Homeನಿಜವೋ ಸುಳ್ಳೋಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

- Advertisement -
- Advertisement -

| ಮುತ್ತುರಾಜ್ |

1. ಐಸಿಸ್ ಸ್ಥಾಪಕ ಬಾಗ್ದಾದಿಯನ್ನು ಹುಡಕಿಕೊಟ್ಟ ನಾಯಿಗೆ ಸನ್ಮಾನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!!

ಹೌದು ಸ್ವತಃ ಡೊನಾಲ್ಡ್ ಟ್ರಂಪ್‌ರವರು ಟ್ವೀಟ್ ಮಾಡಿರುವ ಈ ಫೋಟೊ ನೋಡಿದಾಕ್ಷಣ ಎಲ್ಲರಿಗೂ ಹೌದಲ್ಲವೇ ಎನಿಸುತ್ತದೆ. ಆದರೆ ಸತ್ಯ ಏನೆಂದರೆ ಅದು ಫೋಟೊಶಾಪ್ ಮಾಡಿರುವ ಚಿತ್ರ.

ಅಕ್ಟೋಬರ್ 30ರಂದು ಟ್ರಂಪ್‌ರವರು ಕೇವಲ ಆ ನಾಯಿಯ ಫೋಟೊ ಹಾಕಿ ಟ್ವೀಟ್ ಮಾಡಿದ್ದರು. ನಂತರ ಅದೇ ಫೋಟೊವನ್ನು ಬಳಸಿ ದಿ ಡೈಲಿ ವೈರ್ ಎನ್ನುವ ಮಾಧ್ಯಮ ಸಂಸ್ಥೆಯೂ 2017ರಲ್ಲಿ ಟ್ರಂಪ್‌ರವರು ಯೋಧ ಮೆಕ್‌ಲ್ಹಾನ್ ಎಂಬುವವರಿಗೆ ಸನ್ಮಾನ ಮಾಡುತ್ತಿರುವ ಫೋಟೊದೊಂದಿಗೆ ಸೇರಿಸಿ ಫೋಟೊಶಾಪ್ ಮಾಡಿ ಟ್ವೀಟ್ ಮಾಡಿತ್ತು.

ಅದನ್ನು ನೇರ ಎತ್ತಿಕೊಂಡು ಟ್ರಂಪ್ ತಮ್ಮ ಟ್ವಿಟ್ಟರ್ ಅಕೌಂಟ್‌ನಿಂದ ಷೇರ್ ಮಾಡಿಬಿಟ್ಟರು. ಕನಿಷ್ಟ ಸ್ಪಷ್ಟನೆಯನ್ನು ಸಹ ಅವರು ನೀಡಲಿಲ್ಲ.

ಆ ಫೋಟೊ ಶಾಪ್ ಮಾಡಿದ ಫೋಟೊವನ್ನು ಜನ ನಿಜವೆಂದು ನಂಬಿ ಟ್ರಂಪ್‌ನನ್ನು ಹೊಗಳಿದ್ದೇ ಹೊಗಳಿದ್ದು. ನೋಡಿ ಒಂದು ನಾಯಿಗೂ ನಮ್ಮ ಟ್ರಂಪ್ ಎಷ್ಟು ಮಹತ್ವ ಕೊಡುತ್ತಾರೆ ಎಂದು ಬಹುಫರಾಕ್ ಹೇಳಿದರು. ಟ್ರಂಪ್ ಅದನ್ನು ಆಸ್ವಾದಿಸಿದರು.. ನೋಡಿ ಅಮೇರಿಕದ ದೊಡ್ಡಣ್ಣ ಸಹ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

2. ಟಿಪ್ಪು ಸುಲ್ತಾನನ ಅಸಲಿ ಫೋಟೊ ಯಾವುದು?

ಅಪ್ರತಿಮ ಹೋರಾಟಗಾರ ಟಿಪ್ಪು ಸುಲ್ತಾನ್ ಕಂಡರೆ ಬಿಜೆಪಿಯವರಿಗೆ ಎಣ್ಣೆ ಸೀಗೆಕಾಯಿ ಇದ್ದಹಾಗೆ. ಟಿಪ್ಪು ಮಾಡಿರುವ ಅಸಂಖ್ಯ ಸಾಧನೆಗಳು ಕಣ್ಣಿಗೆ ರಾಚುತ್ತಿದ್ದರು ಅದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸದಾ ಟಿಪ್ಪು ವಿರೋಧಿ ಭಾವನೆ ಮೂಡುವಂತೆ, ಟಿಪ್ಪುವಿನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುತ್ತಿರುತ್ತಾರೆ. ಅದರಲ್ಲಿ ಆತನ ಫೋಟೊದು ಒಂದು.

ಟಿಪ್ಪುವಿನ ಫೋಟೊದ ಜೊತೆಗೆ ಇನ್ನೊಬ್ಬರ ಕಪ್ಪು ಬಣ್ಣದ ಫೋಟೊ ಕೊಲಾಜ್ ಮಾಡಿ ಅವರೇ ಟಿಪ್ಪು ಸುಲ್ತಾನ್ ಎಂದು ಬಿಜೆಪಿಯ ಹಲವಾರು ಸಂಸದರು, ಶಾಸಕರು ದೇಶಾದ್ಯಂತ ಸುಳ್ಳು ಹಬ್ಬಿಸುತ್ತಿದ್ದಾರೆ.

ಆದರೆ ಸತ್ಯ ಏನೆಂದರೆ ಫೋಟೊದಲ್ಲಿರುವ ಕಪ್ಪುವ್ಯಕ್ತಿ ಟಿಪ್ಪುವಲ್ಲ. ಆಫ್ರಿಕಾದ ಗುಲಾಮರ ಮಾರಾಟಗಾರ ಟಿಪ್ಪು ಟಿಪ್ ಎಂಬುವವರ ಫೋಟೊವನ್ನು ಬಳಸಿ ಜನರಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ ಅಷ್ಟೇ. ಗೂಗಲ್ ಸರ್ಚ್ನಲ್ಲಿ ಸಂಪೂರ್ಣ ವಿವರ ಸಿಕ್ಕಿಬಿಡುತ್ತದೆ. ಆದರೇನು ಮಾಡುವುದು ಟಿಪ್ಪು ಅನ್ಯಧರ್ಮೀಯ ಎಂಬ ಏಕೈಕ ಕಾರಣಕ್ಕೆ ಅಪಪ್ರಚಾರಕ್ಕೊಳಗಾಗಬೇಕಿದೆ.

3 ಭಾರತೀಯರ ಮನಕಲಕಿದ ಈ ಪುಟ್ಟ ಬಾಲೆ ರೋಹಿಂಗ್ಯ ಮುಸ್ಲಿಮಳೆ?

ಈಕೆ ರೋಹಿಂಗ್ಯ ಮುಸ್ಲಿ ಹುಡುಗಿ. ಯೋಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಎಡಪಂಥೀಯರು ಮತ್ತು ಜಾತ್ಯಾತೀತವಾದಿಗಳು ದೀಪಾವಳಿಯಂದು ಆಕೆಯನ್ನು ಅಯೋಧ್ಯೆಗೆ ತಂದು ಪಿತೂರಿ ನಡೆಸಿದ್ದಾರೆ ಎಂದೆಲ್ಲಾ ಸುಳ್ಳು ಸಂದೇಶಗಳನ್ನು ಹರಡಲಾಯಿತು.

ಹಿಂದೂ ಧರ್ಮ ಯೋಧ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂದೇಶ 15 ಸಾವಿರ ಬಾರಿ ಷೇರ್ ಆಗಿದೆ.

ಸತ್ಯವೇನೆಂದರೆ ಉತ್ತರಪ್ರದೇಶದ ಸರ್ಕಾರ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮಕ್ಕೆಂದು ಐದೂವರೆ ಲಕ್ಷ ಹಣತೆಗಳನ್ನು ಬೆಳಗಿಸಿತು. ಬಳಸಿದ ಎಣ್ಣೆ 20 ಸಾವಿರ ಲೀಟರುಗಳು. ಈ ಉತ್ಸವಕ್ಕೆ ತಗುಲಿದ ಅಂದಾಜು ವೆಚ್ಚ 133 ಕೋಟಿ ರುಪಾಯಿಗಳು. ಏಳೆಂಟು ವರ್ಷದ ವಯಸ್ಸಿನ ಬಡ ಬಾಲಕಿಯೊಬ್ಬಳು ತನ್ನ ಗುಡಿಸಿಲಿಗೆ ಒಯ್ಯಲು ಆರಿ ಹೋಗಿದ್ದ ಹಣತೆಗಳಿಂದ ಪ್ಲಾಸ್ಟಿಕ್ ಬಾಟಲಿಯೊಂದಕ್ಕೆ ಎಣ್ಣೆ ಬಸಿದುಕೊಳ್ಳುತ್ತಿದ್ದಳು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ನಮ್ಮೆಲ್ಲರ ಆತ್ಮಸಾಕ್ಷಿಯನ್ನು ಪ್ರಶ್ನಿಸುತ್ತಿತ್ತು. ಒಂದು ರೀತಿಯಲ್ಲಿ ಉತ್ತರ ಪ್ರದೇಶ ಸರ್ಕಾರವನ್ನು ಚುಚ್ಚುತ್ತಿತ್ತು. ಹಗಾಗಿ ಸರ್ಕಾರದ ಭಕ್ತರು ಸುಳ್ಳು ಸುದ್ದಿ ಹರಡಿದ್ದಾರೆ ಅಷ್ಟೇ.

ಚಿತ್ರದಲ್ಲಿರುವ ಎರಡನೇ ಹುಡುಗಿ ಮಾತ್ರ ರೋಹಿಂಗ್ಯ ಮುಸ್ಲಿಂಳಾಗಿದ್ದಾರೆ.

4 ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಮಹಾರಾಷ್ಟ್ರ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ನಂತರ ಸಿಎಂ ಆಗುವ ಆಸೆಯಿಂದ ದರ್ಗಾಗೆ ತೆರಳಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ. ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ ಎಂಬ ವಿಡಿಯೋ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಟ್ವಿಟ್ಟರ್‌ನಲ್ಲಿ ನರೇಂದ್ರ ಮೋದಿಯವರು ಸಹ ಫಾಲೋ ಮಾಡುವ ಗೌರವ್ ಪ್ರಧಾನ್ ಎಂಬ ಬಿಜೆಪಿ ನಾಯಕ ಕೂಡ ಇದೇ ಸುಳ್ಳನ್ನು ಹರಡಿದ್ದಾರೆ. ಜೊತೆಗೆ ಬಾಳಾಸಾಹೇಬ್ ಮತ್ತೊಮ್ಮೆ ಸತ್ತರು ಎಂದು ಉದ್ಘಾರ ತೆಗೆದಿದ್ದಾರೆ.

ಆದರೆ ಸತ್ಯ ಏನೆಂದರೆ ಅದು ಹಳೆಯ ವಿಡಿಯೋ. 2017ರಲ್ಲಿ ಆದಿತ್ಯ ಠಾಕ್ರೆ ದರ್ಗಾಗೆ ಭೇಟಿ ವಿಡಿಯೋವನ್ನು ಚುನಾವನಾ ಫಲಿತಾಂಶದ ನಂತರ ಪೋಸ್ಟ್ ಮಾಡಿ ಸುಳ್ಳು ಹರಡುತ್ತಿದ್ದಾರೆ ಅಷ್ಟೇ.

5. ನನ್ನ ಮತ್ತು ಆಕೆಯ ನಡುವೆ ನಡೆದಿರುವುದು ಅತ್ಯಾಚಾರವಲ್ಲ. ಕೊನೆಗೂ ಪವಿತ್ರ ಏಸುವಿನ ಮಾಂತ್ರಿಕ ಅಸ್ತಿತ್ವವನ್ನು ಅನುಭವಿಸುವ ಜ್ಞಾನೋದಯದ ಹೋಳಿ ಆಚರಣೆಯಾಗಿದೆ ಎಂದ ಕ್ರೈಸ್ತ ಪಾದ್ರಿ?

 

ಈ ರೀತಿಯ ಸಂದೇಶವನ್ನು, ಟಿವಿ ವಾಹಿನಿಯ ಚಿತ್ರವೊಂದನ್ನು ಷೇರ್ ಮಾಡಿ ಕ್ರೈಸ್ತರನ್ನು ದೂಷಿಸಲಾಗಿದೆ. ಜೊತೆಗೆ ಮತಾಂತರವನ್ನು ಹಳಿಯಲಾಗಿದೆ. ಟ್ವಿಟ್ಟರ್‌ನಲ್ಲಿ 20 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಮಧುಪೂರ್ಣಿಮ ಕಿಶ್ವರ್ ಎಂಬುವವರು ಸಹ ಇದನ್ನು ಪೋಸ್ಟ್ ಮಾಡಿದ್ದಾರೆ.

ಆದರೆ ಇದನ್ನು ಮೊದಲ ಪೋಸ್ಟ್ ಮಾಡಿದ ‘ದಿ ಅನ್‌ಪೆಯ್ಡ್ ಟೈಮ್ಸ್’ ಎಂಬ ಅಕೌಂಟ್ ತಾನು ಸುಳ್ಳು ಸುದ್ದಿ ಹಬ್ಬಿಸಲು ಇರುವ ಅಕೌಂಟ್ ಎಂದು ಘೋಷಿಸಿಕೊಂಡಿದೆ. ಅದನ್ನು ಇವರೆಲ್ಲಾ ನಿಜ ಎಂದು  ನಂಬಿ ಷೇರ್ ಮಾಡಿದ್ದಾರೆ. ಇಡೀ ಪ್ರಕರಣೆ ಕಲ್ಪಿತವಾದುದ್ದೇ ವಿನಃ ಸತ್ಯವಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...