Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...