Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...