Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...