Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...