Homeಕರೋನಾ ತಲ್ಲಣಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಬಿಜೆಪಿ ಮುಖಂಡರ ಟ್ವೀಟ್‌ಗಳ ಕೆಳಗೆ "ಮ್ಯಾನಿಪುಲೆಟೆಡ್ ಮೀಡಿಯಾ (ತಿರುಚಲಾದ ವಿಷಯ)" ಎಂದು ಟ್ವಿಟರ್ ಹೆಸರಿಸಿದೆ.

- Advertisement -
- Advertisement -

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮಹತ್ವದ ಕ್ರಮ ಕೈಗೊಂಡಿದೆ. ಬಿಜೆಪಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಟ್ವಿಟರ್ ಅನುಮೋದಿಸಿದೆ.

ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಡ್ಡಿ ಮಾಡುವ ಬಗ್ಗೆ ಕಾಂಗ್ರೆಸ್ ‘ಟೂಲ್‌ಕಿಟ್’ ಎಂದು ಆರೋಪಿಸಿದ ಟ್ವೀಟ್ ಸ್ಕ್ರೀನ್‌ ಶಾಟ್‌ಗಳನ್ನು ಉಲ್ಲೇಖಿಸಿದ ಟ್ವೀಟರ್, ಇದೊಂದು ‘ಮ್ಯಾನಿಪುಲೆಟೆಡ್ ಮೀಡಿಯಾ’ (ತಿರುಚಲಾದ ವಿಷಯ) ಎಂದು ತಿಳಿಸಿದೆ. ಆ ಮೂಲಕ ಬಿಜೆಪಿಯ ಸುಳ್ಳು ಅಭಿಯಾನಕ್ಕೆ ತಡೆ ಒಡ್ಡಿದೆ.

ಟ್ವಿಟರ್ ತನ್ನ ನೀತಿಗಳ ವಿಭಾಗದಲ್ಲಿ ಹೀಗೆ ಹೇಳುತ್ತದೆ, “ನಾವು ಮಾಧ್ಯಮಗಳನ್ನು (ವೀಡಿಯೊಗಳು, ಆಡಿಯೋ ಮತ್ತು ಚಿತ್ರಗಳು) ಒಳಗೊಂಡಿರುವ ಟ್ವೀಟ್‌ಗಳನ್ನು ಜನರನ್ನು ದಾರಿತಪ್ಪಿಸುವ ಅಥವಾ ಮೋಸಗೊಳಿಸುವ ರೀತಿಯಲ್ಲಿ ರಚಿಸಿದ್ದರೆ ಅದನ್ನು ನಮ್ಮ ಕಂಪನಿ ಒಪ್ಪುವುದಿಲ್ಲ……”

ಈ ನೀತಿಯ ಪರಿಣಾಮವಾಗಿಯೇ ಸಾಂಕ್ರಾಮಿಕದ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡಿದ ಹಲವು ಬಿಜೆಪಿ ನಾಯಕರ ಟ್ವೀಟ್‌ಗಳನ್ನು ಉಲ್ಲೇಖಿಸಿ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಟ್ವೀಟರ್ ಹೇಳಿದೆ. ಅವರ ಟ್ವೀಟ್ ಕೆಳಗೆ ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಟ್ರಂಪ್ ಆಡಳಿತದ ಕೊನೆಯ ದಿನಗಳಲ್ಲಿ ಟ್ವಿಟರ್ ಆಗಾಗ್ಗೆ ಇದೇ ರೀತಿಯ ಎಚ್ಚರಿಕೆಗಳನ್ನು ಬಳಸುತ್ತಿತ್ತು. ಅಂತಿಮವಾಗಿ ಟ್ರಂಪ್ ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಿಂದ ಶಾಶ್ವತವಾಗಿ ಅಮಾನತುಗೊಳಿಸಲಾಯಿತು.

ಬಿಜೆಪಿಯ ಉನ್ನತ ನಾಯಕರು ತಮ್ಮ ಪಕ್ಷದ ಬಗ್ಗೆ ಅಪಾದಿಸಿದ ಬಗ್ಗೆ ‘ಟೂಲ್‌ಕಿಟ್’ ಎಂದು ಪ್ರಸಾರವಾದ ಸುದ್ದಿ ನಕಲಿ ಎಂದು ಕಾಂಗ್ರೆಸ್ ಟ್ವಿಟರ್ ಕಂಪನಿಗೆ ದೂರು ನೀಡಿದ ನಂತರ ಗುರುವಾರ ಸಂಜೆ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರ ಟ್ವೀಟ್ ಅನ್ನು ಬ್ಲಾಕ್ ಮಾಡಲಾಗಿತು. ಈ ಮೊದಲು, ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ ಸಮಗ್ರ ವರದಿಯನ್ನು ಪ್ರಕಟಿಸಿ, ಬಿಜೆಪಿಯ ಉನ್ನತ ನಾಯಕತ್ವವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ದಾಖಲೆಯನ್ನು ನಕಲಿ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಪ್ರಸಾರ ಮಾಡಿದೆ ಎಂದು ಬಯಲು ಮಾಡಿತ್ತು.

ಮಂಗಳವಾರ, ಹಲವಾರು ಉನ್ನತ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು #CongressToolKitExposed ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಕಾಂಗ್ರೆಸ್ ಮೇಲೆ ದಾಳಿ ನಡೆಸಲು ಆಪಾದಿತ ಟೂಲ್‌ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರಾಜಕೀಯ ಜಗಳ ಏರ್ಪಟ್ಟಿತ್ತು. ಕಾಂಗ್ರೆಸ್‌ನ ನಾಯಕರು ಕೋವಿಡ್ ರೋಗಿಗಳಿಗೆ ನೀಡಿದ ಸಹಾಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿತ್ತು. ಆದರೆ ಬಿಜೆಪಿ ಸೃಷ್ಟಿಸಿದ ಟೂಲ್‌ಕಿಟ್ ಡಾಕ್ಯುಮೆಂಟಿನಲ್ಲಿ ಇದೆಲ್ಲ ನಕಲಿ ಎಂಬಂತೆ ಬಿಂಬಿಸಲಾಗಿತ್ತು.

ಕುಂಭಮೇಳದ ಯಾತ್ರಿಗಳನ್ನು ಸೂಪರ್-ಸ್ಪ್ರೆಡರ್ಸ್ ಎಂದು ದೂಷಿಸಲು ಪ್ರಯತ್ನಿಸಲಾಗಿದೆ ಮತ್ತು ಈದ್ ಕೂಟಗಳಿಗೆ ಹಾಜರಾದವರ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ‘ಹಿಂದೂ ವಿರೋಧಿ’ ಪಕ್ಷಪಾತ ಮತ್ತು ಕೋಮುವಾದವನ್ನು ಉಂಟುಮಾಡುವ ಉದ್ದೇಶವನ್ನು ಸಾಬೀತುಪಡಿಸಿತು ಎಂದು ಬಿಜೆಪಿ ಅಪಾದಿಸಿತ್ತು.

#CongressToolKitExposed ಎಂಬ ತಪ್ಪು ಹ್ಯಾಶ್‌ಟ್ಯಾಗ್ ಅನ್ನು ಬಳಸಿದವರಲ್ಲಿ ಇತರ ಉನ್ನತ ಬಿಜೆಪಿ ನಾಯಕರಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕಿರೆಣ ರಿಜಿಜು, ಅನುರಾಗ್ ಠಾಕೂರ್ ಮತ್ತು ಪ್ರಹ್ಲಾದ್ ಜೋಶಿ, ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಿರೆನ್ ಸಿಂಗ್, ಸಂಸದರಾದ ರಾಜ್ಯವರ್ಧನ್ ರಾಥೋಡ್, ತೇಜಸ್ವಿ ಸೂರ್ಯ, ರಾಹುಲ್ ಕಸ್ವಾನ್, ಪಿಸಿ ಮೋಹನ್, ಶೋಭಾ ಕರಂದ್ಲಾಜೆ, ಮನೋಜ್ ಕೋಟಕ್, ವಿನಯ್ ಸಹಸ್ರಬುದ್ದೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಇದ್ದಾರೆ.

ಕಾಂಗ್ರೆಸ್ ತಕ್ಷಣವೇ ಟೂಲ್ಕಿಟ್ ಅನ್ನು ಕಟ್ಟುಕಥೆ ಎಂದು ಕರೆದು ಈ ಎಲ್ಲ ಬಿಜೆಪಿ ನಾಯಕರ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ, ಭಾರತದ ಜನರಿಗೆ ಅಗತ್ಯ ನೆರವು ನೀಡುವಲ್ಲಿ ಮೋದಿ ಸರ್ಕಾರದ ಮಹತ್ತರವಾದ ವೈಫಲ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು” ಬಿಜೆಪಿ ಈ ಮೋಸದ ಕೃತ್ಯವನ್ನು ಮಾಡಿದೆ ಎಂದು ಅದು ಆಪಾದಿಸಿತ್ತು.

ಆ ಟ್ವೀಟ್‌ಗಳನ್ನು ತೆಗೆದುಹಾಕಿ ಮತ್ತು ನಕಲಿ ಟೂಲ್‌ಕಿಟ್ ಹಂಚಿಕೊಂಡವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅದು ಟ್ವಿಟರ್‌ಗೆ ಪತ್ರ ಬರೆದಿತ್ತು. “ಪ್ರಸ್ತುತ ಸಾಂಕ್ರಾಮಿಕದ ಮಧ್ಯೆ ದೇಶದಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದಾದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಬಿಜೆಪಿಯ ಉನ್ನತ ನಾಯಕರು ಟ್ವಿಟ್ಟರ್ ಅನ್ನು ಒಂದು ವೇದಿಕೆಯಾಗಿ ಬಳಸಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಅದರ ಐಟಿ ಸೆಲ್ ಆಗಾಗ್ಗೆ ರಾಜಕೀಯ ನಕಲಿ ಸುದ್ದಿಗಳನ್ನು ಸೃಷ್ಟಿಸುತ್ತದೆ, ಇದನ್ನು ಹಂಚಿಕೊಳ್ಳುವ ಅದರ ಹೆಚ್ಚಿನ ನಾಯಕರು ಮತ್ತು ಸದಸ್ಯರು ಸಾಮಾನ್ಯವಾಗಿ ಶಿಕ್ಷೆ ಅನುಭವಿಸುವುದಿಲ್ಲ ಎಂದು ದಿ ವೈರ್ ವರದಿ ಮಾಡಿದೆ.

ಅಂತಹ ಹಿನ್ನೆಲೆಯಲ್ಲಿ, ಟ್ವಿಟ್ಟರ್ ಸಂಬೀತ್ ಪತ್ರಾ ಅವರ ಟ್ವೀಟ್ ಅನ್ನು ತೆಗೆದು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

ಇದೇ ‘ಟೂಲ್‌ಕಿಟ್’ ಸಂದೇಶ ಹರಡಿದ ನಮ್ಮ ರಾಜ್ಯದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಕೂಡ ಈಗ ಜನರ ಮುಂದೆ ಬೆತ್ತಲಾಗಿದ್ದಾರೆ.


ಇದನ್ನೂ ಓದಿ; ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...