Homeಮುಖಪುಟಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

ಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

- Advertisement -
- Advertisement -

ಬಾಂಬೆ ಹೈಕೋರ್ಟ್ ಇಂದು ಬುಧವಾರ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್‌ರಿಗೆ ಮೂರು ವಾರಗಳ ಟ್ರಾನ್ಸಿಟ್ (ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರಿಂದ) ನಿರೀಕ್ಷಣಾ ಜಾಮೀನು ನೀಡಿತು. ಅವರ ವಿರುದ್ಧ ಗ್ರೆಟಾ ಥನ್‌ಬರ್ಗ್ ಟೂಲ್‌ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು.

ಒಂದು ವೇಳೆ ದೆಹಲಿ ಪೋಲಿಸ್ ಸ್ಪೆಷಲ್ ಸೆಲ್ ದಾಖಲಿಸಿದ ಅಪರಾಧದಲ್ಲಿ ಜಾಕೋಬ್ ಬಂಧಿಸಲ್ಪಟ್ಟರೆ, ಅರ್ಜಿದಾರರನ್ನು (ಜಾಕೋಬ್) 25000 ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿ ಆಧಾರದ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

“ಅರ್ಜಿದಾರರಿಗೆ ಸೂಕ್ತ ಪರಿಹಾರವನ್ನು ಪಡೆಯಲು ಅವರ ಆಯ್ಕೆಯ ಸಮರ್ಥ ನ್ಯಾಯಾಲಯವನ್ನು ಸಂಪರ್ಕಿಸಲು ಅನುವು ಮಾಡಿಕೊಡಲು ಇಂದಿನಿಂದ (ಬುಧವಾರ) ಮೂರು ವಾರಗಳವರೆಗೆ ಈ ರಕ್ಷಣೆಯನ್ನು ನೀಡಲಾಗಿದೆ” ಎಂದು ನ್ಯಾಯಪೀಠ ತಿಳಿಸಿದೆ. ಮಂಗಳವಾರ ಜಾಕೋಬ್ ಅವರ ಮನವಿಯ ಮೇರೆಗೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಯುಕೆ ಮೂಲದ ಎನ್‌ಜಿಒ ‘ಎಕ್ಸ್ಟಿಂಕನ್ ರೆಬೆಲಿಯನ್’ಗೆ ಕೆಲಸ ಮಾಡುವ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಜಾರಿಗೊಳಿಸಿದ್ದ ದೆಹಲಿ ಪೊಲೀಸರು, ರೈತರ ಪ್ರತಿಭಟನೆಯ ಕುರಿತು ಥನ್‌ಬರ್ಗ್ ಟ್ವೀಟ್ ಮಾಡಿದ ಟೂಲ್‌ಕಿಟ್ ಅನ್ನು ಜಾಕೊಬ್ ಮತ್ತು ಶಾಂತನು ರಚಿಸಿದ್ದಾರೆ ಎಂದು ಆರೋಪಿಸಿದ್ದರು. ದೇಶದ್ರೋಹಕ್ಕಾಗಿ ಐಪಿಸಿ ಸೆಕ್ಷನ್ಸ್ 124 (ಎ), ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು 153 (ಎ) ಮತ್ತು ಕ್ರಿಮಿನಲ್ ಪಿತೂರಿಗಾಗಿ 120 (ಬಿ) ಅಡಿಯಲ್ಲಿ ಜಾಕೋಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ, ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ನ್ಯಾಯಪೀಠದ ನ್ಯಾಯಮೂರ್ತಿ ವಿಭಾ ವಿ ಕಂಕನ್‌ವಾಡಿ ಅವರ ಏಕ-ನ್ಯಾಯಾಧೀಶರ ಪೀಠವು, ಮುಲುಕ್‌ಗೆ 50,000 ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ 10 ದಿನಗಳ ಟ್ರಾನ್ಸಿಟ್ ನಿರೀಕಷಣಾ ಜಾಮೀನು ನೀಡಿದೆ. ಪರಿಹಾರಕ್ಕಾಗಿ ಸಮರ್ಥ / ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿದೆ.

ನ್ಯಾಯಮೂರ್ತಿ ಪ್ರಕಾಶ್ ಡಿ ನಾಯಕ್ ಅವರ ಏಕ-ನ್ಯಾಯಾಧೀಶರ ಪೀಠದ ಮುಂದೆ ಮಂಗಳವಾರ ಹಾಜರಾದ ದೆಹಲಿ ಪೊಲೀಸರ ಸೈಬರ್ ಸೆಲ್ ಘಟಕವನ್ನು ಪ್ರತಿನಿಧಿಸಿದ ವಕೀಲ ಹಿತೆನ್ ವೆನೆಗಾಂವ್ಕರ್, ಜಾಕೋಬ್ ಅವರ ಮನವಿಯನ್ನು ಸಮರ್ಥಿಸಿಕೊಳ್ಳುವುದನ್ನು ಪ್ರಶ್ನಿಸಿ, ಅಪರಾಧವನ್ನು ದೆಹಲಿಯಲ್ಲಿ ನೋಂದಾಯಿಸಲಾಗಿದೆ, ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ನ ವ್ಯಾಪ್ತಿಯಲ್ಲಿ ಯಾವುದೇ ಕಾರಣವಿಲ್ಲ ಎಂದು ವಾದಿಸಿದ್ದರು.

ಜಾಕೋಬ್ ಪರವಾಗಿ ಹಾಜರಾದ ಹಿರಿಯ ವಕೀಲ ಮಿಹಿರ್ ದೇಸಾಯಿ, ಸುಮಾರು 6-7 ವರ್ಷಗಳಿಂದ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ತನ್ನ ಕಕ್ಷಿದಾರೆ ಜಾಕೋಬ್ ಬಂಧನದ ಸಾಧ್ಯತೆ ಊಹಿಸಿ, ಫೆಬ್ರವರಿ 12 ರಂದು ತಾತ್ಕಾಲಿಕ ಪೂರ್ವ ಬಂಧನ ಜಾಮೀನು ಕೋರಿದ್ದಾರೆ ಎಂದು ವಿವಿರವಾಗಿ ವಾದ ಮಾಡಿ, ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿನ ಅಗತ್ಯವನ್ನು ಒತ್ತಿ ಹೇಳಿದ್ದರು.


ಇದನ್ನೂ ಓದಿ: ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....