Homeಕರೋನಾ ತಲ್ಲಣಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಬಿಜೆಪಿ ಮುಖಂಡರ ಟ್ವೀಟ್‌ಗಳ ಕೆಳಗೆ "ಮ್ಯಾನಿಪುಲೆಟೆಡ್ ಮೀಡಿಯಾ (ತಿರುಚಲಾದ ವಿಷಯ)" ಎಂದು ಟ್ವಿಟರ್ ಹೆಸರಿಸಿದೆ.

- Advertisement -
- Advertisement -

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮಹತ್ವದ ಕ್ರಮ ಕೈಗೊಂಡಿದೆ. ಬಿಜೆಪಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಟ್ವಿಟರ್ ಅನುಮೋದಿಸಿದೆ.

ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಡ್ಡಿ ಮಾಡುವ ಬಗ್ಗೆ ಕಾಂಗ್ರೆಸ್ ‘ಟೂಲ್‌ಕಿಟ್’ ಎಂದು ಆರೋಪಿಸಿದ ಟ್ವೀಟ್ ಸ್ಕ್ರೀನ್‌ ಶಾಟ್‌ಗಳನ್ನು ಉಲ್ಲೇಖಿಸಿದ ಟ್ವೀಟರ್, ಇದೊಂದು ‘ಮ್ಯಾನಿಪುಲೆಟೆಡ್ ಮೀಡಿಯಾ’ (ತಿರುಚಲಾದ ವಿಷಯ) ಎಂದು ತಿಳಿಸಿದೆ. ಆ ಮೂಲಕ ಬಿಜೆಪಿಯ ಸುಳ್ಳು ಅಭಿಯಾನಕ್ಕೆ ತಡೆ ಒಡ್ಡಿದೆ.

ಟ್ವಿಟರ್ ತನ್ನ ನೀತಿಗಳ ವಿಭಾಗದಲ್ಲಿ ಹೀಗೆ ಹೇಳುತ್ತದೆ, “ನಾವು ಮಾಧ್ಯಮಗಳನ್ನು (ವೀಡಿಯೊಗಳು, ಆಡಿಯೋ ಮತ್ತು ಚಿತ್ರಗಳು) ಒಳಗೊಂಡಿರುವ ಟ್ವೀಟ್‌ಗಳನ್ನು ಜನರನ್ನು ದಾರಿತಪ್ಪಿಸುವ ಅಥವಾ ಮೋಸಗೊಳಿಸುವ ರೀತಿಯಲ್ಲಿ ರಚಿಸಿದ್ದರೆ ಅದನ್ನು ನಮ್ಮ ಕಂಪನಿ ಒಪ್ಪುವುದಿಲ್ಲ……”

ಈ ನೀತಿಯ ಪರಿಣಾಮವಾಗಿಯೇ ಸಾಂಕ್ರಾಮಿಕದ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡಿದ ಹಲವು ಬಿಜೆಪಿ ನಾಯಕರ ಟ್ವೀಟ್‌ಗಳನ್ನು ಉಲ್ಲೇಖಿಸಿ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಟ್ವೀಟರ್ ಹೇಳಿದೆ. ಅವರ ಟ್ವೀಟ್ ಕೆಳಗೆ ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಟ್ರಂಪ್ ಆಡಳಿತದ ಕೊನೆಯ ದಿನಗಳಲ್ಲಿ ಟ್ವಿಟರ್ ಆಗಾಗ್ಗೆ ಇದೇ ರೀತಿಯ ಎಚ್ಚರಿಕೆಗಳನ್ನು ಬಳಸುತ್ತಿತ್ತು. ಅಂತಿಮವಾಗಿ ಟ್ರಂಪ್ ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಿಂದ ಶಾಶ್ವತವಾಗಿ ಅಮಾನತುಗೊಳಿಸಲಾಯಿತು.

ಬಿಜೆಪಿಯ ಉನ್ನತ ನಾಯಕರು ತಮ್ಮ ಪಕ್ಷದ ಬಗ್ಗೆ ಅಪಾದಿಸಿದ ಬಗ್ಗೆ ‘ಟೂಲ್‌ಕಿಟ್’ ಎಂದು ಪ್ರಸಾರವಾದ ಸುದ್ದಿ ನಕಲಿ ಎಂದು ಕಾಂಗ್ರೆಸ್ ಟ್ವಿಟರ್ ಕಂಪನಿಗೆ ದೂರು ನೀಡಿದ ನಂತರ ಗುರುವಾರ ಸಂಜೆ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರ ಟ್ವೀಟ್ ಅನ್ನು ಬ್ಲಾಕ್ ಮಾಡಲಾಗಿತು. ಈ ಮೊದಲು, ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ ಸಮಗ್ರ ವರದಿಯನ್ನು ಪ್ರಕಟಿಸಿ, ಬಿಜೆಪಿಯ ಉನ್ನತ ನಾಯಕತ್ವವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ದಾಖಲೆಯನ್ನು ನಕಲಿ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಪ್ರಸಾರ ಮಾಡಿದೆ ಎಂದು ಬಯಲು ಮಾಡಿತ್ತು.

ಮಂಗಳವಾರ, ಹಲವಾರು ಉನ್ನತ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು #CongressToolKitExposed ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಕಾಂಗ್ರೆಸ್ ಮೇಲೆ ದಾಳಿ ನಡೆಸಲು ಆಪಾದಿತ ಟೂಲ್‌ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರಾಜಕೀಯ ಜಗಳ ಏರ್ಪಟ್ಟಿತ್ತು. ಕಾಂಗ್ರೆಸ್‌ನ ನಾಯಕರು ಕೋವಿಡ್ ರೋಗಿಗಳಿಗೆ ನೀಡಿದ ಸಹಾಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿತ್ತು. ಆದರೆ ಬಿಜೆಪಿ ಸೃಷ್ಟಿಸಿದ ಟೂಲ್‌ಕಿಟ್ ಡಾಕ್ಯುಮೆಂಟಿನಲ್ಲಿ ಇದೆಲ್ಲ ನಕಲಿ ಎಂಬಂತೆ ಬಿಂಬಿಸಲಾಗಿತ್ತು.

ಕುಂಭಮೇಳದ ಯಾತ್ರಿಗಳನ್ನು ಸೂಪರ್-ಸ್ಪ್ರೆಡರ್ಸ್ ಎಂದು ದೂಷಿಸಲು ಪ್ರಯತ್ನಿಸಲಾಗಿದೆ ಮತ್ತು ಈದ್ ಕೂಟಗಳಿಗೆ ಹಾಜರಾದವರ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ‘ಹಿಂದೂ ವಿರೋಧಿ’ ಪಕ್ಷಪಾತ ಮತ್ತು ಕೋಮುವಾದವನ್ನು ಉಂಟುಮಾಡುವ ಉದ್ದೇಶವನ್ನು ಸಾಬೀತುಪಡಿಸಿತು ಎಂದು ಬಿಜೆಪಿ ಅಪಾದಿಸಿತ್ತು.

#CongressToolKitExposed ಎಂಬ ತಪ್ಪು ಹ್ಯಾಶ್‌ಟ್ಯಾಗ್ ಅನ್ನು ಬಳಸಿದವರಲ್ಲಿ ಇತರ ಉನ್ನತ ಬಿಜೆಪಿ ನಾಯಕರಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕಿರೆಣ ರಿಜಿಜು, ಅನುರಾಗ್ ಠಾಕೂರ್ ಮತ್ತು ಪ್ರಹ್ಲಾದ್ ಜೋಶಿ, ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಿರೆನ್ ಸಿಂಗ್, ಸಂಸದರಾದ ರಾಜ್ಯವರ್ಧನ್ ರಾಥೋಡ್, ತೇಜಸ್ವಿ ಸೂರ್ಯ, ರಾಹುಲ್ ಕಸ್ವಾನ್, ಪಿಸಿ ಮೋಹನ್, ಶೋಭಾ ಕರಂದ್ಲಾಜೆ, ಮನೋಜ್ ಕೋಟಕ್, ವಿನಯ್ ಸಹಸ್ರಬುದ್ದೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಇದ್ದಾರೆ.

ಕಾಂಗ್ರೆಸ್ ತಕ್ಷಣವೇ ಟೂಲ್ಕಿಟ್ ಅನ್ನು ಕಟ್ಟುಕಥೆ ಎಂದು ಕರೆದು ಈ ಎಲ್ಲ ಬಿಜೆಪಿ ನಾಯಕರ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ, ಭಾರತದ ಜನರಿಗೆ ಅಗತ್ಯ ನೆರವು ನೀಡುವಲ್ಲಿ ಮೋದಿ ಸರ್ಕಾರದ ಮಹತ್ತರವಾದ ವೈಫಲ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು” ಬಿಜೆಪಿ ಈ ಮೋಸದ ಕೃತ್ಯವನ್ನು ಮಾಡಿದೆ ಎಂದು ಅದು ಆಪಾದಿಸಿತ್ತು.

ಆ ಟ್ವೀಟ್‌ಗಳನ್ನು ತೆಗೆದುಹಾಕಿ ಮತ್ತು ನಕಲಿ ಟೂಲ್‌ಕಿಟ್ ಹಂಚಿಕೊಂಡವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅದು ಟ್ವಿಟರ್‌ಗೆ ಪತ್ರ ಬರೆದಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ ದೇಶದಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದಾದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಬಿಜೆಪಿಯ ಉನ್ನತ ನಾಯಕರು ಟ್ವಿಟ್ಟರ್ ಅನ್ನು ಒಂದು ವೇದಿಕೆಯಾಗಿ ಬಳಸಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಅದರ ಐಟಿ ಸೆಲ್ ಆಗಾಗ್ಗೆ ರಾಜಕೀಯ ನಕಲಿ ಸುದ್ದಿಗಳನ್ನು ಸೃಷ್ಟಿಸುತ್ತದೆ, ಇದನ್ನು ಹಂಚಿಕೊಳ್ಳುವ ಅದರ ಹೆಚ್ಚಿನ ನಾಯಕರು ಮತ್ತು ಸದಸ್ಯರು ಸಾಮಾನ್ಯವಾಗಿ ಶಿಕ್ಷೆ ಅನುಭವಿಸುವುದಿಲ್ಲ ಎಂದು ದಿ ವೈರ್ ವರದಿ ಮಾಡಿದೆ.

ಅಂತಹ ಹಿನ್ನೆಲೆಯಲ್ಲಿ, ಟ್ವಿಟ್ಟರ್ ಸಂಬೀತ್ ಪತ್ರಾ ಅವರ ಟ್ವೀಟ್ ಅನ್ನು ತೆಗೆದು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

ಇದೇ ‘ಟೂಲ್‌ಕಿಟ್’ ಸಂದೇಶ ಹರಡಿದ ನಮ್ಮ ರಾಜ್ಯದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಕೂಡ ಈಗ ಜನರ ಮುಂದೆ ಬೆತ್ತಲಾಗಿದ್ದಾರೆ.


ಇದನ್ನೂ ಓದಿ; ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...