Homeಮುಖಪುಟ‘ನೀಟ್‌-2021’ ಪರೀಕ್ಷೆ - ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

‘ನೀಟ್‌-2021’ ಪರೀಕ್ಷೆ – ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

- Advertisement -
- Advertisement -

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ಅರ್ಹತಾ ಪರೀಕ್ಷೆಯಾಗಿರುವ, ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌ -2021) ಭಾನುವಾರ ನಡೆಯಲಿದೆ. ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆದರೆ ಈ ಬಾರಿ ಕೆಲವು ಹೊಸ ನಿಯಮಗಳನ್ನೂ ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಇದನ್ನು ಪಾಲಿಸುವುದು ಅವಶ್ಯವಾಗಿದೆ.

  • ವಿದ್ಯಾರ್ಥಿಗಳು ಪರೀಕ್ಷಾ ಸ್ಥಳಕ್ಕೆ ಹಾಜರಾಗುವ ಮೊದಲು ಕಡ್ಡಾಯವಾಗಿ ಫ್ರಿಸ್ಕಿಂಗ್‌ಗೆ ಒಳಗಾಗಬೇಕು. ವಿದ್ಯಾರ್ಥಿಗಳ ದೇಹದಲ್ಲಿ ಅಡಗಿರುವ ಲೋಹದ ವಸ್ತು, ಆಭರಣ, ಕ್ಯಾಲ್ಕುಲೇಟರ್​, ಮೊಬೈಲ್​ ಫೋನ್​ ನಂತಹ ವಸ್ತುವನ್ನು ಅವರನ್ನು ಮುಟ್ಟದೇ ಪತ್ತೆ ಹಚ್ಚುವ ವಿಧಾನವಾಗಿದೆ ಇದು. ಈ ಪ್ರಕ್ರಿಯೆ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಭರಣ ಸೇರಿದಂತೆ ಯಾವುದೇ ರೀತಿಯ ಲೋಹದ ವಸ್ತುವನ್ನು ದೇಹದಲ್ಲಿ ಇರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌’ ಬೇಡ: ನ್ಯಾಯಮೂರ್ತಿ ರಾಜನ್
  • ಕೊರೊನಾ ಹಿನ್ನಲೆಯಲ್ಲಿ ಪರೀಕ್ಷಾ ಕೊಠಡಿ ಒಳಗೆ 50ML ಹ್ಯಾಂಡ್​​ ಸ್ಯಾನಿಟೈಜರ್​ ಬಾಟಲ್‌ಗೆ ಅನುಮತಿ ನೀಡಲಾಗಿದೆ.
  • ಪಾರದರ್ಶಕ ಬಾಟಲಿಯಲ್ಲಿ ನೀರು, ಹಾಜರಾತಿ ಹಾಳೆಯಲ್ಲಿ ಅಂಟಿಸಲು ಅರ್ಜಿ ನಮೂನೆ, ತುಂಬಿದ ಆದರೆ ಸಹಿ ಮಾಡದ ಸ್ವಯಂ ಘೋಷಿತ ಪ್ರವೇಶ ಪತ್ರದ ಪ್ರಿಂಟ್ ಔಟ್ ನಮೂನೆ. ಪೋಸ್ಟ್‌ಕಾರ್ಡ್ ಫೋಟೋ, ಫೋಟೋ ಐಡಿ, ಪಿಡಬ್ಲ್ಯೂಡಿ ಪ್ರಮಾಣಪತ್ರ ಮತ್ತು ಲಿಖಿತ ಸಂಬಂಧಿತ ದಾಖಲೆಗಳನ್ನು ಅವಕಾಶ ಹೊಂದಿದ್ದರೆ ಮಾತ್ರ ತೆಗೆದುಕೊಂಡು ಹೋಗಬಹುದು.

ನೀಟ್‌-2021 ನಲ್ಲಿ ವಸ್ತ್ರ ಸಂಹಿತೆಯನ್ನೂ ಪರಿಚಯಿಸಲಾಗಿದೆ

  • ದಪ್ಪ ಅಡಿಭಾಗವಿರುವ ಪಾದರಕ್ಷೆ, ದೊಡ್ಡ ಗುಂಡಿಗಳನ್ನು ಹೊಂದಿರುವ ಉಡುಪುಗಳನ್ನು ಧರಿಸಲು ಅನುಮತಿ ಇಲ್ಲ.
  • ಗಂಡಸರು ಅರ್ಧ ತೋಳಿನ ಶರ್ಟ್, ಟೀ ಶರ್ಟ್ ಧರಿಸಬಹುದಾಗಿದೆ.
  • ಹಗುರವಾದ ಬಟ್ಟೆಗಳನ್ನು ಧರಿಸಬೇಕಾಗಿದ್ದು, ಝಿಪ್ ಕಿಸೆಗಳಿರುವ, ದೊಡ್ಡ ಗುಂಡಿಗಳು ಮತ್ತು ಹೆಚ್ಚಿನ ಕಸೂತಿ ಇರುವ ಬಟ್ಟೆಗಳನ್ನು ಧರಿಸಿರಬಾರದು.
  • ಸರಳವಾಗಿರುವ ಪ್ಯಾಂಟ್ ಧರಿಸಬಹುದಾಗಿದೆ.
  • ಮಹಿಳೆಯರು ಫುಲ್ ಸ್ಲೀವ್ಸ್ ಬಟ್ಟೆ, ವಿಸ್ತಾರವಾದ ಕಸೂತಿ, ಹೂವುಗಳು, ದೊಡ್ಡ ಗುಂಡಿಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಿರಬಾರದು. ಹಿಲ್ಡ್ಸ್​​ ಪಾದರಕ್ಷೆ, ದೊಡ್ಡ ಪಾಕೆಟ್ ಹೊಂದಿರುವ ಜೀನ್ಸ್ ಧರಿಸಬಾರದು.
  • ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
  • ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು N95 ಮುಖವಾಡಗಳನ್ನು ನೀಡಲಾಗುತ್ತದೆ.
  • ಅಭ್ಯರ್ಥಿಗಳು ಪರೀಕ್ಷೆಯ ಕೊನೆಯಲ್ಲಿ ಅಡ್ಮಿಟ್ ಕಾರ್ಡ್ ಅನ್ನು ಪರೀಕ್ಷಾ ಕೊಠಡಿಯ ಉಸ್ತುವಾರಿ ಹೊಂದಿರುವ ಇನ್ವಿಜಿಲೇಟರ್​ಗೆ ಹಸ್ತಾಂತರಿಸಬೇಕು.

ಇದನ್ನೂ ಓದಿ: ಇದು ನೀಟ್‌ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...