Homeಮುಖಪುಟಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಆದರೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌‌ನಲ್ಲಿ ಅವರನ್ನೇ ಫಾಲೋ ಮಾಡುತ್ತಿದ್ದಾರೆ.

- Advertisement -
- Advertisement -

ಟ್ವಿಟ್ಟರ್‌ ಮಾದರಿಯ ಮೈಕ್ರೋಬ್ಲಾಂಗಿಗ್‌‌ ಸಾಮಾಜಿಕ ಜಾಲತಾಣವಾದ ಟೂಟರ್‌ನಲ್ಲಿ‌ ಪ್ರಧಾನಿ ಮೋದಿಯ ನಕಲಿ ಖಾತೆಯನ್ನು ತೆರೆಯಲಾಗಿದೆ ಎನ್ನಲಾಗಿದ್ದು, ಈ ಖಾತೆಗೆ ಟೂಟರ್ ಅಧಿಕೃತ ಎಂದು ತಿಳಿಸುವ ಬ್ಲೂಟಿಕ್ ನೀಡಿದೆ. ಆದರೆ ಈ ಬಗ್ಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೂಟರ್‌ನಲ್ಲಿ ಇಲ್ಲ ಎಂದ ಸ್ಪಷ್ಟನೆ ನೀಡಿದ್ದಾರೆ.

ಟೂಟರ್‌ ತನ್ನನ್ನು ತಾನು “ಸ್ವದೇಶಿ ಸಾಮಾಜಿಕ ಜಾಲತಾಣ” ಎಂದು ಬಣ್ಣಿಸುತ್ತದೆ. ಅದರಲ್ಲಿ, ಪ್ರಧಾನಿ ನರೇಂದ್ರ ಮೋದಿಯದ್ದೆಂದು ಹೇಳಲಾಗಿರುವ ಬ್ಲೂಟಿಕ್ ಹೊಂದಿರುವ ಖಾತೆಯಿದೆ. ಅದರಲ್ಲಿ ಪ್ರಧಾನಿಯ ಚಿತ್ರ ಹಾಗೂ ಪೋಸ್ಟ್‌ಗಳನ್ನು ಹಂಚಲಾಗಿದೆ. ಆದರೆ, ಟೂಟರ್ ತನ್ನ ಬಳಕೆದಾರರನ್ನು ಹೇಗೆ ಪರಿಶೀಲಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರ ಆರ್ಕೈವ್ ಇಲ್ಲಿದೆ. 

ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವೀಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳ ನಾಯಕರು ಫಾಲೋ ಮಾಡುತ್ತಿದ್ದಾರೆ.

“ಬಿಜೆಪಿಯ ಯಾವುದೇ ರಾಜ್ಯ ಘಟಕಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಟೂಟರ್‌ನಲ್ಲಿ ಇಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಅಮಿತ್ ಮಾಳವಿಯ ಟ್ವೀಟ್‌ಗೆ ಬಿಜೆಪಿಯ ಮತ್ತೊಬ್ಬ ವಕ್ತಾರ ಸುರೇಶ್ ನಖುವಾ ಕೂಡಾ ಧ್ವನಿ ಸೇರಿಸಿದ್ದಾರೆ. “ಅಮಿತ್‌ ಮಾಳವಿಯ ಅವರು ಗಣ್ಯರು ಟೂಟರ್‌‌ನಲ್ಲಿ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಈಗ ಈ ಬಗ್ಗೆ ಟೂಟರ್ ಸ್ಪಷ್ಟಪಡಿಸಬೇಕು. 1) ಯಾರ ಅನುಮತಿಯೊಂದಿಗೆ ಈ ಹ್ಯಾಂಡಲ್‌‌ಗಳನ್ನು ಮಾಡಲಾಗಿದೆ? 2) ಈ ಹ್ಯಾಂಡಲ್‌ಗಳನ್ನು ಹೇಗೆ ಪರಿಶೀಲಿಸಲಾಗಿದೆ? 3) ಈ ಹ್ಯಾಂಡಲ್‌ಗಳಿಗೆ ಯಾರು ಪೋಸ್ಟ್ ಮಾಡುತ್ತಿದ್ದಾರೆ ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ತಮಾಷೆಯೆಂದರೆ ”ಟೂಟರ್ ಜಾಲತಾಣದ”‌ನ ಟ್ವಿಟ್ಟರ್‌‌ ಖಾತೆಯನ್ನು ಪ್ರಧಾನಿ ಕಚೇರಿ, ಪ್ರಧಾನಿಯ ವೈಯಕ್ತಿಕ ಖಾತೆ, ಅಮಿತ್‌ ಶಾ, ಬಿಜೆಪಿಯ ಖಾತೆ, ಸಂಸದ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಕೆಲವು ಬಲಪಂಥಿಯ ವೆಬ್‌ಸೈಟ್‌ಗಳು ಫಾಲೋ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವಿಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯರು ಫಾಲೋ ಮಾಡುತ್ತಿದ್ದಾರೆ. ಅದರ ಆಕೈವ್ ಇಲ್ಲಿದೆ.‌

ಇದರ ಆರ್ಕೈವ್ ಇಲ್ಲಿದೆ.

ಕಳೆದ ವಾರ ಅಮೆರಿಕ ಸಂಸತ್ತಿನ ಮೇಲೆ ದಾಳಿ ನಡೆದು ಅಲ್ಲಿ ಹಿಂಸಾಚಾರವಾದ ನಂತರ ಟ್ವಿಟ್ಟರ್‌ ಗಲಭೆಗೆ ಟ್ರಂಪ್ ಪ್ರಚೋಚನೆ ನೀಡಿದ್ದಾರೆ ಎಂದು ಎಂದು ಹೇಳಿ ಅವರ ಟ್ವಿಟ್ಟರ್‌ ಖಾತೆಯನ್ನು ಶಾಶ್ವತವಾಗಿ ನಿಷೇಧ ಹೇರಿತ್ತು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ಟ್ವಿಟ್ಟರ್‌ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...