Homeಮುಖಪುಟಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

- Advertisement -
- Advertisement -

“ಶಾಂತಿ ಸೌಹಾರ್ದತೆಯನ್ನು ಎಲ್ಲರೂ ಕಾಯ್ದುಕೊಂಡು ಹೋಗಬೇಕು. ಪ್ರೀತಿಯಿಂದ ವರ್ತಿಸಿದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ.‌ ದ್ವೇಷದಿಂದಾಗಿ ಮನುಷ್ಯ ಶಾಂತಿ, ಸಮಾಧಾನ ಕಳೆದುಕೊಳ್ಳುತ್ತಾನೆ. ದ್ವೇಷ, ಅಸೂಯೆಯನ್ನು ಬಿಟ್ಟು‌ ಸೌಹಾರ್ದತೆಯಿಂದ, ಭ್ರಾತೃತ್ವ ಭಾವನೆಯಿಂದ ವರ್ತಿಸಿದಾಗ ಶಾಂತಿ ದೊರಕುತ್ತದೆ” ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದರು.

ಸಮಾಜದಲ್ಲಿ ಹೆಚ್ಚುತ್ತಿರುವ ಕೋಮುದ್ವೇಷದ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, “ದ್ವೇಷ ಸೃಷ್ಟಿಸುವ ಶಕ್ತಿಗಳನ್ನು ತಡೆಯುವ ಕೆಲಸ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಜನಾಂಗೀಯ ತಾರತಮ್ಯವನ್ನು ಅಧಿಕಾರಕ್ಕಾಗಿ ಬಳಸಬಾರದು, ಚುನಾವಣೆಯ ವಿಷಯವಾಗಿಸಬಾರದು” ಎಂದು ಹೇಳಿದರು.

“ಸಂವಿಧಾನಕ್ಕೆ ಎಲ್ಲರೂ ಬೆಲೆ ಕೊಡಬೇಕು. ಸಂವಿಧಾನದ ಪ್ರಕಾರ ಸೇವೆ ಸಲ್ಲಿಸುವುದಾಗಿ ಪ್ರಮಾಣವಚನ ಸ್ವೀಕರಿಸಿದವರು, ಅದಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು” ಎಂದರು.

ನಮ್ಮ ಲಿಂಗಾಯತ ಮಠಗಳು ಕೋಮು ಸೌಹಾರ್ದತೆಗೆ ಹೆಸರಾಗಿವೆ ಎಂದ ಅವರು, “ಎಲ್ಲ ಸಮುದಾಯಗಳು, ಸಮಾನ ಭಾವದಿಂದ ನಮ್ಮ ಮಠಗಳಲ್ಲಿ ಪಾಲ್ಗೊಳ್ಳುತ್ತಾರೆ.‌ ದಾಸೋಹಕ್ಕೆ, ಕೋಮುಸೌಹಾರ್ದತೆಗೆ ಲಿಂಗಾಯತ ಮಠಗಳು ಹೆಸರಾಗಿವೆ. ಇವನಾರವ ಎನ್ನದೆ ಇವ ನಮ್ಮವ ಎನ್ನುವ ಪರಂಪರೆ ನಮ್ಮದು” ಎಂದು ತಿಳಿಸಿದರು.

“ಬೇರೆ ದೇಶಗಳಲ್ಲಿರುವ ಹಿಂದೂಗಳಿಗೆ ಇದೇ ರೀತಿಯ ಧಕ್ಕೆಯಾದರೆ ಇವರು ಏನು ಮಾಡುತ್ತಾರೆ?‌ ಬೆಳಗಾವಿಯಲ್ಲಿ ಮರಾಠಿಗರಿಗೆ ತೊಂದರೆ ಕೊಟ್ಟರೆಂದು ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಅಡ್ಡಿಪಡಿಸಿದ್ದನ್ನು ನೋಡಿದ್ದೇವೆ. ಹೀಗಾಗಿ ಸಮಾಜದಲ್ಲಿ ಸಂಘರ್ಷ ಇರಬಾರದು” ಎಂದು ಎಚ್ಚರಿಸಿದರು.

ಕಾವಿ ವೇಷದಲ್ಲಿರುವ, ಸ್ವಾಮೀಜಿಗಳೆನಿಸಿಕೊಂಡಿರುವ ಕೆಲವರು ದ್ವೇಷ ಭಾಷಣ ಮಾಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮ ಸ್ವಾಮೀಜಿಯವರು, “ಅಂಥವರನ್ನು ಸ್ವಾಮೀಜಿಗಳು ಎಂದು ಹೇಗೆ ಅನ್ನುತ್ತೀರಿ? ಸಮಾಜದಲ್ಲಿ ಕಲಹ ಉಂಟು ಮಾಡೋರು ಸ್ವಾಮೀಜಿಗಳು ಹೇಗಾಗುತ್ತಾರೆ? ಎಲ್ಲರನ್ನು ಸಮಾನವಾಗಿ ಕಾಣುವವರು, ಎಲ್ಲರಿಗೂ ಪ್ರೀತಿಯನ್ನು ಹಂಚುವವರು ಸ್ವಾಮೀಜಿಗಳು. ಕೆಲವರಿಗೆ ಪ್ರೀತಿ, ಕೆಲವರಿಗೆ ದ್ವೇಷ ನೀಡೋರು ಸ್ವಾಮೀಜಿಗಳೇ ಅಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ, ಸಮಾಜ ವಿರೋಧಿ ಕೃತ್ಯಗಳಿಗೆ ಪ್ರತಿಬಂಧ ಹೇರಬೇಕು. ಜನರಿಗೆ ಉದ್ಯೋಗ ನೀಡಬೇಕು. ಕೆಲಸಗಳು ಇಲ್ಲದಿದ್ದಾಗ ಮನಸ್ಸು ಇಂತಹ ಕೃತ್ಯಗಳಲ್ಲಿ ತೊಡಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...