Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...