Homeಮುಖಪುಟಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

- Advertisement -
- Advertisement -

“ಶಾಂತಿ ಸೌಹಾರ್ದತೆಯನ್ನು ಎಲ್ಲರೂ ಕಾಯ್ದುಕೊಂಡು ಹೋಗಬೇಕು. ಪ್ರೀತಿಯಿಂದ ವರ್ತಿಸಿದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ.‌ ದ್ವೇಷದಿಂದಾಗಿ ಮನುಷ್ಯ ಶಾಂತಿ, ಸಮಾಧಾನ ಕಳೆದುಕೊಳ್ಳುತ್ತಾನೆ. ದ್ವೇಷ, ಅಸೂಯೆಯನ್ನು ಬಿಟ್ಟು‌ ಸೌಹಾರ್ದತೆಯಿಂದ, ಭ್ರಾತೃತ್ವ ಭಾವನೆಯಿಂದ ವರ್ತಿಸಿದಾಗ ಶಾಂತಿ ದೊರಕುತ್ತದೆ” ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದರು.

ಸಮಾಜದಲ್ಲಿ ಹೆಚ್ಚುತ್ತಿರುವ ಕೋಮುದ್ವೇಷದ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, “ದ್ವೇಷ ಸೃಷ್ಟಿಸುವ ಶಕ್ತಿಗಳನ್ನು ತಡೆಯುವ ಕೆಲಸ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಜನಾಂಗೀಯ ತಾರತಮ್ಯವನ್ನು ಅಧಿಕಾರಕ್ಕಾಗಿ ಬಳಸಬಾರದು, ಚುನಾವಣೆಯ ವಿಷಯವಾಗಿಸಬಾರದು” ಎಂದು ಹೇಳಿದರು.

“ಸಂವಿಧಾನಕ್ಕೆ ಎಲ್ಲರೂ ಬೆಲೆ ಕೊಡಬೇಕು. ಸಂವಿಧಾನದ ಪ್ರಕಾರ ಸೇವೆ ಸಲ್ಲಿಸುವುದಾಗಿ ಪ್ರಮಾಣವಚನ ಸ್ವೀಕರಿಸಿದವರು, ಅದಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು” ಎಂದರು.

ನಮ್ಮ ಲಿಂಗಾಯತ ಮಠಗಳು ಕೋಮು ಸೌಹಾರ್ದತೆಗೆ ಹೆಸರಾಗಿವೆ ಎಂದ ಅವರು, “ಎಲ್ಲ ಸಮುದಾಯಗಳು, ಸಮಾನ ಭಾವದಿಂದ ನಮ್ಮ ಮಠಗಳಲ್ಲಿ ಪಾಲ್ಗೊಳ್ಳುತ್ತಾರೆ.‌ ದಾಸೋಹಕ್ಕೆ, ಕೋಮುಸೌಹಾರ್ದತೆಗೆ ಲಿಂಗಾಯತ ಮಠಗಳು ಹೆಸರಾಗಿವೆ. ಇವನಾರವ ಎನ್ನದೆ ಇವ ನಮ್ಮವ ಎನ್ನುವ ಪರಂಪರೆ ನಮ್ಮದು” ಎಂದು ತಿಳಿಸಿದರು.

“ಬೇರೆ ದೇಶಗಳಲ್ಲಿರುವ ಹಿಂದೂಗಳಿಗೆ ಇದೇ ರೀತಿಯ ಧಕ್ಕೆಯಾದರೆ ಇವರು ಏನು ಮಾಡುತ್ತಾರೆ?‌ ಬೆಳಗಾವಿಯಲ್ಲಿ ಮರಾಠಿಗರಿಗೆ ತೊಂದರೆ ಕೊಟ್ಟರೆಂದು ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಅಡ್ಡಿಪಡಿಸಿದ್ದನ್ನು ನೋಡಿದ್ದೇವೆ. ಹೀಗಾಗಿ ಸಮಾಜದಲ್ಲಿ ಸಂಘರ್ಷ ಇರಬಾರದು” ಎಂದು ಎಚ್ಚರಿಸಿದರು.

ಕಾವಿ ವೇಷದಲ್ಲಿರುವ, ಸ್ವಾಮೀಜಿಗಳೆನಿಸಿಕೊಂಡಿರುವ ಕೆಲವರು ದ್ವೇಷ ಭಾಷಣ ಮಾಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮ ಸ್ವಾಮೀಜಿಯವರು, “ಅಂಥವರನ್ನು ಸ್ವಾಮೀಜಿಗಳು ಎಂದು ಹೇಗೆ ಅನ್ನುತ್ತೀರಿ? ಸಮಾಜದಲ್ಲಿ ಕಲಹ ಉಂಟು ಮಾಡೋರು ಸ್ವಾಮೀಜಿಗಳು ಹೇಗಾಗುತ್ತಾರೆ? ಎಲ್ಲರನ್ನು ಸಮಾನವಾಗಿ ಕಾಣುವವರು, ಎಲ್ಲರಿಗೂ ಪ್ರೀತಿಯನ್ನು ಹಂಚುವವರು ಸ್ವಾಮೀಜಿಗಳು. ಕೆಲವರಿಗೆ ಪ್ರೀತಿ, ಕೆಲವರಿಗೆ ದ್ವೇಷ ನೀಡೋರು ಸ್ವಾಮೀಜಿಗಳೇ ಅಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ, ಸಮಾಜ ವಿರೋಧಿ ಕೃತ್ಯಗಳಿಗೆ ಪ್ರತಿಬಂಧ ಹೇರಬೇಕು. ಜನರಿಗೆ ಉದ್ಯೋಗ ನೀಡಬೇಕು. ಕೆಲಸಗಳು ಇಲ್ಲದಿದ್ದಾಗ ಮನಸ್ಸು ಇಂತಹ ಕೃತ್ಯಗಳಲ್ಲಿ ತೊಡಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...