತಿಕ ಬೆಂಬಲ ನೀಡಿವೆ.

3. ಸಾರಿಗೆ ಸೌಲಭ್ಯಗಳು ಕಾರ್ಯಾಚರಣೆ ಮಾಡಲಿವೆ

ಆದರೆ, ಕೊರೊನಾ, ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವುದಿಲ್ಲ. ಲಾರಿಗಳು, ಆಟೋ, ಟ್ಯಾಕ್ಸಿ, ಓಲಾ, ಉಬರ್‌ಗಳು ರಸ್ತೆಗಿಳಿಯಲಿವೆ. ನೈತಿಕವಾಗಿ ಬಂದ್‌ಗೆ ಬೆಂಬಲವಿದೆ ಎಂದು ಸಂಘಟನೆಗಳು ತಿಳಿಸಿವೆ.

4. ಬಸ್‌ ಸಂಚಾರ

ಇನ್ನು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲುಗಳ ಸಂಚಾರ ಇರಲಿದೆ. ಸರ್ಕಾರಿ ಸಂಸ್ಥೆಗಳು, ಬ್ಯಾಂಕುಗಳು, ಶಾಲಾ-ಕಾಲೇಜುಗಳು ತೆರೆದಿರುತ್ತವೆ.

5. ಹೆದ್ದಾರಿ ತಡೆ

ರಾಜ್ಯಾದ್ಯಂತ ಹೆದ್ದಾರಿ ತಡೆಗೆ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನಲ್ಲಿಯೂ ವಿವಿಧ ಹೆದ್ದಾರಿಗಳು ತಡೆಯಲು ಸಂಘಟನೆಗಳು ಮುಂದಾಗಿವೆ. ಆದರೆ, ಬೆಂಗಳೂರಿನಲ್ಲಿ ರಸ್ತೆ ತಡೆಗೆ ಅವಕಾಶ ಕೊಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

6. ಮೌರ್ಯ ಸರ್ಕಲ್ ಬಳಿ ಧರಣಿ

ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ದಿನವೀಡಿ ಧರಣಿ ನಡೆಯಲಿದೆ.

7. ಟೌನ್‌ ಹಾಲ್‌ನಿಂದ ಮೆರವಣಿಗೆ

ಸೋಮವಾರ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ ವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ದಿಂದ ರೈತರನ್ನು ಬೆಂಬಲಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ.

8. ಬದಲಿ ಮಾರ್ಗ ಸೂಚನೆ

ರೈತರ ಮೆರವಣಿಗೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

9. ಕಪ್ಪು ಪಟ್ಟಿ ಧರಿಸಿ ಬೆಂಬಲ

ಬಹಳಷ್ಟು ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಬಂದ್ ಬೆಂಬಲಿಸಲು ನಿರ್ಧರಿಸಿದ್ದಾರೆ.

10. ಸಾಹಿತಿ, ಹೋರಾಟಗಾರರ ಬೆಂಬಲ

‘ಇದು ಕೇವಲ ರೈತರ ಬೇಡಿಕೆಯಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದಿರುವ ಸಾಹಿತಿಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...