Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...