Homeಮುಖಪುಟಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

ಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

- Advertisement -
- Advertisement -

ಬಾಂಬೆ ಹೈಕೋರ್ಟ್ ಇಂದು ಬುಧವಾರ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್‌ರಿಗೆ ಮೂರು ವಾರಗಳ ಟ್ರಾನ್ಸಿಟ್ (ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರಿಂದ) ನಿರೀಕ್ಷಣಾ ಜಾಮೀನು ನೀಡಿತು. ಅವರ ವಿರುದ್ಧ ಗ್ರೆಟಾ ಥನ್‌ಬರ್ಗ್ ಟೂಲ್‌ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು.

ಒಂದು ವೇಳೆ ದೆಹಲಿ ಪೋಲಿಸ್ ಸ್ಪೆಷಲ್ ಸೆಲ್ ದಾಖಲಿಸಿದ ಅಪರಾಧದಲ್ಲಿ ಜಾಕೋಬ್ ಬಂಧಿಸಲ್ಪಟ್ಟರೆ, ಅರ್ಜಿದಾರರನ್ನು (ಜಾಕೋಬ್) 25000 ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿ ಆಧಾರದ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

“ಅರ್ಜಿದಾರರಿಗೆ ಸೂಕ್ತ ಪರಿಹಾರವನ್ನು ಪಡೆಯಲು ಅವರ ಆಯ್ಕೆಯ ಸಮರ್ಥ ನ್ಯಾಯಾಲಯವನ್ನು ಸಂಪರ್ಕಿಸಲು ಅನುವು ಮಾಡಿಕೊಡಲು ಇಂದಿನಿಂದ (ಬುಧವಾರ) ಮೂರು ವಾರಗಳವರೆಗೆ ಈ ರಕ್ಷಣೆಯನ್ನು ನೀಡಲಾಗಿದೆ” ಎಂದು ನ್ಯಾಯಪೀಠ ತಿಳಿಸಿದೆ. ಮಂಗಳವಾರ ಜಾಕೋಬ್ ಅವರ ಮನವಿಯ ಮೇರೆಗೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಯುಕೆ ಮೂಲದ ಎನ್‌ಜಿಒ ‘ಎಕ್ಸ್ಟಿಂಕನ್ ರೆಬೆಲಿಯನ್’ಗೆ ಕೆಲಸ ಮಾಡುವ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಜಾರಿಗೊಳಿಸಿದ್ದ ದೆಹಲಿ ಪೊಲೀಸರು, ರೈತರ ಪ್ರತಿಭಟನೆಯ ಕುರಿತು ಥನ್‌ಬರ್ಗ್ ಟ್ವೀಟ್ ಮಾಡಿದ ಟೂಲ್‌ಕಿಟ್ ಅನ್ನು ಜಾಕೊಬ್ ಮತ್ತು ಶಾಂತನು ರಚಿಸಿದ್ದಾರೆ ಎಂದು ಆರೋಪಿಸಿದ್ದರು. ದೇಶದ್ರೋಹಕ್ಕಾಗಿ ಐಪಿಸಿ ಸೆಕ್ಷನ್ಸ್ 124 (ಎ), ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು 153 (ಎ) ಮತ್ತು ಕ್ರಿಮಿನಲ್ ಪಿತೂರಿಗಾಗಿ 120 (ಬಿ) ಅಡಿಯಲ್ಲಿ ಜಾಕೋಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ, ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ನ್ಯಾಯಪೀಠದ ನ್ಯಾಯಮೂರ್ತಿ ವಿಭಾ ವಿ ಕಂಕನ್‌ವಾಡಿ ಅವರ ಏಕ-ನ್ಯಾಯಾಧೀಶರ ಪೀಠವು, ಮುಲುಕ್‌ಗೆ 50,000 ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ 10 ದಿನಗಳ ಟ್ರಾನ್ಸಿಟ್ ನಿರೀಕಷಣಾ ಜಾಮೀನು ನೀಡಿದೆ. ಪರಿಹಾರಕ್ಕಾಗಿ ಸಮರ್ಥ / ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿದೆ.

ನ್ಯಾಯಮೂರ್ತಿ ಪ್ರಕಾಶ್ ಡಿ ನಾಯಕ್ ಅವರ ಏಕ-ನ್ಯಾಯಾಧೀಶರ ಪೀಠದ ಮುಂದೆ ಮಂಗಳವಾರ ಹಾಜರಾದ ದೆಹಲಿ ಪೊಲೀಸರ ಸೈಬರ್ ಸೆಲ್ ಘಟಕವನ್ನು ಪ್ರತಿನಿಧಿಸಿದ ವಕೀಲ ಹಿತೆನ್ ವೆನೆಗಾಂವ್ಕರ್, ಜಾಕೋಬ್ ಅವರ ಮನವಿಯನ್ನು ಸಮರ್ಥಿಸಿಕೊಳ್ಳುವುದನ್ನು ಪ್ರಶ್ನಿಸಿ, ಅಪರಾಧವನ್ನು ದೆಹಲಿಯಲ್ಲಿ ನೋಂದಾಯಿಸಲಾಗಿದೆ, ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ನ ವ್ಯಾಪ್ತಿಯಲ್ಲಿ ಯಾವುದೇ ಕಾರಣವಿಲ್ಲ ಎಂದು ವಾದಿಸಿದ್ದರು.

ಜಾಕೋಬ್ ಪರವಾಗಿ ಹಾಜರಾದ ಹಿರಿಯ ವಕೀಲ ಮಿಹಿರ್ ದೇಸಾಯಿ, ಸುಮಾರು 6-7 ವರ್ಷಗಳಿಂದ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ತನ್ನ ಕಕ್ಷಿದಾರೆ ಜಾಕೋಬ್ ಬಂಧನದ ಸಾಧ್ಯತೆ ಊಹಿಸಿ, ಫೆಬ್ರವರಿ 12 ರಂದು ತಾತ್ಕಾಲಿಕ ಪೂರ್ವ ಬಂಧನ ಜಾಮೀನು ಕೋರಿದ್ದಾರೆ ಎಂದು ವಿವಿರವಾಗಿ ವಾದ ಮಾಡಿ, ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿನ ಅಗತ್ಯವನ್ನು ಒತ್ತಿ ಹೇಳಿದ್ದರು.


ಇದನ್ನೂ ಓದಿ: ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...