Homeಮುಖಪುಟ‘ನೀಟ್‌-2021’ ಪರೀಕ್ಷೆ - ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

‘ನೀಟ್‌-2021’ ಪರೀಕ್ಷೆ – ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

- Advertisement -
- Advertisement -

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ಅರ್ಹತಾ ಪರೀಕ್ಷೆಯಾಗಿರುವ, ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌ -2021) ಭಾನುವಾರ ನಡೆಯಲಿದೆ. ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆದರೆ ಈ ಬಾರಿ ಕೆಲವು ಹೊಸ ನಿಯಮಗಳನ್ನೂ ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಇದನ್ನು ಪಾಲಿಸುವುದು ಅವಶ್ಯವಾಗಿದೆ.

  • ವಿದ್ಯಾರ್ಥಿಗಳು ಪರೀಕ್ಷಾ ಸ್ಥಳಕ್ಕೆ ಹಾಜರಾಗುವ ಮೊದಲು ಕಡ್ಡಾಯವಾಗಿ ಫ್ರಿಸ್ಕಿಂಗ್‌ಗೆ ಒಳಗಾಗಬೇಕು. ವಿದ್ಯಾರ್ಥಿಗಳ ದೇಹದಲ್ಲಿ ಅಡಗಿರುವ ಲೋಹದ ವಸ್ತು, ಆಭರಣ, ಕ್ಯಾಲ್ಕುಲೇಟರ್​, ಮೊಬೈಲ್​ ಫೋನ್​ ನಂತಹ ವಸ್ತುವನ್ನು ಅವರನ್ನು ಮುಟ್ಟದೇ ಪತ್ತೆ ಹಚ್ಚುವ ವಿಧಾನವಾಗಿದೆ ಇದು. ಈ ಪ್ರಕ್ರಿಯೆ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಭರಣ ಸೇರಿದಂತೆ ಯಾವುದೇ ರೀತಿಯ ಲೋಹದ ವಸ್ತುವನ್ನು ದೇಹದಲ್ಲಿ ಇರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌’ ಬೇಡ: ನ್ಯಾಯಮೂರ್ತಿ ರಾಜನ್
  • ಕೊರೊನಾ ಹಿನ್ನಲೆಯಲ್ಲಿ ಪರೀಕ್ಷಾ ಕೊಠಡಿ ಒಳಗೆ 50ML ಹ್ಯಾಂಡ್​​ ಸ್ಯಾನಿಟೈಜರ್​ ಬಾಟಲ್‌ಗೆ ಅನುಮತಿ ನೀಡಲಾಗಿದೆ.
  • ಪಾರದರ್ಶಕ ಬಾಟಲಿಯಲ್ಲಿ ನೀರು, ಹಾಜರಾತಿ ಹಾಳೆಯಲ್ಲಿ ಅಂಟಿಸಲು ಅರ್ಜಿ ನಮೂನೆ, ತುಂಬಿದ ಆದರೆ ಸಹಿ ಮಾಡದ ಸ್ವಯಂ ಘೋಷಿತ ಪ್ರವೇಶ ಪತ್ರದ ಪ್ರಿಂಟ್ ಔಟ್ ನಮೂನೆ. ಪೋಸ್ಟ್‌ಕಾರ್ಡ್ ಫೋಟೋ, ಫೋಟೋ ಐಡಿ, ಪಿಡಬ್ಲ್ಯೂಡಿ ಪ್ರಮಾಣಪತ್ರ ಮತ್ತು ಲಿಖಿತ ಸಂಬಂಧಿತ ದಾಖಲೆಗಳನ್ನು ಅವಕಾಶ ಹೊಂದಿದ್ದರೆ ಮಾತ್ರ ತೆಗೆದುಕೊಂಡು ಹೋಗಬಹುದು.

ನೀಟ್‌-2021 ನಲ್ಲಿ ವಸ್ತ್ರ ಸಂಹಿತೆಯನ್ನೂ ಪರಿಚಯಿಸಲಾಗಿದೆ

  • ದಪ್ಪ ಅಡಿಭಾಗವಿರುವ ಪಾದರಕ್ಷೆ, ದೊಡ್ಡ ಗುಂಡಿಗಳನ್ನು ಹೊಂದಿರುವ ಉಡುಪುಗಳನ್ನು ಧರಿಸಲು ಅನುಮತಿ ಇಲ್ಲ.
  • ಗಂಡಸರು ಅರ್ಧ ತೋಳಿನ ಶರ್ಟ್, ಟೀ ಶರ್ಟ್ ಧರಿಸಬಹುದಾಗಿದೆ.
  • ಹಗುರವಾದ ಬಟ್ಟೆಗಳನ್ನು ಧರಿಸಬೇಕಾಗಿದ್ದು, ಝಿಪ್ ಕಿಸೆಗಳಿರುವ, ದೊಡ್ಡ ಗುಂಡಿಗಳು ಮತ್ತು ಹೆಚ್ಚಿನ ಕಸೂತಿ ಇರುವ ಬಟ್ಟೆಗಳನ್ನು ಧರಿಸಿರಬಾರದು.
  • ಸರಳವಾಗಿರುವ ಪ್ಯಾಂಟ್ ಧರಿಸಬಹುದಾಗಿದೆ.
  • ಮಹಿಳೆಯರು ಫುಲ್ ಸ್ಲೀವ್ಸ್ ಬಟ್ಟೆ, ವಿಸ್ತಾರವಾದ ಕಸೂತಿ, ಹೂವುಗಳು, ದೊಡ್ಡ ಗುಂಡಿಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಿರಬಾರದು. ಹಿಲ್ಡ್ಸ್​​ ಪಾದರಕ್ಷೆ, ದೊಡ್ಡ ಪಾಕೆಟ್ ಹೊಂದಿರುವ ಜೀನ್ಸ್ ಧರಿಸಬಾರದು.
  • ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
  • ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು N95 ಮುಖವಾಡಗಳನ್ನು ನೀಡಲಾಗುತ್ತದೆ.
  • ಅಭ್ಯರ್ಥಿಗಳು ಪರೀಕ್ಷೆಯ ಕೊನೆಯಲ್ಲಿ ಅಡ್ಮಿಟ್ ಕಾರ್ಡ್ ಅನ್ನು ಪರೀಕ್ಷಾ ಕೊಠಡಿಯ ಉಸ್ತುವಾರಿ ಹೊಂದಿರುವ ಇನ್ವಿಜಿಲೇಟರ್​ಗೆ ಹಸ್ತಾಂತರಿಸಬೇಕು.

ಇದನ್ನೂ ಓದಿ: ಇದು ನೀಟ್‌ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...