Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...