Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...