Homeಕರೋನಾ ತಲ್ಲಣಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಬಿಜೆಪಿ ಮುಖಂಡರ ಟ್ವೀಟ್‌ಗಳ ಕೆಳಗೆ "ಮ್ಯಾನಿಪುಲೆಟೆಡ್ ಮೀಡಿಯಾ (ತಿರುಚಲಾದ ವಿಷಯ)" ಎಂದು ಟ್ವಿಟರ್ ಹೆಸರಿಸಿದೆ.

- Advertisement -
- Advertisement -

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮಹತ್ವದ ಕ್ರಮ ಕೈಗೊಂಡಿದೆ. ಬಿಜೆಪಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಟ್ವಿಟರ್ ಅನುಮೋದಿಸಿದೆ.

ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಡ್ಡಿ ಮಾಡುವ ಬಗ್ಗೆ ಕಾಂಗ್ರೆಸ್ ‘ಟೂಲ್‌ಕಿಟ್’ ಎಂದು ಆರೋಪಿಸಿದ ಟ್ವೀಟ್ ಸ್ಕ್ರೀನ್‌ ಶಾಟ್‌ಗಳನ್ನು ಉಲ್ಲೇಖಿಸಿದ ಟ್ವೀಟರ್, ಇದೊಂದು ‘ಮ್ಯಾನಿಪುಲೆಟೆಡ್ ಮೀಡಿಯಾ’ (ತಿರುಚಲಾದ ವಿಷಯ) ಎಂದು ತಿಳಿಸಿದೆ. ಆ ಮೂಲಕ ಬಿಜೆಪಿಯ ಸುಳ್ಳು ಅಭಿಯಾನಕ್ಕೆ ತಡೆ ಒಡ್ಡಿದೆ.

ಟ್ವಿಟರ್ ತನ್ನ ನೀತಿಗಳ ವಿಭಾಗದಲ್ಲಿ ಹೀಗೆ ಹೇಳುತ್ತದೆ, “ನಾವು ಮಾಧ್ಯಮಗಳನ್ನು (ವೀಡಿಯೊಗಳು, ಆಡಿಯೋ ಮತ್ತು ಚಿತ್ರಗಳು) ಒಳಗೊಂಡಿರುವ ಟ್ವೀಟ್‌ಗಳನ್ನು ಜನರನ್ನು ದಾರಿತಪ್ಪಿಸುವ ಅಥವಾ ಮೋಸಗೊಳಿಸುವ ರೀತಿಯಲ್ಲಿ ರಚಿಸಿದ್ದರೆ ಅದನ್ನು ನಮ್ಮ ಕಂಪನಿ ಒಪ್ಪುವುದಿಲ್ಲ……”

ಈ ನೀತಿಯ ಪರಿಣಾಮವಾಗಿಯೇ ಸಾಂಕ್ರಾಮಿಕದ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡಿದ ಹಲವು ಬಿಜೆಪಿ ನಾಯಕರ ಟ್ವೀಟ್‌ಗಳನ್ನು ಉಲ್ಲೇಖಿಸಿ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಟ್ವೀಟರ್ ಹೇಳಿದೆ. ಅವರ ಟ್ವೀಟ್ ಕೆಳಗೆ ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಟ್ರಂಪ್ ಆಡಳಿತದ ಕೊನೆಯ ದಿನಗಳಲ್ಲಿ ಟ್ವಿಟರ್ ಆಗಾಗ್ಗೆ ಇದೇ ರೀತಿಯ ಎಚ್ಚರಿಕೆಗಳನ್ನು ಬಳಸುತ್ತಿತ್ತು. ಅಂತಿಮವಾಗಿ ಟ್ರಂಪ್ ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಿಂದ ಶಾಶ್ವತವಾಗಿ ಅಮಾನತುಗೊಳಿಸಲಾಯಿತು.

ಬಿಜೆಪಿಯ ಉನ್ನತ ನಾಯಕರು ತಮ್ಮ ಪಕ್ಷದ ಬಗ್ಗೆ ಅಪಾದಿಸಿದ ಬಗ್ಗೆ ‘ಟೂಲ್‌ಕಿಟ್’ ಎಂದು ಪ್ರಸಾರವಾದ ಸುದ್ದಿ ನಕಲಿ ಎಂದು ಕಾಂಗ್ರೆಸ್ ಟ್ವಿಟರ್ ಕಂಪನಿಗೆ ದೂರು ನೀಡಿದ ನಂತರ ಗುರುವಾರ ಸಂಜೆ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರ ಟ್ವೀಟ್ ಅನ್ನು ಬ್ಲಾಕ್ ಮಾಡಲಾಗಿತು. ಈ ಮೊದಲು, ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ ಸಮಗ್ರ ವರದಿಯನ್ನು ಪ್ರಕಟಿಸಿ, ಬಿಜೆಪಿಯ ಉನ್ನತ ನಾಯಕತ್ವವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ದಾಖಲೆಯನ್ನು ನಕಲಿ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಪ್ರಸಾರ ಮಾಡಿದೆ ಎಂದು ಬಯಲು ಮಾಡಿತ್ತು.

ಮಂಗಳವಾರ, ಹಲವಾರು ಉನ್ನತ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು #CongressToolKitExposed ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಕಾಂಗ್ರೆಸ್ ಮೇಲೆ ದಾಳಿ ನಡೆಸಲು ಆಪಾದಿತ ಟೂಲ್‌ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರಾಜಕೀಯ ಜಗಳ ಏರ್ಪಟ್ಟಿತ್ತು. ಕಾಂಗ್ರೆಸ್‌ನ ನಾಯಕರು ಕೋವಿಡ್ ರೋಗಿಗಳಿಗೆ ನೀಡಿದ ಸಹಾಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿತ್ತು. ಆದರೆ ಬಿಜೆಪಿ ಸೃಷ್ಟಿಸಿದ ಟೂಲ್‌ಕಿಟ್ ಡಾಕ್ಯುಮೆಂಟಿನಲ್ಲಿ ಇದೆಲ್ಲ ನಕಲಿ ಎಂಬಂತೆ ಬಿಂಬಿಸಲಾಗಿತ್ತು.

ಕುಂಭಮೇಳದ ಯಾತ್ರಿಗಳನ್ನು ಸೂಪರ್-ಸ್ಪ್ರೆಡರ್ಸ್ ಎಂದು ದೂಷಿಸಲು ಪ್ರಯತ್ನಿಸಲಾಗಿದೆ ಮತ್ತು ಈದ್ ಕೂಟಗಳಿಗೆ ಹಾಜರಾದವರ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ‘ಹಿಂದೂ ವಿರೋಧಿ’ ಪಕ್ಷಪಾತ ಮತ್ತು ಕೋಮುವಾದವನ್ನು ಉಂಟುಮಾಡುವ ಉದ್ದೇಶವನ್ನು ಸಾಬೀತುಪಡಿಸಿತು ಎಂದು ಬಿಜೆಪಿ ಅಪಾದಿಸಿತ್ತು.

#CongressToolKitExposed ಎಂಬ ತಪ್ಪು ಹ್ಯಾಶ್‌ಟ್ಯಾಗ್ ಅನ್ನು ಬಳಸಿದವರಲ್ಲಿ ಇತರ ಉನ್ನತ ಬಿಜೆಪಿ ನಾಯಕರಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕಿರೆಣ ರಿಜಿಜು, ಅನುರಾಗ್ ಠಾಕೂರ್ ಮತ್ತು ಪ್ರಹ್ಲಾದ್ ಜೋಶಿ, ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಿರೆನ್ ಸಿಂಗ್, ಸಂಸದರಾದ ರಾಜ್ಯವರ್ಧನ್ ರಾಥೋಡ್, ತೇಜಸ್ವಿ ಸೂರ್ಯ, ರಾಹುಲ್ ಕಸ್ವಾನ್, ಪಿಸಿ ಮೋಹನ್, ಶೋಭಾ ಕರಂದ್ಲಾಜೆ, ಮನೋಜ್ ಕೋಟಕ್, ವಿನಯ್ ಸಹಸ್ರಬುದ್ದೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಇದ್ದಾರೆ.

ಕಾಂಗ್ರೆಸ್ ತಕ್ಷಣವೇ ಟೂಲ್ಕಿಟ್ ಅನ್ನು ಕಟ್ಟುಕಥೆ ಎಂದು ಕರೆದು ಈ ಎಲ್ಲ ಬಿಜೆಪಿ ನಾಯಕರ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ, ಭಾರತದ ಜನರಿಗೆ ಅಗತ್ಯ ನೆರವು ನೀಡುವಲ್ಲಿ ಮೋದಿ ಸರ್ಕಾರದ ಮಹತ್ತರವಾದ ವೈಫಲ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು” ಬಿಜೆಪಿ ಈ ಮೋಸದ ಕೃತ್ಯವನ್ನು ಮಾಡಿದೆ ಎಂದು ಅದು ಆಪಾದಿಸಿತ್ತು.

ಆ ಟ್ವೀಟ್‌ಗಳನ್ನು ತೆಗೆದುಹಾಕಿ ಮತ್ತು ನಕಲಿ ಟೂಲ್‌ಕಿಟ್ ಹಂಚಿಕೊಂಡವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅದು ಟ್ವಿಟರ್‌ಗೆ ಪತ್ರ ಬರೆದಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ ದೇಶದಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದಾದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಬಿಜೆಪಿಯ ಉನ್ನತ ನಾಯಕರು ಟ್ವಿಟ್ಟರ್ ಅನ್ನು ಒಂದು ವೇದಿಕೆಯಾಗಿ ಬಳಸಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಅದರ ಐಟಿ ಸೆಲ್ ಆಗಾಗ್ಗೆ ರಾಜಕೀಯ ನಕಲಿ ಸುದ್ದಿಗಳನ್ನು ಸೃಷ್ಟಿಸುತ್ತದೆ, ಇದನ್ನು ಹಂಚಿಕೊಳ್ಳುವ ಅದರ ಹೆಚ್ಚಿನ ನಾಯಕರು ಮತ್ತು ಸದಸ್ಯರು ಸಾಮಾನ್ಯವಾಗಿ ಶಿಕ್ಷೆ ಅನುಭವಿಸುವುದಿಲ್ಲ ಎಂದು ದಿ ವೈರ್ ವರದಿ ಮಾಡಿದೆ.

ಅಂತಹ ಹಿನ್ನೆಲೆಯಲ್ಲಿ, ಟ್ವಿಟ್ಟರ್ ಸಂಬೀತ್ ಪತ್ರಾ ಅವರ ಟ್ವೀಟ್ ಅನ್ನು ತೆಗೆದು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

ಇದೇ ‘ಟೂಲ್‌ಕಿಟ್’ ಸಂದೇಶ ಹರಡಿದ ನಮ್ಮ ರಾಜ್ಯದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಕೂಡ ಈಗ ಜನರ ಮುಂದೆ ಬೆತ್ತಲಾಗಿದ್ದಾರೆ.


ಇದನ್ನೂ ಓದಿ; ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...