Homeಮುಖಪುಟಬಹು ನಿರೀಕ್ಷಿತ "ಸೈರಾ ನರಸಿಂಹರೆಡ್ಡಿ" ಬಿಡುಗಡೆ : ಸಿನಿ ಪ್ರಿಯರ ಮನ ಗೆಲ್ಲುತ್ತಾ ಸೈರಾ?

ಬಹು ನಿರೀಕ್ಷಿತ “ಸೈರಾ ನರಸಿಂಹರೆಡ್ಡಿ” ಬಿಡುಗಡೆ : ಸಿನಿ ಪ್ರಿಯರ ಮನ ಗೆಲ್ಲುತ್ತಾ ಸೈರಾ?

- Advertisement -
- Advertisement -

ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ತೆಲುಗಿನ ಸೈರಾ ನರಸಿಂಹ ರೆಡ್ಡಿ ಚಿತ್ರ ಪಂಚಭಾಷೆಗಳಲ್ಲಿ ಇಂದು ವಿಶ್ವದಾದ್ಯಂತ ತೆರೆಕಂಡಿದೆ. ಟ್ರೇಲರ್ ಮೂಲಕ ಸಾಕಷ್ಟು ಸೆನ್ಸೇಷನ್ ಸೃಷ್ಟಿಸಿದ್ದ ಸೈರಾ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಸಿನಿ ಪ್ರಿಯರ ಕಾತುರಕ್ಕೆ ಕೊನೆಬಿದ್ದಿದೆ.

ಯಾರು ಈ ಸೈರಾ ನರಸಿಂಹರೆಡ್ಡಿ?
ಪ್ರಥಮ ಸ್ವಾತಂತ್ರ ಹೋರಾಟಕ್ಕೂ ಮುಂಚಿನ ಕಾಲ.. ಈಸ್ಟ್ ಇಂಡಿಯಾ ಕಂಪನಿಯ ದುರಾಡಳಿತದಿಂದ ಭಾರತೀಯ ಜನರು ಕಂಗಾಲಾಗಿದ್ದಾರೆ. ಆಗ ಬ್ರಿಟಿಷರು ರೈತವಾರಿ ಪದ್ಧತಿಯನ್ನು ಜಾರಿಗೆ ತರುತ್ತಾರೆ. ಈ ದುಬಾರಿ ತೆರಿಗೆ ಪದ್ಧತಿಯಿಂದ ಈಗಾಗಲೇ ಗಾಯಗೊಂಡಿದ್ದ ರೈತ ಸಮುದಾಯದ ಮೇಲೆ ಉಪ್ಪು ಸವರಿದಂತಾಗುತ್ತದೆ. ಸುಮಾರು ೫ ಸಾವಿರಕ್ಕೂ ಹೆಚ್ಚು ಜನರ ಈ ನೀತಿಯ ವಿರುದ್ಧ ದಂಗೆಯೇಳುತ್ತಾರೆ.. ಆ ದಂಗೆಗೆ ನೇತೃತ್ವ ಕೊಟ್ಟವರು ಉಯ್ಯಲವಾಡ ನರಸಿಂಹರೆಡ್ಡಿ…

ಆಂಧ್ರಪ್ರದೇಶದ ರಾಯಲಸೀಮಾ ಪ್ರಾಂತ್ಯದ ಕರ್ನೂಲ್ ಜಿಲ್ಲೆಯ ರಾಜನಾಗಿದ್ದ ಈ ಉಯ್ಯಲವಾಡ ನರಸಿಂಹರೆಡ್ಡಿಯವರು ಬ್ರಿಟಿಷರ ವಿರುದ್ಧ ನಡೆಸಿ ಫೆಬ್ರವರಿ ೨೨, ೧೮೪೭ರಲ್ಲಿ ಹತರಾದವರು. ಅವರ ಹೋರಾಟದ ಜೀವನವೇ ಸೈರಾ ನರಸಿಂಹರೆಡ್ಡಿ ಸಿನಿಮಾವಾಗಿ ಮೂಡಿಬಂದಿದೆ.

ಮೆಗಾಸ್ಟಾರ್ ಚಿರಂಜೀವಿ ನಾಯಕನಟನಾಗಿ ಅಭಿನಯಿಸಿರುವ ಈ ಸಿನಿಮಾವನ್ನು ಅವರ ಮಗ ರಾಮ್ ಚರಣ್ ನಿರ್ಮಾಣ ಮಾಡಿದ್ದು ಸುರೇಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ತೆಲುಗು, ತಮಿಳು, ಕನ್ನಡ, ಮಲೆಯಾಳಂ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಿರುವ, ನಯನತಾರ ನಾಯಕನಟಿಯಾಗಿರುವ ಈ ಚಿತ್ರದಲ್ಲಿ ಕನ್ನಡದ ಕಿಚ್ಚ ಸುದೀಪ್, ತಮಿಳಿನ ವಿಜಯ್ ಸೇಥುಪತಿ, ತಮನ್ನಾ, ಜಗಪತಿ ಬಾಬು ಸಹ ಅಭಿನಯಿಸಿದ್ದು ಅಮಿತಾಬ್ ಬಚ್ಚನ್ ರವರು ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ..

ಮೇಕಿಂಗ್ ನಿಂದಲೇ ಸದ್ದು ಮಾಡಿರುವ ಸೈರಾ, 270 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಕನ್ನಡದಲ್ಲಿಯೂ ಡಬ್ ಆಗಿರುವ ಕಾರಣದಿಂದ ಕನ್ನಡಾಭಿಮಾನಿಗಳು ಸಹ ಕನ್ನಡದಲ್ಲೇ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...