Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...