Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...