Homeಕರೋನಾ ತಲ್ಲಣಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಬಿಜೆಪಿ ಮುಖಂಡರ ಟ್ವೀಟ್‌ಗಳ ಕೆಳಗೆ "ಮ್ಯಾನಿಪುಲೆಟೆಡ್ ಮೀಡಿಯಾ (ತಿರುಚಲಾದ ವಿಷಯ)" ಎಂದು ಟ್ವಿಟರ್ ಹೆಸರಿಸಿದೆ.

- Advertisement -
- Advertisement -

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮಹತ್ವದ ಕ್ರಮ ಕೈಗೊಂಡಿದೆ. ಬಿಜೆಪಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಟ್ವಿಟರ್ ಅನುಮೋದಿಸಿದೆ.

ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಡ್ಡಿ ಮಾಡುವ ಬಗ್ಗೆ ಕಾಂಗ್ರೆಸ್ ‘ಟೂಲ್‌ಕಿಟ್’ ಎಂದು ಆರೋಪಿಸಿದ ಟ್ವೀಟ್ ಸ್ಕ್ರೀನ್‌ ಶಾಟ್‌ಗಳನ್ನು ಉಲ್ಲೇಖಿಸಿದ ಟ್ವೀಟರ್, ಇದೊಂದು ‘ಮ್ಯಾನಿಪುಲೆಟೆಡ್ ಮೀಡಿಯಾ’ (ತಿರುಚಲಾದ ವಿಷಯ) ಎಂದು ತಿಳಿಸಿದೆ. ಆ ಮೂಲಕ ಬಿಜೆಪಿಯ ಸುಳ್ಳು ಅಭಿಯಾನಕ್ಕೆ ತಡೆ ಒಡ್ಡಿದೆ.

ಟ್ವಿಟರ್ ತನ್ನ ನೀತಿಗಳ ವಿಭಾಗದಲ್ಲಿ ಹೀಗೆ ಹೇಳುತ್ತದೆ, “ನಾವು ಮಾಧ್ಯಮಗಳನ್ನು (ವೀಡಿಯೊಗಳು, ಆಡಿಯೋ ಮತ್ತು ಚಿತ್ರಗಳು) ಒಳಗೊಂಡಿರುವ ಟ್ವೀಟ್‌ಗಳನ್ನು ಜನರನ್ನು ದಾರಿತಪ್ಪಿಸುವ ಅಥವಾ ಮೋಸಗೊಳಿಸುವ ರೀತಿಯಲ್ಲಿ ರಚಿಸಿದ್ದರೆ ಅದನ್ನು ನಮ್ಮ ಕಂಪನಿ ಒಪ್ಪುವುದಿಲ್ಲ……”

ಈ ನೀತಿಯ ಪರಿಣಾಮವಾಗಿಯೇ ಸಾಂಕ್ರಾಮಿಕದ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡಿದ ಹಲವು ಬಿಜೆಪಿ ನಾಯಕರ ಟ್ವೀಟ್‌ಗಳನ್ನು ಉಲ್ಲೇಖಿಸಿ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಟ್ವೀಟರ್ ಹೇಳಿದೆ. ಅವರ ಟ್ವೀಟ್ ಕೆಳಗೆ ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಟ್ರಂಪ್ ಆಡಳಿತದ ಕೊನೆಯ ದಿನಗಳಲ್ಲಿ ಟ್ವಿಟರ್ ಆಗಾಗ್ಗೆ ಇದೇ ರೀತಿಯ ಎಚ್ಚರಿಕೆಗಳನ್ನು ಬಳಸುತ್ತಿತ್ತು. ಅಂತಿಮವಾಗಿ ಟ್ರಂಪ್ ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಿಂದ ಶಾಶ್ವತವಾಗಿ ಅಮಾನತುಗೊಳಿಸಲಾಯಿತು.

ಬಿಜೆಪಿಯ ಉನ್ನತ ನಾಯಕರು ತಮ್ಮ ಪಕ್ಷದ ಬಗ್ಗೆ ಅಪಾದಿಸಿದ ಬಗ್ಗೆ ‘ಟೂಲ್‌ಕಿಟ್’ ಎಂದು ಪ್ರಸಾರವಾದ ಸುದ್ದಿ ನಕಲಿ ಎಂದು ಕಾಂಗ್ರೆಸ್ ಟ್ವಿಟರ್ ಕಂಪನಿಗೆ ದೂರು ನೀಡಿದ ನಂತರ ಗುರುವಾರ ಸಂಜೆ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರ ಟ್ವೀಟ್ ಅನ್ನು ಬ್ಲಾಕ್ ಮಾಡಲಾಗಿತು. ಈ ಮೊದಲು, ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ ಸಮಗ್ರ ವರದಿಯನ್ನು ಪ್ರಕಟಿಸಿ, ಬಿಜೆಪಿಯ ಉನ್ನತ ನಾಯಕತ್ವವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ದಾಖಲೆಯನ್ನು ನಕಲಿ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಪ್ರಸಾರ ಮಾಡಿದೆ ಎಂದು ಬಯಲು ಮಾಡಿತ್ತು.

ಮಂಗಳವಾರ, ಹಲವಾರು ಉನ್ನತ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು #CongressToolKitExposed ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಕಾಂಗ್ರೆಸ್ ಮೇಲೆ ದಾಳಿ ನಡೆಸಲು ಆಪಾದಿತ ಟೂಲ್‌ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರಾಜಕೀಯ ಜಗಳ ಏರ್ಪಟ್ಟಿತ್ತು. ಕಾಂಗ್ರೆಸ್‌ನ ನಾಯಕರು ಕೋವಿಡ್ ರೋಗಿಗಳಿಗೆ ನೀಡಿದ ಸಹಾಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿತ್ತು. ಆದರೆ ಬಿಜೆಪಿ ಸೃಷ್ಟಿಸಿದ ಟೂಲ್‌ಕಿಟ್ ಡಾಕ್ಯುಮೆಂಟಿನಲ್ಲಿ ಇದೆಲ್ಲ ನಕಲಿ ಎಂಬಂತೆ ಬಿಂಬಿಸಲಾಗಿತ್ತು.

ಕುಂಭಮೇಳದ ಯಾತ್ರಿಗಳನ್ನು ಸೂಪರ್-ಸ್ಪ್ರೆಡರ್ಸ್ ಎಂದು ದೂಷಿಸಲು ಪ್ರಯತ್ನಿಸಲಾಗಿದೆ ಮತ್ತು ಈದ್ ಕೂಟಗಳಿಗೆ ಹಾಜರಾದವರ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ‘ಹಿಂದೂ ವಿರೋಧಿ’ ಪಕ್ಷಪಾತ ಮತ್ತು ಕೋಮುವಾದವನ್ನು ಉಂಟುಮಾಡುವ ಉದ್ದೇಶವನ್ನು ಸಾಬೀತುಪಡಿಸಿತು ಎಂದು ಬಿಜೆಪಿ ಅಪಾದಿಸಿತ್ತು.

#CongressToolKitExposed ಎಂಬ ತಪ್ಪು ಹ್ಯಾಶ್‌ಟ್ಯಾಗ್ ಅನ್ನು ಬಳಸಿದವರಲ್ಲಿ ಇತರ ಉನ್ನತ ಬಿಜೆಪಿ ನಾಯಕರಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕಿರೆಣ ರಿಜಿಜು, ಅನುರಾಗ್ ಠಾಕೂರ್ ಮತ್ತು ಪ್ರಹ್ಲಾದ್ ಜೋಶಿ, ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಿರೆನ್ ಸಿಂಗ್, ಸಂಸದರಾದ ರಾಜ್ಯವರ್ಧನ್ ರಾಥೋಡ್, ತೇಜಸ್ವಿ ಸೂರ್ಯ, ರಾಹುಲ್ ಕಸ್ವಾನ್, ಪಿಸಿ ಮೋಹನ್, ಶೋಭಾ ಕರಂದ್ಲಾಜೆ, ಮನೋಜ್ ಕೋಟಕ್, ವಿನಯ್ ಸಹಸ್ರಬುದ್ದೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಇದ್ದಾರೆ.

ಕಾಂಗ್ರೆಸ್ ತಕ್ಷಣವೇ ಟೂಲ್ಕಿಟ್ ಅನ್ನು ಕಟ್ಟುಕಥೆ ಎಂದು ಕರೆದು ಈ ಎಲ್ಲ ಬಿಜೆಪಿ ನಾಯಕರ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ, ಭಾರತದ ಜನರಿಗೆ ಅಗತ್ಯ ನೆರವು ನೀಡುವಲ್ಲಿ ಮೋದಿ ಸರ್ಕಾರದ ಮಹತ್ತರವಾದ ವೈಫಲ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು” ಬಿಜೆಪಿ ಈ ಮೋಸದ ಕೃತ್ಯವನ್ನು ಮಾಡಿದೆ ಎಂದು ಅದು ಆಪಾದಿಸಿತ್ತು.

ಆ ಟ್ವೀಟ್‌ಗಳನ್ನು ತೆಗೆದುಹಾಕಿ ಮತ್ತು ನಕಲಿ ಟೂಲ್‌ಕಿಟ್ ಹಂಚಿಕೊಂಡವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅದು ಟ್ವಿಟರ್‌ಗೆ ಪತ್ರ ಬರೆದಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ ದೇಶದಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದಾದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಬಿಜೆಪಿಯ ಉನ್ನತ ನಾಯಕರು ಟ್ವಿಟ್ಟರ್ ಅನ್ನು ಒಂದು ವೇದಿಕೆಯಾಗಿ ಬಳಸಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಅದರ ಐಟಿ ಸೆಲ್ ಆಗಾಗ್ಗೆ ರಾಜಕೀಯ ನಕಲಿ ಸುದ್ದಿಗಳನ್ನು ಸೃಷ್ಟಿಸುತ್ತದೆ, ಇದನ್ನು ಹಂಚಿಕೊಳ್ಳುವ ಅದರ ಹೆಚ್ಚಿನ ನಾಯಕರು ಮತ್ತು ಸದಸ್ಯರು ಸಾಮಾನ್ಯವಾಗಿ ಶಿಕ್ಷೆ ಅನುಭವಿಸುವುದಿಲ್ಲ ಎಂದು ದಿ ವೈರ್ ವರದಿ ಮಾಡಿದೆ.

ಅಂತಹ ಹಿನ್ನೆಲೆಯಲ್ಲಿ, ಟ್ವಿಟ್ಟರ್ ಸಂಬೀತ್ ಪತ್ರಾ ಅವರ ಟ್ವೀಟ್ ಅನ್ನು ತೆಗೆದು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

ಇದೇ ‘ಟೂಲ್‌ಕಿಟ್’ ಸಂದೇಶ ಹರಡಿದ ನಮ್ಮ ರಾಜ್ಯದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಕೂಡ ಈಗ ಜನರ ಮುಂದೆ ಬೆತ್ತಲಾಗಿದ್ದಾರೆ.


ಇದನ್ನೂ ಓದಿ; ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...