Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...