Homeಮುಖಪುಟನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10 ತಿಂಗಳು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ಹೋರಾಟ ತೀವ್ರಗೊಳಿಸಲು ಸೆ.27ರಂದು ಭಾರತ್‌ ಬಂದ್‌ಗೆ ಕರೆ ಕೊಟ್ಟಿದ್ದು ಕರ್ನಾಟಕದಲ್ಲಿಯೂ ಬಂದ್ ನಡೆಸಲು ರೈತರಿಗೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿವೆ.

1. ಬಂದ್ ಬೆಂಬಲಿಸಿದ ಸಂಘಟನೆಗಳು

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ರಾಜ್ಯದಲ್ಲಿ ಬಂದ್ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ದಸಸಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಕಾರ್ಮಿಕ ಸಂಘಟನೆಗಳ ಯೂನಿಯನ್, ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ದಲಿತ ಹಕ್ಕುಗಳ ಸಮಿತಿ, ಕಾಂಗ್ರೆಸ್, ಎಸ್.ಡಿ.ಪಿ.ಐ, CITU, RYFI, ಭೂಮಿ‌ ಮತ್ತು ವಸತಿ ಹೋರಾಟ ಸಮಿತಿ, ದಲಿತ ಹಿತರಕ್ಷಣಾ ಒಕ್ಕೂಟ, ಬಿಎಸ್ಪಿ, ಸಿಪಿಐಎಂಎಲ್(ರೆಡ್ ಸ್ಟಾರ್), ಆಮ್ ಆದ್ಮಿ ಪಕ್ಷ, ಅಖಿಲ ಭಾರತ ವಕೀಲರ ಒಕ್ಕೂಟ, ಖಾಸಗಿ ಶಾಲೆಗಳ ಆಡಳಿತ ಮಂಡಳಿ  ಮತ್ತು ಎಪಿಎಂಸಿ ವರ್ತಕರ ಸಂಘಗಳು ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ.

2. ನೈತಿಕ ಬೆಂಬಲ ಘೋಷಿಸಿದ ಸಂಘಟನೆಗಳು

ಅಲ್ಲದೆ, ಹೋಟೆಲ್‌ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ವಕೀಲರ ಸಂಘಗಳು ಭಾರತ್‌ ಬಂದ್‌ಗೆ ನೈತಿಕ ಬೆಂಬಲ ನೀಡಿವೆ.

3. ಸಾರಿಗೆ ಸೌಲಭ್ಯಗಳು ಕಾರ್ಯಾಚರಣೆ ಮಾಡಲಿವೆ

ಆದರೆ, ಕೊರೊನಾ, ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವುದಿಲ್ಲ. ಲಾರಿಗಳು, ಆಟೋ, ಟ್ಯಾಕ್ಸಿ, ಓಲಾ, ಉಬರ್‌ಗಳು ರಸ್ತೆಗಿಳಿಯಲಿವೆ. ನೈತಿಕವಾಗಿ ಬಂದ್‌ಗೆ ಬೆಂಬಲವಿದೆ ಎಂದು ಸಂಘಟನೆಗಳು ತಿಳಿಸಿವೆ.

4. ಬಸ್‌ ಸಂಚಾರ

ಇನ್ನು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲುಗಳ ಸಂಚಾರ ಇರಲಿದೆ. ಸರ್ಕಾರಿ ಸಂಸ್ಥೆಗಳು, ಬ್ಯಾಂಕುಗಳು, ಶಾಲಾ-ಕಾಲೇಜುಗಳು ತೆರೆದಿರುತ್ತವೆ.

5. ಹೆದ್ದಾರಿ ತಡೆ

ರಾಜ್ಯಾದ್ಯಂತ ಹೆದ್ದಾರಿ ತಡೆಗೆ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನಲ್ಲಿಯೂ ವಿವಿಧ ಹೆದ್ದಾರಿಗಳು ತಡೆಯಲು ಸಂಘಟನೆಗಳು ಮುಂದಾಗಿವೆ. ಆದರೆ, ಬೆಂಗಳೂರಿನಲ್ಲಿ ರಸ್ತೆ ತಡೆಗೆ ಅವಕಾಶ ಕೊಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

6. ಮೌರ್ಯ ಸರ್ಕಲ್ ಬಳಿ ಧರಣಿ

ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ದಿನವೀಡಿ ಧರಣಿ ನಡೆಯಲಿದೆ.

7. ಟೌನ್‌ ಹಾಲ್‌ನಿಂದ ಮೆರವಣಿಗೆ

ಸೋಮವಾರ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ ವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ದಿಂದ ರೈತರನ್ನು ಬೆಂಬಲಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ.

8. ಬದಲಿ ಮಾರ್ಗ ಸೂಚನೆ

ರೈತರ ಮೆರವಣಿಗೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

9. ಕಪ್ಪು ಪಟ್ಟಿ ಧರಿಸಿ ಬೆಂಬಲ

ಬಹಳಷ್ಟು ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಬಂದ್ ಬೆಂಬಲಿಸಲು ನಿರ್ಧರಿಸಿದ್ದಾರೆ.

10. ಸಾಹಿತಿ, ಹೋರಾಟಗಾರರ ಬೆಂಬಲ

‘ಇದು ಕೇವಲ ರೈತರ ಬೇಡಿಕೆಯಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದಿರುವ ಸಾಹಿತಿಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....