Homeಕರೋನಾ ತಲ್ಲಣಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಬಿಜೆಪಿ ಮುಖಂಡರ ಟ್ವೀಟ್‌ಗಳ ಕೆಳಗೆ "ಮ್ಯಾನಿಪುಲೆಟೆಡ್ ಮೀಡಿಯಾ (ತಿರುಚಲಾದ ವಿಷಯ)" ಎಂದು ಟ್ವಿಟರ್ ಹೆಸರಿಸಿದೆ.

- Advertisement -
- Advertisement -

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮಹತ್ವದ ಕ್ರಮ ಕೈಗೊಂಡಿದೆ. ಬಿಜೆಪಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಟ್ವಿಟರ್ ಅನುಮೋದಿಸಿದೆ.

ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಡ್ಡಿ ಮಾಡುವ ಬಗ್ಗೆ ಕಾಂಗ್ರೆಸ್ ‘ಟೂಲ್‌ಕಿಟ್’ ಎಂದು ಆರೋಪಿಸಿದ ಟ್ವೀಟ್ ಸ್ಕ್ರೀನ್‌ ಶಾಟ್‌ಗಳನ್ನು ಉಲ್ಲೇಖಿಸಿದ ಟ್ವೀಟರ್, ಇದೊಂದು ‘ಮ್ಯಾನಿಪುಲೆಟೆಡ್ ಮೀಡಿಯಾ’ (ತಿರುಚಲಾದ ವಿಷಯ) ಎಂದು ತಿಳಿಸಿದೆ. ಆ ಮೂಲಕ ಬಿಜೆಪಿಯ ಸುಳ್ಳು ಅಭಿಯಾನಕ್ಕೆ ತಡೆ ಒಡ್ಡಿದೆ.

ಟ್ವಿಟರ್ ತನ್ನ ನೀತಿಗಳ ವಿಭಾಗದಲ್ಲಿ ಹೀಗೆ ಹೇಳುತ್ತದೆ, “ನಾವು ಮಾಧ್ಯಮಗಳನ್ನು (ವೀಡಿಯೊಗಳು, ಆಡಿಯೋ ಮತ್ತು ಚಿತ್ರಗಳು) ಒಳಗೊಂಡಿರುವ ಟ್ವೀಟ್‌ಗಳನ್ನು ಜನರನ್ನು ದಾರಿತಪ್ಪಿಸುವ ಅಥವಾ ಮೋಸಗೊಳಿಸುವ ರೀತಿಯಲ್ಲಿ ರಚಿಸಿದ್ದರೆ ಅದನ್ನು ನಮ್ಮ ಕಂಪನಿ ಒಪ್ಪುವುದಿಲ್ಲ……”

ಈ ನೀತಿಯ ಪರಿಣಾಮವಾಗಿಯೇ ಸಾಂಕ್ರಾಮಿಕದ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡಿದ ಹಲವು ಬಿಜೆಪಿ ನಾಯಕರ ಟ್ವೀಟ್‌ಗಳನ್ನು ಉಲ್ಲೇಖಿಸಿ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಟ್ವೀಟರ್ ಹೇಳಿದೆ. ಅವರ ಟ್ವೀಟ್ ಕೆಳಗೆ ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಟ್ರಂಪ್ ಆಡಳಿತದ ಕೊನೆಯ ದಿನಗಳಲ್ಲಿ ಟ್ವಿಟರ್ ಆಗಾಗ್ಗೆ ಇದೇ ರೀತಿಯ ಎಚ್ಚರಿಕೆಗಳನ್ನು ಬಳಸುತ್ತಿತ್ತು. ಅಂತಿಮವಾಗಿ ಟ್ರಂಪ್ ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಿಂದ ಶಾಶ್ವತವಾಗಿ ಅಮಾನತುಗೊಳಿಸಲಾಯಿತು.

ಬಿಜೆಪಿಯ ಉನ್ನತ ನಾಯಕರು ತಮ್ಮ ಪಕ್ಷದ ಬಗ್ಗೆ ಅಪಾದಿಸಿದ ಬಗ್ಗೆ ‘ಟೂಲ್‌ಕಿಟ್’ ಎಂದು ಪ್ರಸಾರವಾದ ಸುದ್ದಿ ನಕಲಿ ಎಂದು ಕಾಂಗ್ರೆಸ್ ಟ್ವಿಟರ್ ಕಂಪನಿಗೆ ದೂರು ನೀಡಿದ ನಂತರ ಗುರುವಾರ ಸಂಜೆ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರ ಟ್ವೀಟ್ ಅನ್ನು ಬ್ಲಾಕ್ ಮಾಡಲಾಗಿತು. ಈ ಮೊದಲು, ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ ಸಮಗ್ರ ವರದಿಯನ್ನು ಪ್ರಕಟಿಸಿ, ಬಿಜೆಪಿಯ ಉನ್ನತ ನಾಯಕತ್ವವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ದಾಖಲೆಯನ್ನು ನಕಲಿ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಪ್ರಸಾರ ಮಾಡಿದೆ ಎಂದು ಬಯಲು ಮಾಡಿತ್ತು.

ಮಂಗಳವಾರ, ಹಲವಾರು ಉನ್ನತ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು #CongressToolKitExposed ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಕಾಂಗ್ರೆಸ್ ಮೇಲೆ ದಾಳಿ ನಡೆಸಲು ಆಪಾದಿತ ಟೂಲ್‌ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರಾಜಕೀಯ ಜಗಳ ಏರ್ಪಟ್ಟಿತ್ತು. ಕಾಂಗ್ರೆಸ್‌ನ ನಾಯಕರು ಕೋವಿಡ್ ರೋಗಿಗಳಿಗೆ ನೀಡಿದ ಸಹಾಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿತ್ತು. ಆದರೆ ಬಿಜೆಪಿ ಸೃಷ್ಟಿಸಿದ ಟೂಲ್‌ಕಿಟ್ ಡಾಕ್ಯುಮೆಂಟಿನಲ್ಲಿ ಇದೆಲ್ಲ ನಕಲಿ ಎಂಬಂತೆ ಬಿಂಬಿಸಲಾಗಿತ್ತು.

ಕುಂಭಮೇಳದ ಯಾತ್ರಿಗಳನ್ನು ಸೂಪರ್-ಸ್ಪ್ರೆಡರ್ಸ್ ಎಂದು ದೂಷಿಸಲು ಪ್ರಯತ್ನಿಸಲಾಗಿದೆ ಮತ್ತು ಈದ್ ಕೂಟಗಳಿಗೆ ಹಾಜರಾದವರ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ‘ಹಿಂದೂ ವಿರೋಧಿ’ ಪಕ್ಷಪಾತ ಮತ್ತು ಕೋಮುವಾದವನ್ನು ಉಂಟುಮಾಡುವ ಉದ್ದೇಶವನ್ನು ಸಾಬೀತುಪಡಿಸಿತು ಎಂದು ಬಿಜೆಪಿ ಅಪಾದಿಸಿತ್ತು.

#CongressToolKitExposed ಎಂಬ ತಪ್ಪು ಹ್ಯಾಶ್‌ಟ್ಯಾಗ್ ಅನ್ನು ಬಳಸಿದವರಲ್ಲಿ ಇತರ ಉನ್ನತ ಬಿಜೆಪಿ ನಾಯಕರಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕಿರೆಣ ರಿಜಿಜು, ಅನುರಾಗ್ ಠಾಕೂರ್ ಮತ್ತು ಪ್ರಹ್ಲಾದ್ ಜೋಶಿ, ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಿರೆನ್ ಸಿಂಗ್, ಸಂಸದರಾದ ರಾಜ್ಯವರ್ಧನ್ ರಾಥೋಡ್, ತೇಜಸ್ವಿ ಸೂರ್ಯ, ರಾಹುಲ್ ಕಸ್ವಾನ್, ಪಿಸಿ ಮೋಹನ್, ಶೋಭಾ ಕರಂದ್ಲಾಜೆ, ಮನೋಜ್ ಕೋಟಕ್, ವಿನಯ್ ಸಹಸ್ರಬುದ್ದೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಇದ್ದಾರೆ.

ಕಾಂಗ್ರೆಸ್ ತಕ್ಷಣವೇ ಟೂಲ್ಕಿಟ್ ಅನ್ನು ಕಟ್ಟುಕಥೆ ಎಂದು ಕರೆದು ಈ ಎಲ್ಲ ಬಿಜೆಪಿ ನಾಯಕರ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ, ಭಾರತದ ಜನರಿಗೆ ಅಗತ್ಯ ನೆರವು ನೀಡುವಲ್ಲಿ ಮೋದಿ ಸರ್ಕಾರದ ಮಹತ್ತರವಾದ ವೈಫಲ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು” ಬಿಜೆಪಿ ಈ ಮೋಸದ ಕೃತ್ಯವನ್ನು ಮಾಡಿದೆ ಎಂದು ಅದು ಆಪಾದಿಸಿತ್ತು.

ಆ ಟ್ವೀಟ್‌ಗಳನ್ನು ತೆಗೆದುಹಾಕಿ ಮತ್ತು ನಕಲಿ ಟೂಲ್‌ಕಿಟ್ ಹಂಚಿಕೊಂಡವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅದು ಟ್ವಿಟರ್‌ಗೆ ಪತ್ರ ಬರೆದಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ ದೇಶದಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದಾದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಬಿಜೆಪಿಯ ಉನ್ನತ ನಾಯಕರು ಟ್ವಿಟ್ಟರ್ ಅನ್ನು ಒಂದು ವೇದಿಕೆಯಾಗಿ ಬಳಸಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಅದರ ಐಟಿ ಸೆಲ್ ಆಗಾಗ್ಗೆ ರಾಜಕೀಯ ನಕಲಿ ಸುದ್ದಿಗಳನ್ನು ಸೃಷ್ಟಿಸುತ್ತದೆ, ಇದನ್ನು ಹಂಚಿಕೊಳ್ಳುವ ಅದರ ಹೆಚ್ಚಿನ ನಾಯಕರು ಮತ್ತು ಸದಸ್ಯರು ಸಾಮಾನ್ಯವಾಗಿ ಶಿಕ್ಷೆ ಅನುಭವಿಸುವುದಿಲ್ಲ ಎಂದು ದಿ ವೈರ್ ವರದಿ ಮಾಡಿದೆ.

ಅಂತಹ ಹಿನ್ನೆಲೆಯಲ್ಲಿ, ಟ್ವಿಟ್ಟರ್ ಸಂಬೀತ್ ಪತ್ರಾ ಅವರ ಟ್ವೀಟ್ ಅನ್ನು ತೆಗೆದು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

ಇದೇ ‘ಟೂಲ್‌ಕಿಟ್’ ಸಂದೇಶ ಹರಡಿದ ನಮ್ಮ ರಾಜ್ಯದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಕೂಡ ಈಗ ಜನರ ಮುಂದೆ ಬೆತ್ತಲಾಗಿದ್ದಾರೆ.


ಇದನ್ನೂ ಓದಿ; ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...