Homeಮುಖಪುಟಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಆದರೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌‌ನಲ್ಲಿ ಅವರನ್ನೇ ಫಾಲೋ ಮಾಡುತ್ತಿದ್ದಾರೆ.

- Advertisement -
- Advertisement -

ಟ್ವಿಟ್ಟರ್‌ ಮಾದರಿಯ ಮೈಕ್ರೋಬ್ಲಾಂಗಿಗ್‌‌ ಸಾಮಾಜಿಕ ಜಾಲತಾಣವಾದ ಟೂಟರ್‌ನಲ್ಲಿ‌ ಪ್ರಧಾನಿ ಮೋದಿಯ ನಕಲಿ ಖಾತೆಯನ್ನು ತೆರೆಯಲಾಗಿದೆ ಎನ್ನಲಾಗಿದ್ದು, ಈ ಖಾತೆಗೆ ಟೂಟರ್ ಅಧಿಕೃತ ಎಂದು ತಿಳಿಸುವ ಬ್ಲೂಟಿಕ್ ನೀಡಿದೆ. ಆದರೆ ಈ ಬಗ್ಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೂಟರ್‌ನಲ್ಲಿ ಇಲ್ಲ ಎಂದ ಸ್ಪಷ್ಟನೆ ನೀಡಿದ್ದಾರೆ.

ಟೂಟರ್‌ ತನ್ನನ್ನು ತಾನು “ಸ್ವದೇಶಿ ಸಾಮಾಜಿಕ ಜಾಲತಾಣ” ಎಂದು ಬಣ್ಣಿಸುತ್ತದೆ. ಅದರಲ್ಲಿ, ಪ್ರಧಾನಿ ನರೇಂದ್ರ ಮೋದಿಯದ್ದೆಂದು ಹೇಳಲಾಗಿರುವ ಬ್ಲೂಟಿಕ್ ಹೊಂದಿರುವ ಖಾತೆಯಿದೆ. ಅದರಲ್ಲಿ ಪ್ರಧಾನಿಯ ಚಿತ್ರ ಹಾಗೂ ಪೋಸ್ಟ್‌ಗಳನ್ನು ಹಂಚಲಾಗಿದೆ. ಆದರೆ, ಟೂಟರ್ ತನ್ನ ಬಳಕೆದಾರರನ್ನು ಹೇಗೆ ಪರಿಶೀಲಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರ ಆರ್ಕೈವ್ ಇಲ್ಲಿದೆ. 

ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವೀಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳ ನಾಯಕರು ಫಾಲೋ ಮಾಡುತ್ತಿದ್ದಾರೆ.

“ಬಿಜೆಪಿಯ ಯಾವುದೇ ರಾಜ್ಯ ಘಟಕಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಟೂಟರ್‌ನಲ್ಲಿ ಇಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಅಮಿತ್ ಮಾಳವಿಯ ಟ್ವೀಟ್‌ಗೆ ಬಿಜೆಪಿಯ ಮತ್ತೊಬ್ಬ ವಕ್ತಾರ ಸುರೇಶ್ ನಖುವಾ ಕೂಡಾ ಧ್ವನಿ ಸೇರಿಸಿದ್ದಾರೆ. “ಅಮಿತ್‌ ಮಾಳವಿಯ ಅವರು ಗಣ್ಯರು ಟೂಟರ್‌‌ನಲ್ಲಿ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಈಗ ಈ ಬಗ್ಗೆ ಟೂಟರ್ ಸ್ಪಷ್ಟಪಡಿಸಬೇಕು. 1) ಯಾರ ಅನುಮತಿಯೊಂದಿಗೆ ಈ ಹ್ಯಾಂಡಲ್‌‌ಗಳನ್ನು ಮಾಡಲಾಗಿದೆ? 2) ಈ ಹ್ಯಾಂಡಲ್‌ಗಳನ್ನು ಹೇಗೆ ಪರಿಶೀಲಿಸಲಾಗಿದೆ? 3) ಈ ಹ್ಯಾಂಡಲ್‌ಗಳಿಗೆ ಯಾರು ಪೋಸ್ಟ್ ಮಾಡುತ್ತಿದ್ದಾರೆ ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ತಮಾಷೆಯೆಂದರೆ ”ಟೂಟರ್ ಜಾಲತಾಣದ”‌ನ ಟ್ವಿಟ್ಟರ್‌‌ ಖಾತೆಯನ್ನು ಪ್ರಧಾನಿ ಕಚೇರಿ, ಪ್ರಧಾನಿಯ ವೈಯಕ್ತಿಕ ಖಾತೆ, ಅಮಿತ್‌ ಶಾ, ಬಿಜೆಪಿಯ ಖಾತೆ, ಸಂಸದ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಕೆಲವು ಬಲಪಂಥಿಯ ವೆಬ್‌ಸೈಟ್‌ಗಳು ಫಾಲೋ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವಿಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯರು ಫಾಲೋ ಮಾಡುತ್ತಿದ್ದಾರೆ. ಅದರ ಆಕೈವ್ ಇಲ್ಲಿದೆ.‌

ಇದರ ಆರ್ಕೈವ್ ಇಲ್ಲಿದೆ.

ಕಳೆದ ವಾರ ಅಮೆರಿಕ ಸಂಸತ್ತಿನ ಮೇಲೆ ದಾಳಿ ನಡೆದು ಅಲ್ಲಿ ಹಿಂಸಾಚಾರವಾದ ನಂತರ ಟ್ವಿಟ್ಟರ್‌ ಗಲಭೆಗೆ ಟ್ರಂಪ್ ಪ್ರಚೋಚನೆ ನೀಡಿದ್ದಾರೆ ಎಂದು ಎಂದು ಹೇಳಿ ಅವರ ಟ್ವಿಟ್ಟರ್‌ ಖಾತೆಯನ್ನು ಶಾಶ್ವತವಾಗಿ ನಿಷೇಧ ಹೇರಿತ್ತು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ಟ್ವಿಟ್ಟರ್‌ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...