Homeಮುಖಪುಟಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

- Advertisement -
- Advertisement -

ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ದೆಹಲಿ ಮತ್ತು ಗುರಗಾಂವ್ ಕಚೇರಿಗಳಿಗೆ ಭೇಟಿ ನೀಡಿದ ಒಂದು ದಿನದ ನಂತರ, ಬಿಜೆಪಿಯ ಟೂಲ್‌ಕಿಟ್ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕ ಮಂಗಳವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ ಮತ್ತು ಪಕ್ಷದ ವಕ್ತಾರ ಎಂ.ವಿ ರಾಜೀವ್ ಗೌಡ ಅವರಿಗೆ ನೋಟಿಸ್ ನೀಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೋವಿಡ್ ನಿರ್ವಹಣೆ ವಿಷಯ ಬಳಸಿಕೊಂಡು, ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರವನ್ನು ನಿಂದಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ಮುಖಂಡರು ಮಾಡಿದ್ದ ಕೆಲವು ಪೋಸ್ಟ್‌ಗಳನ್ನು ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಕಂಪನಿ ಫ್ಲ್ಯಾಗ್ ಮಾಡಿದ ಕೆಲವು ದಿನಗಳ ನಂತರ, ಟ್ವೀಟರ್‌ಗೆ ಎರಡು ನೋಟಿಸ್ ಕಳಿಸಲಾಗಿತ್ತು. ನಿನ್ನೆ ಸೋಮವಾರ ಈ ನೋಟಿಸ್ ಅನ್ನು ನೇರವಾಗಿ ನೀಡಲು ಟ್ವೀಟರ್ ಕಚೇರಿಗಳಿಗೆ ಹೋದ ದೆಹಲಿ ಪೊಲೀಸರಿಗೆ ಅಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಿಕ್ಕಿರಲಿಲ್ಲ.

ಇದನ್ನೂ ಓದಿ: ನಾಳೆ ಕರಾಳ ದಿನ ಆಚರಣೆ: ರೈತರಿಗೆ ಕಾಂಗ್ರೆಸ್ ಸೇರಿ 12 ಪಕ್ಷಗಳ ಬೆಂಬಲ

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರ ಪೋಸ್ಟ್ ಅನ್ನು ಟ್ವೀಟರ್ ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿದ್ದನ್ನು ಕೇಂದ್ರವು ಆಕ್ಷೇಪಿಸಿತ್ತು. “ಯಾವುದೇ ಎಫ್‌ಐಆರ್ ದಾಖಲಿಸುವ ಮೊದಲು ನಡೆಸುವ ಸಹಜ ಕ್ರಮದಂತೆ ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಈ ವಿಷಯದಲ್ಲಿ ಭಾಗಿಯಾಗಿರುವ ಎಲ್ಲ ಸಂಬಂಧಪಟ್ಟ ಜನರು ಮತ್ತು ಸಂಸ್ಥೆಗಳಿಗೆ ಸಮನ್ಸ್ ನೀಡಿದ್ದೇವೆ. ಟೂಲ್‌ಕಿಟ್‌ನ ಬಗ್ಗೆ ಟ್ವಿಟರ್‌ಗೆ ಯಾವ ಮಾಹಿತಿ ಇದೆ ಎಂದು ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಅವರು ’ಮ್ಯಾನಿಪ್ಯುಲೇಟೆಡ್ ಮೀಡಿಯಾ ’ಲೇಬಲ್ ನೀಡಲು ಏಕೆ ಆಯ್ಕೆ ಮಾಡಿದ್ದಾರೆಂದು ತಿಳಿಯಲು ನಾವು ಟ್ವಿಟರ್‌ಗೆ ಸೂಚನೆ ನೀಡಿದ್ದೇವೆ. ಟ್ವಿಟರ್ ಹೊರತುಪಡಿಸಿ, ದೂರುದಾರರಾದ ಕಾಂಗ್ರೆಸ್ ಪ್ರತಿನಿಧಿಗಳಿಗೆ ನಾವು ನೋಟಿಸ್ ನೀಡಿದ್ದೇವೆ, ಘಟನೆಗಳ ಸಂಪೂರ್ಣ ಅನುಕ್ರಮವನ್ನು ವಿವರಿಸಲು ತನಿಖೆಗೆ ಸಹಕರಿಸಲು ಕೇಳಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ವಿಚಾರಣೆಗಾಗಿ ನಾವು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾರಿಗೆ ನೋಟಿಸ್/ಸಮನ್ಸ್ ನೀಡಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್, ಈ ಕ್ರಮವು “ದಿನ ನಿತ್ಯದ ಪ್ರಕ್ರಿಯೆಯ ಒಂದು ಭಾಗವಾಗಿದೆ” ಎಂದು ಹೇಳಿದ್ದರು.

“ಟ್ವಿಟರ್ ಇಂಡಿಯಾ ಎಂ.ಡಿ ನೀಡಿದ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ನಾವು ತಿಳಿಯಲು ಟ್ವಿಟರ್ ಕಚೇರಿಗೆ ನೇರವಾಗಿ ನೋಟಿಸ್ ನೀಡಲು ಹೋಗಲಾಗಿತ್ತು” ಎಂದು ಅವರು ಹೇಳಿದ್ದರು.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಂಗ್ರೆಸ್ ದೂರಿನಲ್ಲಿ, ಲೆಟರ್‌ಹೆಡ್‌ನಲ್ಲಿನ ವಿಷಯ ಮತ್ತು ಇತರರು ಮಾಡಿದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮತ್ತು ಟ್ವಿಟರ್‌ಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅಧಿಕಾರ ಸಿಕ್ಕಿದರೆ ಆಗುವುದು ಹೀಗೆ. ಅಯೋಗ್ಯರಿಗೆ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಸಾಮಾನ್ಯ ಜ್ಞಾನವೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...