Homeಮುಖಪುಟಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

ಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

- Advertisement -
- Advertisement -

ಬಾಂಬೆ ಹೈಕೋರ್ಟ್ ಇಂದು ಬುಧವಾರ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್‌ರಿಗೆ ಮೂರು ವಾರಗಳ ಟ್ರಾನ್ಸಿಟ್ (ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರಿಂದ) ನಿರೀಕ್ಷಣಾ ಜಾಮೀನು ನೀಡಿತು. ಅವರ ವಿರುದ್ಧ ಗ್ರೆಟಾ ಥನ್‌ಬರ್ಗ್ ಟೂಲ್‌ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು.

ಒಂದು ವೇಳೆ ದೆಹಲಿ ಪೋಲಿಸ್ ಸ್ಪೆಷಲ್ ಸೆಲ್ ದಾಖಲಿಸಿದ ಅಪರಾಧದಲ್ಲಿ ಜಾಕೋಬ್ ಬಂಧಿಸಲ್ಪಟ್ಟರೆ, ಅರ್ಜಿದಾರರನ್ನು (ಜಾಕೋಬ್) 25000 ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿ ಆಧಾರದ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

“ಅರ್ಜಿದಾರರಿಗೆ ಸೂಕ್ತ ಪರಿಹಾರವನ್ನು ಪಡೆಯಲು ಅವರ ಆಯ್ಕೆಯ ಸಮರ್ಥ ನ್ಯಾಯಾಲಯವನ್ನು ಸಂಪರ್ಕಿಸಲು ಅನುವು ಮಾಡಿಕೊಡಲು ಇಂದಿನಿಂದ (ಬುಧವಾರ) ಮೂರು ವಾರಗಳವರೆಗೆ ಈ ರಕ್ಷಣೆಯನ್ನು ನೀಡಲಾಗಿದೆ” ಎಂದು ನ್ಯಾಯಪೀಠ ತಿಳಿಸಿದೆ. ಮಂಗಳವಾರ ಜಾಕೋಬ್ ಅವರ ಮನವಿಯ ಮೇರೆಗೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಯುಕೆ ಮೂಲದ ಎನ್‌ಜಿಒ ‘ಎಕ್ಸ್ಟಿಂಕನ್ ರೆಬೆಲಿಯನ್’ಗೆ ಕೆಲಸ ಮಾಡುವ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಜಾರಿಗೊಳಿಸಿದ್ದ ದೆಹಲಿ ಪೊಲೀಸರು, ರೈತರ ಪ್ರತಿಭಟನೆಯ ಕುರಿತು ಥನ್‌ಬರ್ಗ್ ಟ್ವೀಟ್ ಮಾಡಿದ ಟೂಲ್‌ಕಿಟ್ ಅನ್ನು ಜಾಕೊಬ್ ಮತ್ತು ಶಾಂತನು ರಚಿಸಿದ್ದಾರೆ ಎಂದು ಆರೋಪಿಸಿದ್ದರು. ದೇಶದ್ರೋಹಕ್ಕಾಗಿ ಐಪಿಸಿ ಸೆಕ್ಷನ್ಸ್ 124 (ಎ), ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು 153 (ಎ) ಮತ್ತು ಕ್ರಿಮಿನಲ್ ಪಿತೂರಿಗಾಗಿ 120 (ಬಿ) ಅಡಿಯಲ್ಲಿ ಜಾಕೋಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ, ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ನ್ಯಾಯಪೀಠದ ನ್ಯಾಯಮೂರ್ತಿ ವಿಭಾ ವಿ ಕಂಕನ್‌ವಾಡಿ ಅವರ ಏಕ-ನ್ಯಾಯಾಧೀಶರ ಪೀಠವು, ಮುಲುಕ್‌ಗೆ 50,000 ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ 10 ದಿನಗಳ ಟ್ರಾನ್ಸಿಟ್ ನಿರೀಕಷಣಾ ಜಾಮೀನು ನೀಡಿದೆ. ಪರಿಹಾರಕ್ಕಾಗಿ ಸಮರ್ಥ / ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿದೆ.

ನ್ಯಾಯಮೂರ್ತಿ ಪ್ರಕಾಶ್ ಡಿ ನಾಯಕ್ ಅವರ ಏಕ-ನ್ಯಾಯಾಧೀಶರ ಪೀಠದ ಮುಂದೆ ಮಂಗಳವಾರ ಹಾಜರಾದ ದೆಹಲಿ ಪೊಲೀಸರ ಸೈಬರ್ ಸೆಲ್ ಘಟಕವನ್ನು ಪ್ರತಿನಿಧಿಸಿದ ವಕೀಲ ಹಿತೆನ್ ವೆನೆಗಾಂವ್ಕರ್, ಜಾಕೋಬ್ ಅವರ ಮನವಿಯನ್ನು ಸಮರ್ಥಿಸಿಕೊಳ್ಳುವುದನ್ನು ಪ್ರಶ್ನಿಸಿ, ಅಪರಾಧವನ್ನು ದೆಹಲಿಯಲ್ಲಿ ನೋಂದಾಯಿಸಲಾಗಿದೆ, ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ನ ವ್ಯಾಪ್ತಿಯಲ್ಲಿ ಯಾವುದೇ ಕಾರಣವಿಲ್ಲ ಎಂದು ವಾದಿಸಿದ್ದರು.

ಜಾಕೋಬ್ ಪರವಾಗಿ ಹಾಜರಾದ ಹಿರಿಯ ವಕೀಲ ಮಿಹಿರ್ ದೇಸಾಯಿ, ಸುಮಾರು 6-7 ವರ್ಷಗಳಿಂದ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ತನ್ನ ಕಕ್ಷಿದಾರೆ ಜಾಕೋಬ್ ಬಂಧನದ ಸಾಧ್ಯತೆ ಊಹಿಸಿ, ಫೆಬ್ರವರಿ 12 ರಂದು ತಾತ್ಕಾಲಿಕ ಪೂರ್ವ ಬಂಧನ ಜಾಮೀನು ಕೋರಿದ್ದಾರೆ ಎಂದು ವಿವಿರವಾಗಿ ವಾದ ಮಾಡಿ, ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿನ ಅಗತ್ಯವನ್ನು ಒತ್ತಿ ಹೇಳಿದ್ದರು.


ಇದನ್ನೂ ಓದಿ: ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...