Homeಮುಖಪುಟಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಆದರೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌‌ನಲ್ಲಿ ಅವರನ್ನೇ ಫಾಲೋ ಮಾಡುತ್ತಿದ್ದಾರೆ.

- Advertisement -
- Advertisement -

ಟ್ವಿಟ್ಟರ್‌ ಮಾದರಿಯ ಮೈಕ್ರೋಬ್ಲಾಂಗಿಗ್‌‌ ಸಾಮಾಜಿಕ ಜಾಲತಾಣವಾದ ಟೂಟರ್‌ನಲ್ಲಿ‌ ಪ್ರಧಾನಿ ಮೋದಿಯ ನಕಲಿ ಖಾತೆಯನ್ನು ತೆರೆಯಲಾಗಿದೆ ಎನ್ನಲಾಗಿದ್ದು, ಈ ಖಾತೆಗೆ ಟೂಟರ್ ಅಧಿಕೃತ ಎಂದು ತಿಳಿಸುವ ಬ್ಲೂಟಿಕ್ ನೀಡಿದೆ. ಆದರೆ ಈ ಬಗ್ಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೂಟರ್‌ನಲ್ಲಿ ಇಲ್ಲ ಎಂದ ಸ್ಪಷ್ಟನೆ ನೀಡಿದ್ದಾರೆ.

ಟೂಟರ್‌ ತನ್ನನ್ನು ತಾನು “ಸ್ವದೇಶಿ ಸಾಮಾಜಿಕ ಜಾಲತಾಣ” ಎಂದು ಬಣ್ಣಿಸುತ್ತದೆ. ಅದರಲ್ಲಿ, ಪ್ರಧಾನಿ ನರೇಂದ್ರ ಮೋದಿಯದ್ದೆಂದು ಹೇಳಲಾಗಿರುವ ಬ್ಲೂಟಿಕ್ ಹೊಂದಿರುವ ಖಾತೆಯಿದೆ. ಅದರಲ್ಲಿ ಪ್ರಧಾನಿಯ ಚಿತ್ರ ಹಾಗೂ ಪೋಸ್ಟ್‌ಗಳನ್ನು ಹಂಚಲಾಗಿದೆ. ಆದರೆ, ಟೂಟರ್ ತನ್ನ ಬಳಕೆದಾರರನ್ನು ಹೇಗೆ ಪರಿಶೀಲಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರ ಆರ್ಕೈವ್ ಇಲ್ಲಿದೆ. 

ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವೀಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳ ನಾಯಕರು ಫಾಲೋ ಮಾಡುತ್ತಿದ್ದಾರೆ.

“ಬಿಜೆಪಿಯ ಯಾವುದೇ ರಾಜ್ಯ ಘಟಕಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಟೂಟರ್‌ನಲ್ಲಿ ಇಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಅಮಿತ್ ಮಾಳವಿಯ ಟ್ವೀಟ್‌ಗೆ ಬಿಜೆಪಿಯ ಮತ್ತೊಬ್ಬ ವಕ್ತಾರ ಸುರೇಶ್ ನಖುವಾ ಕೂಡಾ ಧ್ವನಿ ಸೇರಿಸಿದ್ದಾರೆ. “ಅಮಿತ್‌ ಮಾಳವಿಯ ಅವರು ಗಣ್ಯರು ಟೂಟರ್‌‌ನಲ್ಲಿ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಈಗ ಈ ಬಗ್ಗೆ ಟೂಟರ್ ಸ್ಪಷ್ಟಪಡಿಸಬೇಕು. 1) ಯಾರ ಅನುಮತಿಯೊಂದಿಗೆ ಈ ಹ್ಯಾಂಡಲ್‌‌ಗಳನ್ನು ಮಾಡಲಾಗಿದೆ? 2) ಈ ಹ್ಯಾಂಡಲ್‌ಗಳನ್ನು ಹೇಗೆ ಪರಿಶೀಲಿಸಲಾಗಿದೆ? 3) ಈ ಹ್ಯಾಂಡಲ್‌ಗಳಿಗೆ ಯಾರು ಪೋಸ್ಟ್ ಮಾಡುತ್ತಿದ್ದಾರೆ ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ತಮಾಷೆಯೆಂದರೆ ”ಟೂಟರ್ ಜಾಲತಾಣದ”‌ನ ಟ್ವಿಟ್ಟರ್‌‌ ಖಾತೆಯನ್ನು ಪ್ರಧಾನಿ ಕಚೇರಿ, ಪ್ರಧಾನಿಯ ವೈಯಕ್ತಿಕ ಖಾತೆ, ಅಮಿತ್‌ ಶಾ, ಬಿಜೆಪಿಯ ಖಾತೆ, ಸಂಸದ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಕೆಲವು ಬಲಪಂಥಿಯ ವೆಬ್‌ಸೈಟ್‌ಗಳು ಫಾಲೋ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವಿಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯರು ಫಾಲೋ ಮಾಡುತ್ತಿದ್ದಾರೆ. ಅದರ ಆಕೈವ್ ಇಲ್ಲಿದೆ.‌

ಇದರ ಆರ್ಕೈವ್ ಇಲ್ಲಿದೆ.

ಕಳೆದ ವಾರ ಅಮೆರಿಕ ಸಂಸತ್ತಿನ ಮೇಲೆ ದಾಳಿ ನಡೆದು ಅಲ್ಲಿ ಹಿಂಸಾಚಾರವಾದ ನಂತರ ಟ್ವಿಟ್ಟರ್‌ ಗಲಭೆಗೆ ಟ್ರಂಪ್ ಪ್ರಚೋಚನೆ ನೀಡಿದ್ದಾರೆ ಎಂದು ಎಂದು ಹೇಳಿ ಅವರ ಟ್ವಿಟ್ಟರ್‌ ಖಾತೆಯನ್ನು ಶಾಶ್ವತವಾಗಿ ನಿಷೇಧ ಹೇರಿತ್ತು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ಟ್ವಿಟ್ಟರ್‌ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...