Homeಕರೋನಾ ತಲ್ಲಣಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಬಿಜೆಪಿ ಮುಖಂಡರ ಟ್ವೀಟ್‌ಗಳ ಕೆಳಗೆ "ಮ್ಯಾನಿಪುಲೆಟೆಡ್ ಮೀಡಿಯಾ (ತಿರುಚಲಾದ ವಿಷಯ)" ಎಂದು ಟ್ವಿಟರ್ ಹೆಸರಿಸಿದೆ.

- Advertisement -
- Advertisement -

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮಹತ್ವದ ಕ್ರಮ ಕೈಗೊಂಡಿದೆ. ಬಿಜೆಪಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಟ್ವಿಟರ್ ಅನುಮೋದಿಸಿದೆ.

ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಡ್ಡಿ ಮಾಡುವ ಬಗ್ಗೆ ಕಾಂಗ್ರೆಸ್ ‘ಟೂಲ್‌ಕಿಟ್’ ಎಂದು ಆರೋಪಿಸಿದ ಟ್ವೀಟ್ ಸ್ಕ್ರೀನ್‌ ಶಾಟ್‌ಗಳನ್ನು ಉಲ್ಲೇಖಿಸಿದ ಟ್ವೀಟರ್, ಇದೊಂದು ‘ಮ್ಯಾನಿಪುಲೆಟೆಡ್ ಮೀಡಿಯಾ’ (ತಿರುಚಲಾದ ವಿಷಯ) ಎಂದು ತಿಳಿಸಿದೆ. ಆ ಮೂಲಕ ಬಿಜೆಪಿಯ ಸುಳ್ಳು ಅಭಿಯಾನಕ್ಕೆ ತಡೆ ಒಡ್ಡಿದೆ.

ಟ್ವಿಟರ್ ತನ್ನ ನೀತಿಗಳ ವಿಭಾಗದಲ್ಲಿ ಹೀಗೆ ಹೇಳುತ್ತದೆ, “ನಾವು ಮಾಧ್ಯಮಗಳನ್ನು (ವೀಡಿಯೊಗಳು, ಆಡಿಯೋ ಮತ್ತು ಚಿತ್ರಗಳು) ಒಳಗೊಂಡಿರುವ ಟ್ವೀಟ್‌ಗಳನ್ನು ಜನರನ್ನು ದಾರಿತಪ್ಪಿಸುವ ಅಥವಾ ಮೋಸಗೊಳಿಸುವ ರೀತಿಯಲ್ಲಿ ರಚಿಸಿದ್ದರೆ ಅದನ್ನು ನಮ್ಮ ಕಂಪನಿ ಒಪ್ಪುವುದಿಲ್ಲ……”

ಈ ನೀತಿಯ ಪರಿಣಾಮವಾಗಿಯೇ ಸಾಂಕ್ರಾಮಿಕದ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡಿದ ಹಲವು ಬಿಜೆಪಿ ನಾಯಕರ ಟ್ವೀಟ್‌ಗಳನ್ನು ಉಲ್ಲೇಖಿಸಿ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಟ್ವೀಟರ್ ಹೇಳಿದೆ. ಅವರ ಟ್ವೀಟ್ ಕೆಳಗೆ ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಟ್ರಂಪ್ ಆಡಳಿತದ ಕೊನೆಯ ದಿನಗಳಲ್ಲಿ ಟ್ವಿಟರ್ ಆಗಾಗ್ಗೆ ಇದೇ ರೀತಿಯ ಎಚ್ಚರಿಕೆಗಳನ್ನು ಬಳಸುತ್ತಿತ್ತು. ಅಂತಿಮವಾಗಿ ಟ್ರಂಪ್ ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಿಂದ ಶಾಶ್ವತವಾಗಿ ಅಮಾನತುಗೊಳಿಸಲಾಯಿತು.

ಬಿಜೆಪಿಯ ಉನ್ನತ ನಾಯಕರು ತಮ್ಮ ಪಕ್ಷದ ಬಗ್ಗೆ ಅಪಾದಿಸಿದ ಬಗ್ಗೆ ‘ಟೂಲ್‌ಕಿಟ್’ ಎಂದು ಪ್ರಸಾರವಾದ ಸುದ್ದಿ ನಕಲಿ ಎಂದು ಕಾಂಗ್ರೆಸ್ ಟ್ವಿಟರ್ ಕಂಪನಿಗೆ ದೂರು ನೀಡಿದ ನಂತರ ಗುರುವಾರ ಸಂಜೆ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರ ಟ್ವೀಟ್ ಅನ್ನು ಬ್ಲಾಕ್ ಮಾಡಲಾಗಿತು. ಈ ಮೊದಲು, ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ ಸಮಗ್ರ ವರದಿಯನ್ನು ಪ್ರಕಟಿಸಿ, ಬಿಜೆಪಿಯ ಉನ್ನತ ನಾಯಕತ್ವವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ದಾಖಲೆಯನ್ನು ನಕಲಿ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಪ್ರಸಾರ ಮಾಡಿದೆ ಎಂದು ಬಯಲು ಮಾಡಿತ್ತು.

ಮಂಗಳವಾರ, ಹಲವಾರು ಉನ್ನತ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು #CongressToolKitExposed ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಕಾಂಗ್ರೆಸ್ ಮೇಲೆ ದಾಳಿ ನಡೆಸಲು ಆಪಾದಿತ ಟೂಲ್‌ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರಾಜಕೀಯ ಜಗಳ ಏರ್ಪಟ್ಟಿತ್ತು. ಕಾಂಗ್ರೆಸ್‌ನ ನಾಯಕರು ಕೋವಿಡ್ ರೋಗಿಗಳಿಗೆ ನೀಡಿದ ಸಹಾಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿತ್ತು. ಆದರೆ ಬಿಜೆಪಿ ಸೃಷ್ಟಿಸಿದ ಟೂಲ್‌ಕಿಟ್ ಡಾಕ್ಯುಮೆಂಟಿನಲ್ಲಿ ಇದೆಲ್ಲ ನಕಲಿ ಎಂಬಂತೆ ಬಿಂಬಿಸಲಾಗಿತ್ತು.

ಕುಂಭಮೇಳದ ಯಾತ್ರಿಗಳನ್ನು ಸೂಪರ್-ಸ್ಪ್ರೆಡರ್ಸ್ ಎಂದು ದೂಷಿಸಲು ಪ್ರಯತ್ನಿಸಲಾಗಿದೆ ಮತ್ತು ಈದ್ ಕೂಟಗಳಿಗೆ ಹಾಜರಾದವರ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ‘ಹಿಂದೂ ವಿರೋಧಿ’ ಪಕ್ಷಪಾತ ಮತ್ತು ಕೋಮುವಾದವನ್ನು ಉಂಟುಮಾಡುವ ಉದ್ದೇಶವನ್ನು ಸಾಬೀತುಪಡಿಸಿತು ಎಂದು ಬಿಜೆಪಿ ಅಪಾದಿಸಿತ್ತು.

#CongressToolKitExposed ಎಂಬ ತಪ್ಪು ಹ್ಯಾಶ್‌ಟ್ಯಾಗ್ ಅನ್ನು ಬಳಸಿದವರಲ್ಲಿ ಇತರ ಉನ್ನತ ಬಿಜೆಪಿ ನಾಯಕರಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕಿರೆಣ ರಿಜಿಜು, ಅನುರಾಗ್ ಠಾಕೂರ್ ಮತ್ತು ಪ್ರಹ್ಲಾದ್ ಜೋಶಿ, ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಿರೆನ್ ಸಿಂಗ್, ಸಂಸದರಾದ ರಾಜ್ಯವರ್ಧನ್ ರಾಥೋಡ್, ತೇಜಸ್ವಿ ಸೂರ್ಯ, ರಾಹುಲ್ ಕಸ್ವಾನ್, ಪಿಸಿ ಮೋಹನ್, ಶೋಭಾ ಕರಂದ್ಲಾಜೆ, ಮನೋಜ್ ಕೋಟಕ್, ವಿನಯ್ ಸಹಸ್ರಬುದ್ದೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಇದ್ದಾರೆ.

ಕಾಂಗ್ರೆಸ್ ತಕ್ಷಣವೇ ಟೂಲ್ಕಿಟ್ ಅನ್ನು ಕಟ್ಟುಕಥೆ ಎಂದು ಕರೆದು ಈ ಎಲ್ಲ ಬಿಜೆಪಿ ನಾಯಕರ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ, ಭಾರತದ ಜನರಿಗೆ ಅಗತ್ಯ ನೆರವು ನೀಡುವಲ್ಲಿ ಮೋದಿ ಸರ್ಕಾರದ ಮಹತ್ತರವಾದ ವೈಫಲ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು” ಬಿಜೆಪಿ ಈ ಮೋಸದ ಕೃತ್ಯವನ್ನು ಮಾಡಿದೆ ಎಂದು ಅದು ಆಪಾದಿಸಿತ್ತು.

ಆ ಟ್ವೀಟ್‌ಗಳನ್ನು ತೆಗೆದುಹಾಕಿ ಮತ್ತು ನಕಲಿ ಟೂಲ್‌ಕಿಟ್ ಹಂಚಿಕೊಂಡವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅದು ಟ್ವಿಟರ್‌ಗೆ ಪತ್ರ ಬರೆದಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ ದೇಶದಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದಾದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಬಿಜೆಪಿಯ ಉನ್ನತ ನಾಯಕರು ಟ್ವಿಟ್ಟರ್ ಅನ್ನು ಒಂದು ವೇದಿಕೆಯಾಗಿ ಬಳಸಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಅದರ ಐಟಿ ಸೆಲ್ ಆಗಾಗ್ಗೆ ರಾಜಕೀಯ ನಕಲಿ ಸುದ್ದಿಗಳನ್ನು ಸೃಷ್ಟಿಸುತ್ತದೆ, ಇದನ್ನು ಹಂಚಿಕೊಳ್ಳುವ ಅದರ ಹೆಚ್ಚಿನ ನಾಯಕರು ಮತ್ತು ಸದಸ್ಯರು ಸಾಮಾನ್ಯವಾಗಿ ಶಿಕ್ಷೆ ಅನುಭವಿಸುವುದಿಲ್ಲ ಎಂದು ದಿ ವೈರ್ ವರದಿ ಮಾಡಿದೆ.

ಅಂತಹ ಹಿನ್ನೆಲೆಯಲ್ಲಿ, ಟ್ವಿಟ್ಟರ್ ಸಂಬೀತ್ ಪತ್ರಾ ಅವರ ಟ್ವೀಟ್ ಅನ್ನು ತೆಗೆದು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

ಇದೇ ‘ಟೂಲ್‌ಕಿಟ್’ ಸಂದೇಶ ಹರಡಿದ ನಮ್ಮ ರಾಜ್ಯದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಕೂಡ ಈಗ ಜನರ ಮುಂದೆ ಬೆತ್ತಲಾಗಿದ್ದಾರೆ.


ಇದನ್ನೂ ಓದಿ; ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...