Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...