Homeಕರ್ನಾಟಕಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ನಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಹೇಳಿದರೇ ಸಾಲದು. ನಮ್ಮ ಸಮಸ್ಯೆಗಳನ್ನು ಆಲಿಸಬೇಕು. ಈಗಲೂ ಸರ್ಕಾರ ಗಮನಹರಿಸದಿದ್ದರೇ, 42 ಸಾವಿರ ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಆಶಾ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಕ್ರೋಶ ಹೊರ ಹಾಕಿದ್ದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ.

ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ನಾಳೆ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಮತ್ತೆ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆ ನಡೆಸಲಿದೆ.

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ನಾಳೆ ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಇದನ್ನೂ ಓದಿ:  ಆಶಾರೋಧನ; ಈಡೇರದ ಬೇಡಿಕೆ, ಮತ್ತೆ ಆಹೋರಾತ್ರಿ ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ನಮಗೆ ರಾಜ್ಯ ಸರ್ಕಾರ ನೀಡುವುದು ಮಾಸಿಕ 4 ಸಾವಿರ ಸಹಾಯಧನ. ಕೇಂದ್ರದ ಸಹಾಯಧನ ಪಡೆಯಲು ನಾವು ಹಲವು RCH ಪೋರ್ಟಲ್ ಮುಖಾಂತರ ಹೋಗಬೇಕು. ಈ ಪೋರ್ಟಲ್‌ನಲ್ಲಿ ತುಂಬಾ ಸಮಸ್ಯೆಗಳಿವೆ. ಕೆಲಸ ಮಾಡಿದರೂ ಹಣ ಮಾತ್ರ ಕಡಿಮೆ ಬರುತ್ತದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನಗಳನ್ನುಒಟ್ಟಿಗೆ ಸೇರಿಸಿ 12 ಸಾವಿರ ವೇತನ ನಿಗದಿ ಮಾಡಿ ಎಂದು ಒತ್ತಾಯಿಸುತ್ತಿದ್ದೇವೆ ಎನ್ನುತ್ತಾರೆ ಡಾ.ನಾಗಲಕ್ಷ್ಮಿ.

PC: Prokerala

ನಾವು ಜನವರಿಯಿಂದಲೂ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದೇವೆ. NRC, CAA ಪ್ರತಿಭಟನೆಯಿಂದಾಗಿ ಅದು ಮುಂದುವರಿಯಲಿಲ್ಲ. ಆದರೆ ಕಳೆದ ಜುಲೈನಲ್ಲಿ 20 ದಿನಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದೇವೆ. ಮುಖ್ಯಮಂತ್ರಿ ಯಡಿಯೂರಪ್ಪ,  ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಶ್ರೀರಾಮುಲು 3 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ 50 ದಿನಗಳಾಗುತ್ತಾ ಬಂದರೂ ಒಂದೂ ಭರವಸೆ ಈಡೇರಿಸಿಲ್ಲ. ನಮ್ಮ ಸಮಸ್ಯೆಗಳ ಬಗ್ಗೆ ಯಾರು ತಲೆಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನಮ್ಮ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಡಾ.ನಾಗಲಕ್ಷ್ಮಿ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಆಶಾ ಕಾರ್ಯಕರ್ತೆಯರು ಕೋವಿಡ್ ಸಮಯದಲ್ಲಿಯೂ ದುಡಿಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸುತ್ತಿಲ್ಲ. ಮಾಸ್ಕ್, ಪಿಪಿಇ ಕಿಟ್, ಸ್ಯಾನಿಟೈಸರ್ ಸೇರಿದಂತೆ ಅವಶ್ಯಕ ಆರೋಗ್ಯ ರಕ್ಷಣಾ ಸಲಕರಣೆಗಳು ಸರ್ಕಾರ ನೀಡುತ್ತಿಲ್ಲ ಎಂಬುದು ಅವರ ಆರೋಪವಾಗಿದೆ.

ನಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಹೇಳಿದರೇ ಸಾಲದು. ನಮ್ಮ ಸಮಸ್ಯೆಗಳನ್ನು ಆಲಿಸಬೇಕು. ಈಗಲೂ ಸರ್ಕಾರ ಗಮನಹರಿಸದಿದ್ದರೇ, 42 ಸಾವಿರ ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಆಶಾ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಮತ್ತು ಮೈಸೂರಿನ ಸುಮಾರು 500-600 ಆಶಾ ಕಾರ್ಮಿಕರು ನಾಳೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಐಯುಟಿಯುಸಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ದುರ್ಗೇಶ್ ಪ್ರಕಾಶ್ ಹೇಳಿದ್ದಾರೆ.


ಇದನ್ನೂ ಓದಿ:  ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...