Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...