Homeಮುಖಪುಟಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

- Advertisement -
- Advertisement -

ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ದೆಹಲಿ ಮತ್ತು ಗುರಗಾಂವ್ ಕಚೇರಿಗಳಿಗೆ ಭೇಟಿ ನೀಡಿದ ಒಂದು ದಿನದ ನಂತರ, ಬಿಜೆಪಿಯ ಟೂಲ್‌ಕಿಟ್ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕ ಮಂಗಳವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ ಮತ್ತು ಪಕ್ಷದ ವಕ್ತಾರ ಎಂ.ವಿ ರಾಜೀವ್ ಗೌಡ ಅವರಿಗೆ ನೋಟಿಸ್ ನೀಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೋವಿಡ್ ನಿರ್ವಹಣೆ ವಿಷಯ ಬಳಸಿಕೊಂಡು, ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರವನ್ನು ನಿಂದಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ಮುಖಂಡರು ಮಾಡಿದ್ದ ಕೆಲವು ಪೋಸ್ಟ್‌ಗಳನ್ನು ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಕಂಪನಿ ಫ್ಲ್ಯಾಗ್ ಮಾಡಿದ ಕೆಲವು ದಿನಗಳ ನಂತರ, ಟ್ವೀಟರ್‌ಗೆ ಎರಡು ನೋಟಿಸ್ ಕಳಿಸಲಾಗಿತ್ತು. ನಿನ್ನೆ ಸೋಮವಾರ ಈ ನೋಟಿಸ್ ಅನ್ನು ನೇರವಾಗಿ ನೀಡಲು ಟ್ವೀಟರ್ ಕಚೇರಿಗಳಿಗೆ ಹೋದ ದೆಹಲಿ ಪೊಲೀಸರಿಗೆ ಅಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಿಕ್ಕಿರಲಿಲ್ಲ.

ಇದನ್ನೂ ಓದಿ: ನಾಳೆ ಕರಾಳ ದಿನ ಆಚರಣೆ: ರೈತರಿಗೆ ಕಾಂಗ್ರೆಸ್ ಸೇರಿ 12 ಪಕ್ಷಗಳ ಬೆಂಬಲ

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರ ಪೋಸ್ಟ್ ಅನ್ನು ಟ್ವೀಟರ್ ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿದ್ದನ್ನು ಕೇಂದ್ರವು ಆಕ್ಷೇಪಿಸಿತ್ತು. “ಯಾವುದೇ ಎಫ್‌ಐಆರ್ ದಾಖಲಿಸುವ ಮೊದಲು ನಡೆಸುವ ಸಹಜ ಕ್ರಮದಂತೆ ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಈ ವಿಷಯದಲ್ಲಿ ಭಾಗಿಯಾಗಿರುವ ಎಲ್ಲ ಸಂಬಂಧಪಟ್ಟ ಜನರು ಮತ್ತು ಸಂಸ್ಥೆಗಳಿಗೆ ಸಮನ್ಸ್ ನೀಡಿದ್ದೇವೆ. ಟೂಲ್‌ಕಿಟ್‌ನ ಬಗ್ಗೆ ಟ್ವಿಟರ್‌ಗೆ ಯಾವ ಮಾಹಿತಿ ಇದೆ ಎಂದು ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಅವರು ’ಮ್ಯಾನಿಪ್ಯುಲೇಟೆಡ್ ಮೀಡಿಯಾ ’ಲೇಬಲ್ ನೀಡಲು ಏಕೆ ಆಯ್ಕೆ ಮಾಡಿದ್ದಾರೆಂದು ತಿಳಿಯಲು ನಾವು ಟ್ವಿಟರ್‌ಗೆ ಸೂಚನೆ ನೀಡಿದ್ದೇವೆ. ಟ್ವಿಟರ್ ಹೊರತುಪಡಿಸಿ, ದೂರುದಾರರಾದ ಕಾಂಗ್ರೆಸ್ ಪ್ರತಿನಿಧಿಗಳಿಗೆ ನಾವು ನೋಟಿಸ್ ನೀಡಿದ್ದೇವೆ, ಘಟನೆಗಳ ಸಂಪೂರ್ಣ ಅನುಕ್ರಮವನ್ನು ವಿವರಿಸಲು ತನಿಖೆಗೆ ಸಹಕರಿಸಲು ಕೇಳಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ವಿಚಾರಣೆಗಾಗಿ ನಾವು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾರಿಗೆ ನೋಟಿಸ್/ಸಮನ್ಸ್ ನೀಡಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್, ಈ ಕ್ರಮವು “ದಿನ ನಿತ್ಯದ ಪ್ರಕ್ರಿಯೆಯ ಒಂದು ಭಾಗವಾಗಿದೆ” ಎಂದು ಹೇಳಿದ್ದರು.

“ಟ್ವಿಟರ್ ಇಂಡಿಯಾ ಎಂ.ಡಿ ನೀಡಿದ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ನಾವು ತಿಳಿಯಲು ಟ್ವಿಟರ್ ಕಚೇರಿಗೆ ನೇರವಾಗಿ ನೋಟಿಸ್ ನೀಡಲು ಹೋಗಲಾಗಿತ್ತು” ಎಂದು ಅವರು ಹೇಳಿದ್ದರು.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಂಗ್ರೆಸ್ ದೂರಿನಲ್ಲಿ, ಲೆಟರ್‌ಹೆಡ್‌ನಲ್ಲಿನ ವಿಷಯ ಮತ್ತು ಇತರರು ಮಾಡಿದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮತ್ತು ಟ್ವಿಟರ್‌ಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅಧಿಕಾರ ಸಿಕ್ಕಿದರೆ ಆಗುವುದು ಹೀಗೆ. ಅಯೋಗ್ಯರಿಗೆ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಸಾಮಾನ್ಯ ಜ್ಞಾನವೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...