Homeಮುಖಪುಟ‘ನೀಟ್‌-2021’ ಪರೀಕ್ಷೆ - ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

‘ನೀಟ್‌-2021’ ಪರೀಕ್ಷೆ – ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

- Advertisement -
- Advertisement -

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ಅರ್ಹತಾ ಪರೀಕ್ಷೆಯಾಗಿರುವ, ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌ -2021) ಭಾನುವಾರ ನಡೆಯಲಿದೆ. ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆದರೆ ಈ ಬಾರಿ ಕೆಲವು ಹೊಸ ನಿಯಮಗಳನ್ನೂ ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಇದನ್ನು ಪಾಲಿಸುವುದು ಅವಶ್ಯವಾಗಿದೆ.

  • ವಿದ್ಯಾರ್ಥಿಗಳು ಪರೀಕ್ಷಾ ಸ್ಥಳಕ್ಕೆ ಹಾಜರಾಗುವ ಮೊದಲು ಕಡ್ಡಾಯವಾಗಿ ಫ್ರಿಸ್ಕಿಂಗ್‌ಗೆ ಒಳಗಾಗಬೇಕು. ವಿದ್ಯಾರ್ಥಿಗಳ ದೇಹದಲ್ಲಿ ಅಡಗಿರುವ ಲೋಹದ ವಸ್ತು, ಆಭರಣ, ಕ್ಯಾಲ್ಕುಲೇಟರ್​, ಮೊಬೈಲ್​ ಫೋನ್​ ನಂತಹ ವಸ್ತುವನ್ನು ಅವರನ್ನು ಮುಟ್ಟದೇ ಪತ್ತೆ ಹಚ್ಚುವ ವಿಧಾನವಾಗಿದೆ ಇದು. ಈ ಪ್ರಕ್ರಿಯೆ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಭರಣ ಸೇರಿದಂತೆ ಯಾವುದೇ ರೀತಿಯ ಲೋಹದ ವಸ್ತುವನ್ನು ದೇಹದಲ್ಲಿ ಇರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌’ ಬೇಡ: ನ್ಯಾಯಮೂರ್ತಿ ರಾಜನ್
  • ಕೊರೊನಾ ಹಿನ್ನಲೆಯಲ್ಲಿ ಪರೀಕ್ಷಾ ಕೊಠಡಿ ಒಳಗೆ 50ML ಹ್ಯಾಂಡ್​​ ಸ್ಯಾನಿಟೈಜರ್​ ಬಾಟಲ್‌ಗೆ ಅನುಮತಿ ನೀಡಲಾಗಿದೆ.
  • ಪಾರದರ್ಶಕ ಬಾಟಲಿಯಲ್ಲಿ ನೀರು, ಹಾಜರಾತಿ ಹಾಳೆಯಲ್ಲಿ ಅಂಟಿಸಲು ಅರ್ಜಿ ನಮೂನೆ, ತುಂಬಿದ ಆದರೆ ಸಹಿ ಮಾಡದ ಸ್ವಯಂ ಘೋಷಿತ ಪ್ರವೇಶ ಪತ್ರದ ಪ್ರಿಂಟ್ ಔಟ್ ನಮೂನೆ. ಪೋಸ್ಟ್‌ಕಾರ್ಡ್ ಫೋಟೋ, ಫೋಟೋ ಐಡಿ, ಪಿಡಬ್ಲ್ಯೂಡಿ ಪ್ರಮಾಣಪತ್ರ ಮತ್ತು ಲಿಖಿತ ಸಂಬಂಧಿತ ದಾಖಲೆಗಳನ್ನು ಅವಕಾಶ ಹೊಂದಿದ್ದರೆ ಮಾತ್ರ ತೆಗೆದುಕೊಂಡು ಹೋಗಬಹುದು.

ನೀಟ್‌-2021 ನಲ್ಲಿ ವಸ್ತ್ರ ಸಂಹಿತೆಯನ್ನೂ ಪರಿಚಯಿಸಲಾಗಿದೆ

  • ದಪ್ಪ ಅಡಿಭಾಗವಿರುವ ಪಾದರಕ್ಷೆ, ದೊಡ್ಡ ಗುಂಡಿಗಳನ್ನು ಹೊಂದಿರುವ ಉಡುಪುಗಳನ್ನು ಧರಿಸಲು ಅನುಮತಿ ಇಲ್ಲ.
  • ಗಂಡಸರು ಅರ್ಧ ತೋಳಿನ ಶರ್ಟ್, ಟೀ ಶರ್ಟ್ ಧರಿಸಬಹುದಾಗಿದೆ.
  • ಹಗುರವಾದ ಬಟ್ಟೆಗಳನ್ನು ಧರಿಸಬೇಕಾಗಿದ್ದು, ಝಿಪ್ ಕಿಸೆಗಳಿರುವ, ದೊಡ್ಡ ಗುಂಡಿಗಳು ಮತ್ತು ಹೆಚ್ಚಿನ ಕಸೂತಿ ಇರುವ ಬಟ್ಟೆಗಳನ್ನು ಧರಿಸಿರಬಾರದು.
  • ಸರಳವಾಗಿರುವ ಪ್ಯಾಂಟ್ ಧರಿಸಬಹುದಾಗಿದೆ.
  • ಮಹಿಳೆಯರು ಫುಲ್ ಸ್ಲೀವ್ಸ್ ಬಟ್ಟೆ, ವಿಸ್ತಾರವಾದ ಕಸೂತಿ, ಹೂವುಗಳು, ದೊಡ್ಡ ಗುಂಡಿಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಿರಬಾರದು. ಹಿಲ್ಡ್ಸ್​​ ಪಾದರಕ್ಷೆ, ದೊಡ್ಡ ಪಾಕೆಟ್ ಹೊಂದಿರುವ ಜೀನ್ಸ್ ಧರಿಸಬಾರದು.
  • ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
  • ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು N95 ಮುಖವಾಡಗಳನ್ನು ನೀಡಲಾಗುತ್ತದೆ.
  • ಅಭ್ಯರ್ಥಿಗಳು ಪರೀಕ್ಷೆಯ ಕೊನೆಯಲ್ಲಿ ಅಡ್ಮಿಟ್ ಕಾರ್ಡ್ ಅನ್ನು ಪರೀಕ್ಷಾ ಕೊಠಡಿಯ ಉಸ್ತುವಾರಿ ಹೊಂದಿರುವ ಇನ್ವಿಜಿಲೇಟರ್​ಗೆ ಹಸ್ತಾಂತರಿಸಬೇಕು.

ಇದನ್ನೂ ಓದಿ: ಇದು ನೀಟ್‌ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...