Homeಮುಖಪುಟಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

- Advertisement -
- Advertisement -

ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ದೆಹಲಿ ಮತ್ತು ಗುರಗಾಂವ್ ಕಚೇರಿಗಳಿಗೆ ಭೇಟಿ ನೀಡಿದ ಒಂದು ದಿನದ ನಂತರ, ಬಿಜೆಪಿಯ ಟೂಲ್‌ಕಿಟ್ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕ ಮಂಗಳವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ ಮತ್ತು ಪಕ್ಷದ ವಕ್ತಾರ ಎಂ.ವಿ ರಾಜೀವ್ ಗೌಡ ಅವರಿಗೆ ನೋಟಿಸ್ ನೀಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೋವಿಡ್ ನಿರ್ವಹಣೆ ವಿಷಯ ಬಳಸಿಕೊಂಡು, ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರವನ್ನು ನಿಂದಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ಮುಖಂಡರು ಮಾಡಿದ್ದ ಕೆಲವು ಪೋಸ್ಟ್‌ಗಳನ್ನು ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಕಂಪನಿ ಫ್ಲ್ಯಾಗ್ ಮಾಡಿದ ಕೆಲವು ದಿನಗಳ ನಂತರ, ಟ್ವೀಟರ್‌ಗೆ ಎರಡು ನೋಟಿಸ್ ಕಳಿಸಲಾಗಿತ್ತು. ನಿನ್ನೆ ಸೋಮವಾರ ಈ ನೋಟಿಸ್ ಅನ್ನು ನೇರವಾಗಿ ನೀಡಲು ಟ್ವೀಟರ್ ಕಚೇರಿಗಳಿಗೆ ಹೋದ ದೆಹಲಿ ಪೊಲೀಸರಿಗೆ ಅಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಿಕ್ಕಿರಲಿಲ್ಲ.

ಇದನ್ನೂ ಓದಿ: ನಾಳೆ ಕರಾಳ ದಿನ ಆಚರಣೆ: ರೈತರಿಗೆ ಕಾಂಗ್ರೆಸ್ ಸೇರಿ 12 ಪಕ್ಷಗಳ ಬೆಂಬಲ

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರ ಪೋಸ್ಟ್ ಅನ್ನು ಟ್ವೀಟರ್ ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿದ್ದನ್ನು ಕೇಂದ್ರವು ಆಕ್ಷೇಪಿಸಿತ್ತು. “ಯಾವುದೇ ಎಫ್‌ಐಆರ್ ದಾಖಲಿಸುವ ಮೊದಲು ನಡೆಸುವ ಸಹಜ ಕ್ರಮದಂತೆ ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಈ ವಿಷಯದಲ್ಲಿ ಭಾಗಿಯಾಗಿರುವ ಎಲ್ಲ ಸಂಬಂಧಪಟ್ಟ ಜನರು ಮತ್ತು ಸಂಸ್ಥೆಗಳಿಗೆ ಸಮನ್ಸ್ ನೀಡಿದ್ದೇವೆ. ಟೂಲ್‌ಕಿಟ್‌ನ ಬಗ್ಗೆ ಟ್ವಿಟರ್‌ಗೆ ಯಾವ ಮಾಹಿತಿ ಇದೆ ಎಂದು ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಅವರು ’ಮ್ಯಾನಿಪ್ಯುಲೇಟೆಡ್ ಮೀಡಿಯಾ ’ಲೇಬಲ್ ನೀಡಲು ಏಕೆ ಆಯ್ಕೆ ಮಾಡಿದ್ದಾರೆಂದು ತಿಳಿಯಲು ನಾವು ಟ್ವಿಟರ್‌ಗೆ ಸೂಚನೆ ನೀಡಿದ್ದೇವೆ. ಟ್ವಿಟರ್ ಹೊರತುಪಡಿಸಿ, ದೂರುದಾರರಾದ ಕಾಂಗ್ರೆಸ್ ಪ್ರತಿನಿಧಿಗಳಿಗೆ ನಾವು ನೋಟಿಸ್ ನೀಡಿದ್ದೇವೆ, ಘಟನೆಗಳ ಸಂಪೂರ್ಣ ಅನುಕ್ರಮವನ್ನು ವಿವರಿಸಲು ತನಿಖೆಗೆ ಸಹಕರಿಸಲು ಕೇಳಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ವಿಚಾರಣೆಗಾಗಿ ನಾವು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾರಿಗೆ ನೋಟಿಸ್/ಸಮನ್ಸ್ ನೀಡಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್, ಈ ಕ್ರಮವು “ದಿನ ನಿತ್ಯದ ಪ್ರಕ್ರಿಯೆಯ ಒಂದು ಭಾಗವಾಗಿದೆ” ಎಂದು ಹೇಳಿದ್ದರು.

“ಟ್ವಿಟರ್ ಇಂಡಿಯಾ ಎಂ.ಡಿ ನೀಡಿದ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ನಾವು ತಿಳಿಯಲು ಟ್ವಿಟರ್ ಕಚೇರಿಗೆ ನೇರವಾಗಿ ನೋಟಿಸ್ ನೀಡಲು ಹೋಗಲಾಗಿತ್ತು” ಎಂದು ಅವರು ಹೇಳಿದ್ದರು.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಂಗ್ರೆಸ್ ದೂರಿನಲ್ಲಿ, ಲೆಟರ್‌ಹೆಡ್‌ನಲ್ಲಿನ ವಿಷಯ ಮತ್ತು ಇತರರು ಮಾಡಿದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮತ್ತು ಟ್ವಿಟರ್‌ಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅಧಿಕಾರ ಸಿಕ್ಕಿದರೆ ಆಗುವುದು ಹೀಗೆ. ಅಯೋಗ್ಯರಿಗೆ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಸಾಮಾನ್ಯ ಜ್ಞಾನವೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...