Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....