Homeಕರ್ನಾಟಕಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ನಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಹೇಳಿದರೇ ಸಾಲದು. ನಮ್ಮ ಸಮಸ್ಯೆಗಳನ್ನು ಆಲಿಸಬೇಕು. ಈಗಲೂ ಸರ್ಕಾರ ಗಮನಹರಿಸದಿದ್ದರೇ, 42 ಸಾವಿರ ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಆಶಾ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಕ್ರೋಶ ಹೊರ ಹಾಕಿದ್ದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ.

ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ನಾಳೆ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಮತ್ತೆ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆ ನಡೆಸಲಿದೆ.

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ನಾಳೆ ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಇದನ್ನೂ ಓದಿ:  ಆಶಾರೋಧನ; ಈಡೇರದ ಬೇಡಿಕೆ, ಮತ್ತೆ ಆಹೋರಾತ್ರಿ ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ನಮಗೆ ರಾಜ್ಯ ಸರ್ಕಾರ ನೀಡುವುದು ಮಾಸಿಕ 4 ಸಾವಿರ ಸಹಾಯಧನ. ಕೇಂದ್ರದ ಸಹಾಯಧನ ಪಡೆಯಲು ನಾವು ಹಲವು RCH ಪೋರ್ಟಲ್ ಮುಖಾಂತರ ಹೋಗಬೇಕು. ಈ ಪೋರ್ಟಲ್‌ನಲ್ಲಿ ತುಂಬಾ ಸಮಸ್ಯೆಗಳಿವೆ. ಕೆಲಸ ಮಾಡಿದರೂ ಹಣ ಮಾತ್ರ ಕಡಿಮೆ ಬರುತ್ತದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನಗಳನ್ನುಒಟ್ಟಿಗೆ ಸೇರಿಸಿ 12 ಸಾವಿರ ವೇತನ ನಿಗದಿ ಮಾಡಿ ಎಂದು ಒತ್ತಾಯಿಸುತ್ತಿದ್ದೇವೆ ಎನ್ನುತ್ತಾರೆ ಡಾ.ನಾಗಲಕ್ಷ್ಮಿ.

PC: Prokerala

ನಾವು ಜನವರಿಯಿಂದಲೂ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದೇವೆ. NRC, CAA ಪ್ರತಿಭಟನೆಯಿಂದಾಗಿ ಅದು ಮುಂದುವರಿಯಲಿಲ್ಲ. ಆದರೆ ಕಳೆದ ಜುಲೈನಲ್ಲಿ 20 ದಿನಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದೇವೆ. ಮುಖ್ಯಮಂತ್ರಿ ಯಡಿಯೂರಪ್ಪ,  ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಶ್ರೀರಾಮುಲು 3 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ 50 ದಿನಗಳಾಗುತ್ತಾ ಬಂದರೂ ಒಂದೂ ಭರವಸೆ ಈಡೇರಿಸಿಲ್ಲ. ನಮ್ಮ ಸಮಸ್ಯೆಗಳ ಬಗ್ಗೆ ಯಾರು ತಲೆಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನಮ್ಮ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಡಾ.ನಾಗಲಕ್ಷ್ಮಿ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಆಶಾ ಕಾರ್ಯಕರ್ತೆಯರು ಕೋವಿಡ್ ಸಮಯದಲ್ಲಿಯೂ ದುಡಿಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸುತ್ತಿಲ್ಲ. ಮಾಸ್ಕ್, ಪಿಪಿಇ ಕಿಟ್, ಸ್ಯಾನಿಟೈಸರ್ ಸೇರಿದಂತೆ ಅವಶ್ಯಕ ಆರೋಗ್ಯ ರಕ್ಷಣಾ ಸಲಕರಣೆಗಳು ಸರ್ಕಾರ ನೀಡುತ್ತಿಲ್ಲ ಎಂಬುದು ಅವರ ಆರೋಪವಾಗಿದೆ.

ನಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಹೇಳಿದರೇ ಸಾಲದು. ನಮ್ಮ ಸಮಸ್ಯೆಗಳನ್ನು ಆಲಿಸಬೇಕು. ಈಗಲೂ ಸರ್ಕಾರ ಗಮನಹರಿಸದಿದ್ದರೇ, 42 ಸಾವಿರ ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಆಶಾ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಮತ್ತು ಮೈಸೂರಿನ ಸುಮಾರು 500-600 ಆಶಾ ಕಾರ್ಮಿಕರು ನಾಳೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಐಯುಟಿಯುಸಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ದುರ್ಗೇಶ್ ಪ್ರಕಾಶ್ ಹೇಳಿದ್ದಾರೆ.


ಇದನ್ನೂ ಓದಿ:  ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...