Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...