Homeಮುಖಪುಟನಾಳೆ ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ನಾಳೆ ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದೆ.

“ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ದೇಶಾದ್ಯಂತ ತನಿಖಾ ಸಂಸ್ಥೆಯ ಸುಮಾರು 25 ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಳೆ ರಾಷ್ಟ್ರ ರಾಜಧಾನಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ರಾಹುಲ್‌ ಗಾಂಧಿ ಬರಲಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕರು ಮೆರವಣಿಗೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ‘ನಕಲಿ’ ಪ್ರಕರಣದಲ್ಲಿ ಸಿಲುಕಿಸಲು ಸರ್ಕಾರವು ಸಂಚು ರೂಪಿಸುತ್ತಿದೆ ಎಂದು ಟ್ಯಾಗೋರ್ ಆರೋಪಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ರಾಜಕೀಯ ವಿರೋಧಿಗಳನ್ನು ದುರ್ಬಲಗೊಳಿಸಲು ಜಾರಿ ಇ.ಡಿ. ಮತ್ತು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಅವರು ದೂರಿದ್ದಾರೆ.

ತನ್ನ ನಾಯಕರ ಮೇಲಿನ ಆರೋಪಗಳು “ನಕಲಿ ಮತ್ತು ಆಧಾರ ರಹಿತ” ಎಂದು ಕಾಂಗ್ರೆಸ್‌ ಸಮರ್ಥಿಸಿಕೊಂಡಿದೆ. ಸಮನ್ಸ್‌ಗಳು ಬಿಜೆಪಿಯ “ಸೇಡಿನ ರಾಜಕೀಯ”ದ ಭಾಗವಾಗಿವೆ ಎಂದು ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿರಿ: ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ದೇಶಾದ್ಯಂತ ವಿರೋಧ ಪಕ್ಷಗಳ ನಾಯಕರ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಜೆಪಿಯ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಲಿದೆ ಎಂದು ಪಕ್ಷದ ನಾಯಕರು ಹೇಳಿಕೆ ನೀಡಿದ್ದಾರೆ.

ವಿಚಾರಣೆಗೆ ಸಮನ್ಸ್ ಪಡೆದಿರುವ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.

ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....