Homeಮುಖಪುಟಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

ಟೂಲ್‌ಕಿಟ್: ನಿಕಿತಾ ಜಾಕೊಬ್‌ಗೆ 3 ವಾರಗಳ ನಿರೀಕ್ಷಣಾ ಜಾಮೀನು ಮಂಜೂರು

- Advertisement -
- Advertisement -

ಬಾಂಬೆ ಹೈಕೋರ್ಟ್ ಇಂದು ಬುಧವಾರ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್‌ರಿಗೆ ಮೂರು ವಾರಗಳ ಟ್ರಾನ್ಸಿಟ್ (ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರಿಂದ) ನಿರೀಕ್ಷಣಾ ಜಾಮೀನು ನೀಡಿತು. ಅವರ ವಿರುದ್ಧ ಗ್ರೆಟಾ ಥನ್‌ಬರ್ಗ್ ಟೂಲ್‌ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು.

ಒಂದು ವೇಳೆ ದೆಹಲಿ ಪೋಲಿಸ್ ಸ್ಪೆಷಲ್ ಸೆಲ್ ದಾಖಲಿಸಿದ ಅಪರಾಧದಲ್ಲಿ ಜಾಕೋಬ್ ಬಂಧಿಸಲ್ಪಟ್ಟರೆ, ಅರ್ಜಿದಾರರನ್ನು (ಜಾಕೋಬ್) 25000 ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿ ಆಧಾರದ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

“ಅರ್ಜಿದಾರರಿಗೆ ಸೂಕ್ತ ಪರಿಹಾರವನ್ನು ಪಡೆಯಲು ಅವರ ಆಯ್ಕೆಯ ಸಮರ್ಥ ನ್ಯಾಯಾಲಯವನ್ನು ಸಂಪರ್ಕಿಸಲು ಅನುವು ಮಾಡಿಕೊಡಲು ಇಂದಿನಿಂದ (ಬುಧವಾರ) ಮೂರು ವಾರಗಳವರೆಗೆ ಈ ರಕ್ಷಣೆಯನ್ನು ನೀಡಲಾಗಿದೆ” ಎಂದು ನ್ಯಾಯಪೀಠ ತಿಳಿಸಿದೆ. ಮಂಗಳವಾರ ಜಾಕೋಬ್ ಅವರ ಮನವಿಯ ಮೇರೆಗೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಯುಕೆ ಮೂಲದ ಎನ್‌ಜಿಒ ‘ಎಕ್ಸ್ಟಿಂಕನ್ ರೆಬೆಲಿಯನ್’ಗೆ ಕೆಲಸ ಮಾಡುವ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಜಾರಿಗೊಳಿಸಿದ್ದ ದೆಹಲಿ ಪೊಲೀಸರು, ರೈತರ ಪ್ರತಿಭಟನೆಯ ಕುರಿತು ಥನ್‌ಬರ್ಗ್ ಟ್ವೀಟ್ ಮಾಡಿದ ಟೂಲ್‌ಕಿಟ್ ಅನ್ನು ಜಾಕೊಬ್ ಮತ್ತು ಶಾಂತನು ರಚಿಸಿದ್ದಾರೆ ಎಂದು ಆರೋಪಿಸಿದ್ದರು. ದೇಶದ್ರೋಹಕ್ಕಾಗಿ ಐಪಿಸಿ ಸೆಕ್ಷನ್ಸ್ 124 (ಎ), ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು 153 (ಎ) ಮತ್ತು ಕ್ರಿಮಿನಲ್ ಪಿತೂರಿಗಾಗಿ 120 (ಬಿ) ಅಡಿಯಲ್ಲಿ ಜಾಕೋಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ, ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ನ್ಯಾಯಪೀಠದ ನ್ಯಾಯಮೂರ್ತಿ ವಿಭಾ ವಿ ಕಂಕನ್‌ವಾಡಿ ಅವರ ಏಕ-ನ್ಯಾಯಾಧೀಶರ ಪೀಠವು, ಮುಲುಕ್‌ಗೆ 50,000 ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ 10 ದಿನಗಳ ಟ್ರಾನ್ಸಿಟ್ ನಿರೀಕಷಣಾ ಜಾಮೀನು ನೀಡಿದೆ. ಪರಿಹಾರಕ್ಕಾಗಿ ಸಮರ್ಥ / ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿದೆ.

ನ್ಯಾಯಮೂರ್ತಿ ಪ್ರಕಾಶ್ ಡಿ ನಾಯಕ್ ಅವರ ಏಕ-ನ್ಯಾಯಾಧೀಶರ ಪೀಠದ ಮುಂದೆ ಮಂಗಳವಾರ ಹಾಜರಾದ ದೆಹಲಿ ಪೊಲೀಸರ ಸೈಬರ್ ಸೆಲ್ ಘಟಕವನ್ನು ಪ್ರತಿನಿಧಿಸಿದ ವಕೀಲ ಹಿತೆನ್ ವೆನೆಗಾಂವ್ಕರ್, ಜಾಕೋಬ್ ಅವರ ಮನವಿಯನ್ನು ಸಮರ್ಥಿಸಿಕೊಳ್ಳುವುದನ್ನು ಪ್ರಶ್ನಿಸಿ, ಅಪರಾಧವನ್ನು ದೆಹಲಿಯಲ್ಲಿ ನೋಂದಾಯಿಸಲಾಗಿದೆ, ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ನ ವ್ಯಾಪ್ತಿಯಲ್ಲಿ ಯಾವುದೇ ಕಾರಣವಿಲ್ಲ ಎಂದು ವಾದಿಸಿದ್ದರು.

ಜಾಕೋಬ್ ಪರವಾಗಿ ಹಾಜರಾದ ಹಿರಿಯ ವಕೀಲ ಮಿಹಿರ್ ದೇಸಾಯಿ, ಸುಮಾರು 6-7 ವರ್ಷಗಳಿಂದ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ತನ್ನ ಕಕ್ಷಿದಾರೆ ಜಾಕೋಬ್ ಬಂಧನದ ಸಾಧ್ಯತೆ ಊಹಿಸಿ, ಫೆಬ್ರವರಿ 12 ರಂದು ತಾತ್ಕಾಲಿಕ ಪೂರ್ವ ಬಂಧನ ಜಾಮೀನು ಕೋರಿದ್ದಾರೆ ಎಂದು ವಿವಿರವಾಗಿ ವಾದ ಮಾಡಿ, ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿನ ಅಗತ್ಯವನ್ನು ಒತ್ತಿ ಹೇಳಿದ್ದರು.


ಇದನ್ನೂ ಓದಿ: ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...