Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...